ಕಟ್ಟಡದಿಂದ ಜಿಗಿದು ಐಎಎಸ್ ದಂಪತಿ ಪುತ್ರಿ ಆತ್ಮಹತ್ಯೆ; ಕಾರಣವೇನು?
ಐಎಎಸ್ ದಂಪತಿಯ ಮಗಳು 10ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ದಕ್ಷಿಣ ಮುಂಬೈನ ಮಂತ್ರಲಯದ ಬಳ ಸರ್ಕಾರಿ ವಸತಿ ಕಟ್ಟಡದಲ್ಲಿ ಘಟನೆ ನಡೆದಿದೆ.
ಹರಿಯಾಣದ ಸೋನಿಪತ್ನಲ್ಲಿ ಎಲ್ಎಲ್ಬಿ ವ್ಯಾಸಂಗ ಮಾಡುತ್ತಿರುವ ಕಾನೂನು ವಿದ್ಯಾರ್ಥಿನಿ 27 ವರ್ಷದ ಲಿಪಿ ರಸ್ತೋಗಿ ಮುಂಜಾನೆ 4 ಗಂಟೆಗೆ ಮಂತ್ರಾಲಯದ ಬಳಿಯ ಐಎಎಸ್ ಅಧಿಕಾರಿಗಳ ಸರ್ಕಾರಿ ವಸತಿಗೃಹದಲ್ಲಿ ಎಲ್ಲರೂ ಮಲಗಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಆವರಣದ ಬಳಿ ನಿಲ್ಲಿಸಿದ್ದ ಮೋಟಾರ್ಬೈಕ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಲಿಪಿ ರಸ್ತೋಗಿ ಬಿದ್ದಿರುವುದನ್ನು ಕಂಡು ಕಟ್ಟಡದಲ್ಲಿ ನಿಯೋಜಿಸಲಾದ ಸಿಬ್ಬಂದಿ ಯುವತಿ ಅವರ ಕುಟುಂಬಕ್ಕೆ ಮಾಹಿತಿ ನೀಡಿದರು, ನಂತರ ಅವರನ್ನು ಜಿಟಿ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಒತ್ತಡದಿಂದ ಬೇಸತ್ತು ಆತ್ಮಹತ್ಯೆ?
ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇದು ಆತ್ಮಹತ್ಯೆ ಎಂದು ನಂಬಲು ಲಿಪಿ ಕೋಣೆಯಲ್ಲಿ ಪತ್ರವೊಂದ ಸಿಕ್ಕಿದೆ.
ಸಿಕ್ಕಿರುವ ಪತ್ರದಲ್ಲಿ ಲಿಪಿ ತನ್ನ ನಿರ್ಧಾರಕ್ಕೆ ಯಾರೂ ಜವಾಬ್ದಾರರಲ್ಲ ಎಂದು ಹೇಳಿದ್ದಾರೆ. ಕಫೆ ಪರೇಡ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಲಿಪಿ ತನ್ನ ಶೈಕ್ಷಣಿಕ ಸಾಧನೆಗೆ ಸಂಬಂಧಿಸಿದಂತೆ ಅಪಾರ ಒತ್ತಡದಲ್ಲಿದ್ದು, ಆಕೆಯ ಸಂಕಷ್ಟಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಲಿಪಿ ಅವರ ತಂದೆ ವಿಕಾಸ್ ರಸ್ತೋಗಿ ಅವರು ಮಹಾರಾಷ್ಟ್ರದ ಉನ್ನ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಅವರ ತಾಯಿ ರಾಧಿಕಾ ರಸ್ತೋಗಿ ಅವರು ರಾಜ್ಯ ಸರ್ಕಾರದಲ್ಲಿ ಹಿರಿಯ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಘಟನೆಯು 2017 ರಲ್ಲಿ ಮಿಲಿಂದ್ ಮತ್ತು ಮನಿಷಾ ಮೈಸ್ಕರ್ ಅವರ 18 ವರ್ಷದ ಮಗ ಮುಂಬೈನಲ್ಲಿ ಎತ್ತರದ ಮಹಡಿಯಿಂದ ಜಿಗಿದ ಘಟನೆಯನ್ನು ನೆನಪಿಸಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications