ಇನ್ನು ಮುಂದೆ ನಕಲಿ ಮತದಾನಕ್ಕೆ ಅವಕಾಶವೇ ಇಲ್ಲ
ನವದೆಹಲಿ, ಮಾ. 23: ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಸೇರ್ಪಡೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನಕಲಿ ಮತದಾನಕ್ಕೆ ಅವಕಾಶ ಸಾಧ್ಯವೇ ಇಲ್ಲ ಎಂದು ಚುನಾವಣಾ ಆಯುಕ್ತ ಮುಖ್ಯಸ್ಥ ಎಚ್.ಎಸ್. ಬ್ರಹ್ಮ ತಿಳಿಸಿದ್ದಾರೆ.
ಮತದಾರ ಚೀಟಿ ಜತೆಗೆ ಆಧಾರ್ ಕಾರ್ಡ್ ಸೇರ್ಪಡೆ ಕಾರ್ಯ ನಡೆಯುತ್ತಿದೆ. ಜನರೇ ಸ್ವಯಂ ಪ್ರೇರಿತರಾಗಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಈ ಪ್ರಕ್ರಿಯೆ ದೇಶವನ್ನು ಪ್ರಪಂಚದಲ್ಲಿಯೇ ಮಾಹಿತಿಯಾಧಾರಿತ ಬಯೋಮೆಟ್ರಿಕ್ ಹೊಂದಿರುವ ಮೊದಲ ರಾಷ್ಟ್ರ ಎಂಬ ಹಿರಿಮೆ ತೆಗೆದುಕೊಂಡು ಹೋಗಲಿದೆ ಎಂದು ತಿಳಿಸಿದ್ದಾರೆ.[ಆಧಾರ್ ಕಡ್ಡಾಯವಲ್ಲ: ಸುಪ್ರೀಂ ಪುನರುಚ್ಚಾರ]

ಮುಂಬರುವ ಆಗಸ್ಟ್ ತಿಂಗಳೊಳಗೇ ಭಾರತದ 25-30 ಕೋಟಿ ಜನರಿಗೆ ಆಧಾರ್ ಸಂಖ್ಯೆಯನ್ನು ನೀಡಲಾಗುತ್ತದೆ. ನಂತರ ಈ ವರ್ಷದ ಅಂತ್ಯದಲ್ಲಿ ಆಧಾರ್ ಕಾರ್ಡ್ ಜೊತೆಗೆ ಮತದಾರರ ಫೋಟೋ ಹಾಗೂ ಗುರುತಿನ ಚೀಟಿಯನ್ನು ಸೇರ್ಪಡೆಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಆಧಾರ್ ಕಾರ್ಡ್ ಮಾಡಿಸಿಕೊಳ್ಳಲೇಬೇಕು ಎಂದು ಜನರ ಮೇಲೆ ನಾವು ಒತ್ತಡ ಹೇರುತ್ತಿಲ್ಲ. ಪ್ರತಿದಿನ ಲಕ್ಷಾಂತರ ಮಂದಿ ಸ್ವತಃ ತಾವೇ ಬಂದು ಆಧಾರ್ ಕಾರ್ಡ್ ಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇದು ಒಂದು ಬಗೆಯ ಉತ್ತಮ ಬೆಳವಣಿಗೆಯೇ ಆಗಿದೆ ಎಂದು ಹೇಳಿದ್ದಾರೆ.[ಆಧಾರ್ ಕಾರ್ಡ್ ಕಳ್ಕೊಂಡ್ರೆ, ಆನ್ ಲೈನ್ ನಲ್ಲೇ ಪಡ್ಕೊಳ್ಳಿ]
10 ವರ್ಷಗಳಿಂದ ಚುನಾವಣೆಯಲ್ಲಿ ಭಾಗವಹಿಸದ ಪಕ್ಷಗಳ ನೋಂದಣಿಗಳನ್ನು ರದ್ದು ಮಾಡುವುದರ ಕುರಿತು ಚುನಾವಣಾ ಆಯೋಗ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications