ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯವಾಗುತ್ತಿಲ್ಲ ಸೆಕ್ಷನ್ 377
ಶ್ರೀನಗರ, ಸೆಪ್ಟೆಂಬರ್ 8: ಸೆಕ್ಷನ್ 377ನಲ್ಲಿನ ನಿರ್ಬಂಧಗಳನ್ನು ತೆರವುಗೊಳಿಸುವ ಮೂಲಕ ಸುಪ್ರೀಂಕೋರ್ಟ್ ಎಲ್ಜಿಬಿಟಿ ಸಮುದಾಯಕ್ಕೆ ನೆಮ್ಮದಿ ನೀಡಿದೆ. ಆದರೆ, ಈ ತೀರ್ಪು ಜಮ್ಮು ಮತ್ತು ಕಾಶ್ಮೀರದಲ್ಲಿ ಅನ್ವಯವಾಗುವುದಿಲ್ಲ.
ಸುಪ್ರೀಂಕೋರ್ಟ್ನ ತೀರ್ಪು ಅನ್ವಯವಾಗಬೇಕು ಎಂದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಸಂಬಂಧ ನಿರ್ಣಯ ಅಂಗೀಕಾರವಾಗಬೇಕು.

ಏಕೆಂದರೆ ಸೆಕ್ಷನ್ 377 ಇಂಡಿಯನ್ ಪೀನಲ್ ಕೋಡ್ ಅಡಿಯಲ್ಲಿ ಇದ್ದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯವು ರಣಬೀರ್ ಪೀನಲ್ ಕೋಡ್ ಅಡಿಯಲ್ಲಿದೆ.
ಆರ್ಪಿಎಸ್ ಸೆಕ್ಷನ್ 377 ಅಸ್ವಾಭಾವಿಕ ಅಪರಾಧಗಳ ಕುರಿತದ್ದಾಗಿದೆ. ನಿಸರ್ಗದ ನಿಯಮಗಳಿಗೆ ವಿರುದ್ಧವಾಗಿ ಯಾವುದೇ ಪುರುಷ, ಮಹಿಳೆ ಅಥವಾ ಪ್ರಾಣಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವವರನ್ನು ಜೀವಾವಧಿ ಶಿಕ್ಷೆಗೆ ಒಳಪಡಿಸಬಹುದು ಅಥವಾ 10 ವರ್ಷದವರೆಗೆ ವಿಸ್ತರಿಸಬಹುದಾದ ಒಂದು ನಿಗದಿತ ಅವಧಿವರೆಗೆ ಜೈಲು ಶಿಕ್ಷೆಗೆ ಒಳಪಡಿಸಬಹುದಾಗಿದೆ.
ಸುಪ್ರೀಂಕೋರ್ಟ್ ಆದೇಶ ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯ ಆಗದೆ ಇದ್ದರೂ, ಕಾನೂನು ತಜ್ಞರು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನ 1995ರ ತೀರ್ಪನ್ನು ಪರಾಮರ್ಶಿಸುತ್ತಾರೆ. ಅದರ ಪ್ರಕಾರ, ಇಂಡಿಯನ್ ಪೀನಲ್ ಕೋಡ್ನಲ್ಲಿನ ಯಾವುದೇ ನಿಯಮವನ್ನು ಸಂವಿಧಾನದ ಉಲ್ಲಂಘನೆಯಾದ ನೆಲೆಗಟ್ಟಿನಲ್ಲಿ ರದ್ದುಗೊಂಡರೆ, ಅದಕ್ಕೆ ಸಂಬಂಧಿಸಿದ ಆರ್ಪಿಸಿಯ ಸೆಕ್ಷನ್ ಕೂಡ ರದ್ದುಗೊಳ್ಳುತ್ತದೆ.
ಆದರೆ, ಕಾನೂನಿನ ಜಟಿಲತೆಗಳು ಒಂದೇ ರೀತಿಯದ್ದಾಗಿದ್ದರೆ ಮತ್ತು ಸಂಹಿತೆ ವಿಭಿನ್ನವಾಗಿದ್ದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬೇಕಾಗುತ್ತದೆ. ಇದನ್ನು ಜಮ್ಮು ಮತ್ತು ಕಾಶ್ಮೀರ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಯಾವುದಾದರೂ ವ್ಯಕ್ತಿಯ ಹೊರತು ಇನ್ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ.
ಸೆಕ್ಷನ್ 377 ಮತ್ತು ಆರ್ಪಿಸಿ ಸೆಕ್ಷನ್ಗಳೆರಡೂ ಒಂದೇ ರೀತಿಯದ್ದು ಎಂದು ಪರಿಗಣಿಸಿ ಹೈಕೋರ್ಟ್ ತೀರ್ಪು ನೀಡಲಿದೆಯೇ ಎನ್ನುವುದು ಮತ್ತೊಂದು ಗೊಂದಲವಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications