Liquor policy case: ದೆಹಲಿ ಸಂಪುಟದಿಂದ ಹೊರಬಂದ ಬಂಧಿತ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್!
ಸಿಬಿಐ ಬಂಧಿಸಿರುವ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ನವದೆಹಲಿ ಫೆಬ್ರವರಿ 28: ಸಿಬಿಐ ಬಂಧಿಸಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರು ಇಂದು ದೆಹಲಿಯ ಸಂಪುಟದಿಂದ ಹೊರಬಂದಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ಹೊಸ ಸಚಿವರನ್ನು ಕರೆತರಲು ಶೀಘ್ರದಲ್ಲೇ ಸಂಪುಟ ರಚನೆಯನ್ನು ಕೈಗೊಳ್ಳಬಹುದು.
10 ತಿಂಗಳಿನಿಂದ ಜೈಲಿನಲ್ಲಿರುವ ಸತ್ಯೇಂದ್ರ ಜೈನ್ ಅವರ ಆರೋಗ್ಯ ಖಾತೆ ಸೇರಿದಂತೆ 18 ಸಚಿವಾಲಯಗಳ ಉಸ್ತುವಾರಿಯನ್ನು ಮನೀಶ್ ಸಿಸೋಡಿಯಾ ನಿರ್ವಹಿಸಿದ್ದಾರೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಭಾನುವಾರ ಬಂಧಿಸಲಾಯಿತು.

ಬಂಧಿತ ನಾಯಕರು ಇನ್ನೂ ದೆಹಲಿ ಸರ್ಕಾರದಲ್ಲಿ ಏಕೆ ಇದ್ದಾರೆ ಎಂದು ಬಿಜೆಪಿ ಪ್ರಶ್ನಿಸಿದ ಬೆನ್ನಲ್ಲೇ ರಾಜೀನಾಮೆ ನೀಡಲಾಗಿದೆ. ಕೇಜ್ರಿವಾಲ್ ಸೇರಿದಂತೆ ದೆಹಲಿ ಸಂಪುಟದಲ್ಲಿ ಈಗ ಐವರು ಸಚಿವರಿದ್ದಾರೆ.
ಗಮನಾರ್ಹವಾಗಿ, ಮನೀಶ್ ಸಿಸೋಡಿಯಾ ಅವರು ಶಿಕ್ಷಣ, ಹಣಕಾಸು, ಯೋಜನೆ, ಭೂಮಿ ಮತ್ತು ಕಟ್ಟಡ, ಸೇವೆಗಳು, ಪ್ರವಾಸೋದ್ಯಮ, ಕಲೆ-ಸಂಸ್ಕೃತಿ ಮತ್ತು ಭಾಷೆ, ಜಾಗೃತಿ, ಕಾರ್ಮಿಕ ಮತ್ತು ಉದ್ಯೋಗ, ಆರೋಗ್ಯ, ಕೈಗಾರಿಕೆ, ವಿದ್ಯುತ್, ಗೃಹ, ನಗರಾಭಿವೃದ್ಧಿ, ನೀರಾವರಿ ಜೊತೆಗೆ ಲೋಕೋಪಯೋಗಿ ಇಲಾಖೆಯನ್ನು ಹೊಂದಿದ್ದಾರೆ. ಪ್ರವಾಹ ನಿಯಂತ್ರಣ ಮತ್ತು ಜಲ ಇಲಾಖೆ ಸೇರಿದಂತೆ ಒಟ್ಟು 18 ಸಚಿವಾಲಯಗಳನ್ನು ಅವರು ನಿರ್ವಹಿಸುತ್ತಿದ್ದರು.

ಅಂತೆಯೇ ಎಎಪಿ ಪಕ್ಷದಲ್ಲಿ ಸಿಸೋಡಿಯಾ ಕೇಜ್ರಿವಾಲ್ ಬಳಿಕ ಎರಡನೇ ಹಂತದ ಪ್ರಮುಖ ನಾಯಕರಾಗಿದ್ದು, ಸಚಿವ ಸತ್ಯೇಂದ್ರ ಜೈನ್ ಈಗಾಗಲೇ ಜೈಲಿನಲ್ಲಿದ್ದು, ಅಂದಿನಿಂದ ಸತ್ಯೇಂದ್ರ ಜೈನ್ ಅವರ ಇಲಾಖೆಗಳ ಕೆಲಸವನ್ನೂ ಸಿಸೋಡಿಯಾ ನಿರ್ವಹಿಸುತ್ತಿದ್ದರು. ಇದೀಗ ಅವರ ಬಂಧನದ ಹಿನ್ನಲೆಯಲ್ಲಿ ಅವರ ಸ್ಥಾನಗಳು ಖಾಲಿ ಉಳಿದಿವೆ.












Click it and Unblock the Notifications