ಉಗ್ರರ ವಶದಲ್ಲಿರುವ ಶಿಕ್ಷಕರ ಬಿಡುಗಡೆ ಯಾವಾಗ?
ಬೆಂಗಳೂರು, ಆಗಸ್ಟ್ 3 : ಐಸ್ಎಸ್ಐಎಸ್ ಉಗ್ರರು ಅಪಹರಣ ಮಾಡಿದ್ದ ಭಾರತೀಯ ಪೈಕಿ ಇಬ್ಬರು ಕನ್ನಡಿಗರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ಇಬ್ಬರು ಶಿಕ್ಷಕರು ಉಗ್ರರ ವಶದಲ್ಲಿದ್ದು, ಶೀಘ್ರದಲ್ಲೇ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ.
ತೆಲಂಗಾಣ ಮತ್ತು ಆಂಧ್ರಪ್ರದೇಶದ ಬಲರಾಮ್ ಹಾಗೂ ಗೋಪಿಕೃಷ್ಣ ಅವರು ಇನ್ನೂ ಉಗ್ರರ ವಶದಲ್ಲಿದ್ದಾರೆ. ಇಬ್ಬರು ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳುತ್ತಿದೆ. ಆದರೆ, ಯಾವಾಗ ಬಿಡುಗಡೆಯಾಗಲಿದ್ದಾರೆ? ಎಂಬ ಮಾಹಿತಿ ಮಾತ್ರ ಲಭ್ಯವಾಗಿಲ್ಲ. [ಉಗ್ರರ ವಶದಿಂದ ಇಬ್ಬರು ಕನ್ನಡಿಗರ ರಕ್ಷಣೆ]

ಕೋಲಾರದ ವಿಜಯ್ ಕುಮಾರ್, ರಾಯಚೂರಿನ ಲಕ್ಷ್ಮೀಕಾಂತ್ ಮತ್ತು ತೆಲಂಗಾಣ ಮತ್ತು ಆಂಧ್ರಪ್ರದೇಶದ ಇಬ್ಬರು ಸೇರಿ ನಾಲ್ವರು ಶಿಕ್ಷಕರನ್ನು ಉಗ್ರರು ಶುಕ್ರವಾರ ಅಪಹರಿಸಿದ್ದರು. ಇವರಲ್ಲಿ ಕರ್ನಾಟಕದವರನ್ನು ಅಂದು ಸಂಜೆಯೇ ಬಿಡುಗಡೆ ಮಾಡಲಾಗಿದೆ. ಆದರೆ, ಇನ್ನಿಬ್ಬರು ಮಾತ್ರ ಇನ್ನು ಉಗ್ರರ ವಶದಲ್ಲಿದ್ದಾರೆ.[ನಾಲ್ವರು ಭಾರತೀಯರ ಅಪಹರಣ]
ಎರಡು ವಾಹನದಲ್ಲಿ ಅಪಹರಿಸಿದ್ದರು : ಐಎಸ್ಐಎಸ್ ಉಗ್ರರು ಎರಡು ಪ್ರತ್ಯೇಕ ವಾಹನಗಳಲ್ಲಿ ನಾಲ್ವರು ಶಿಕ್ಷಕರನ್ನು ಅಪಹರಣ ಮಾಡಿದ್ದರು. ಕರ್ನಾಟಕದ ಇಬ್ಬರು ಇದ್ದ ವಾಹನ ಬಲರಾಮ್ ಹಾಗೂ ಗೋಪಿಕೃಷ್ಣ ಅವರು ಇದ್ದ ಕಾರಿಗಿಂತ ಮುಂದಿತ್ತು. ಉಗ್ರರು ಅವರನ್ನು ಬೇರೆ-ಬೇರೆ ಪ್ರದೇಶಗಳಲ್ಲಿ ಒತ್ತಾಯಾಳಾಗಿ ಇಟ್ಟುಕೊಂಡಿದ್ದಾರೆ.
ಕರ್ನಾಟಕ ಇಬ್ಬರನ್ನು ಕತ್ತಲೆ ಕೋಣೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಕೆಲವು ಗಂಟೆಗಳ ಬಳಿಕ ಅವರ ಬಳಿ ಬಂದ ಉಗ್ರ ಅವರ ವಿವರ ಪಡೆದಿದ್ದಾನೆ. ಅವರು ಶಿಕ್ಷಕರು ಎಂದು ಹೇಳಿದ ತಕ್ಷಣ ಅವರನ್ನು ಬಿಡುಗಡೆ ಮಾಡಲಾಗಿದೆ.
ಎಲ್ಲಿದ್ದಾರೆ ಇನ್ನಿಬ್ಬರು : ಉಗ್ರರು ಅಪಹರಣ ಮಾಡಿರುವ ಬಲರಾಮ್ ಹಾಗೂ ಗೋಪಿಕೃಷ್ಣ ಅವರು ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. ಅವರನ್ನು ಬಿಡುಗಡೆಗೊಳಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದೆ. ಅಪಹರಣ ಮಾಡಿರುವ ಉಗ್ರರು ಇದುವರೆಗೂ ಯಾವುದೇ ಬೇಡಿಕೆಯನ್ನು ಮುಂದಿಟ್ಟಿಲ್ಲ. ಕುಟುಂಬದವರು ಇಬ್ಬರು ಸುರಕ್ಷಿತವಾಗಿ ಮರಳಿ ಬರಲಿ ಎಂದು ಪ್ರಾರ್ಥನೆ ಮಾಡುತ್ತಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications