ಮದ್ಯ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಆರೋಪಿ ನಂ. 1 ; 5 ದಿನಗಳ ಕಸ್ಟಡಿ ಕೋರಿದ ಸಿಬಿಐ!
ಹೊಸ ಮದ್ಯ ನೀತಿಯಡಿ ವ್ಯಾಪಾರಿಗಳಿಗೆ ಪರನವಾನಿಗೆ ನೀಡಲು ದೆಹಲಿ ಸರ್ಕಾರ ಲಂಚವನ್ನು ಪಡೆದಿದೆ ಎಂದು ಆರೋಪದ ಮೇಲೆ ಡಿಸಿಎಂ ಮನೀಶ್ ಸಿಸೋಡಿಯ ಅವರನ್ನು ಬಂಧಿಸಲಾಗಿದೆ.
ನವದೆಹಲಿ ಫೆಬ್ರವರಿ 27: ಕಳೆದ ದಿನ ಮದ್ಯದ ಹಗರಣದಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಅವರನ್ನು ಬಂಧಿಸಲಾಗಿದ್ದು, ಆರೋಪಪಟ್ಟಿಯಲ್ಲಿ ಅವರನ್ನು ಆರೋಪಿ ನಂಬರ್ ಒನ್ ಎಂದು ಹೆಸರಿಸಲಾಗಿದೆ. ಕೇಂದ್ರ ತನಿಖಾ ದಳ ಮನೀಶ್ ಸಿಸೋಡಿಯಾ ಅವರನ್ನು ಐದು ದಿನಗಳ ಕಾಲ ಕಸ್ಟಡಿಗೆ ಕೋರಿದೆ.
ಡಿಸಿಎಂ ಮನೀಶ್ ಸಿಸೋಡಿಯಾ ಬಂಧನ ದೆಹಲಿಯಲ್ಲಿ ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಹೊಸ ಮದ್ಯನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಆರೋಪದ ಮೇಲೆ ಕಳೆದ ದಿನ (ಫೆಬ್ರವರಿ 26) ಸಿಬಿಐ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ. ಆಮ್ ಆದ್ಮಿ ಪಕ್ಷದ ನಾಯಕ, ಆರೋಗ್ಯ ಸಚಿವ ಸತ್ಯಂದ್ರ ಜೈನ್ ಬಳಿಕ ಸದ್ಯ ಡಿಸೆಂ ಮನೀಶ್ ಸಿಸೋಡಿಯಾ ಬಂಧನ ಮಾಡಿರುವುದು ಭಾರೀ ವಿರೋಧಕ್ಕೆ ಕಾರಣವಾಗಿದೆ. ದೇಶದ ಹಲವು ರಾಜ್ಯಗಳಲ್ಲಿ ಮನೀಶ್ ಸಿಸೋಡಿಯಾ ಬಂಧನ ವಿರುದ್ಧ ಕಾರ್ಯಕರ್ತರ ಪ್ರತಿಭಟನೆ ಭುಗಿಲೆದ್ದಿದೆ.

ಹೊಸ ಮದ್ಯ ನೀತಿಯಡಿ ವ್ಯಾಪಾರಿಗಳಿಗೆ ಪರನವಾನಿಗೆ ನೀಡಲು ದೆಹಲಿ ಸರ್ಕಾರ ಲಂಚವನ್ನು ಪಡೆದಿದೆ ಎಂದು ಆರೋಪಿಸಲಾಗಿದ್ದು, ಖಜಾನೆಗೆ ನಷ್ಟ, ಕ್ರಿಮಿನಲ್ ಪಿತೂರಿ, ರಾಜ್ಯಕ್ಕೆ ವಂಚನೆ ಮತ್ತು ಸಾಕ್ಷ್ಯ ನಾಶಕ್ಕೆ ಸಂಬಂಧಿಸಿದಂತ ಆರೋಪದ ಮೇಲೆ ಮನೀಶ್ ಸಿಸೋಡಿಯಾ ಅವರನ್ನು ಭಾನುವಾರ ಬಂಧಿಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
ಈ ಘಟನೆಯ ಇತ್ತೀಚಿನ ಮುಖ್ಯಾಂಶಗಳು ಇಲ್ಲಿವೆ:
*ಮದ್ಯದ ಹಗರಣದ ಕುರಿತು ತಮ್ಮ ಪ್ರಶ್ನೆಗಳಿಗೆ ಮನೀಶ್ ಸಿಸೋಡಿಯಾ ತಪ್ಪಿಸಿಕೊಳ್ಳುವ ಉತ್ತರಗಳನ್ನು ನೀಡುತ್ತಿದ್ದಾರೆ ಎಂದು ಕೇಂದ್ರ ತನಿಖಾ ದಳ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ. ಮೊದಲ ಕರಡಿನ ಭಾಗವಾಗಿರದ ಮದ್ಯ ನೀತಿಯಲ್ಲಿ ಕನಿಷ್ಠ ಆರು ವಿವಾದಾತ್ಮಕ ನಿಬಂಧನೆಗಳನ್ನು ವಿವರಿಸಲು ಅವರು ವಿಫಲರಾಗಿದ್ದಾರೆ. 100 ಕೋಟಿಯಷ್ಟು ಕಿಕ್ಬ್ಯಾಕ್ಗೆ ಬದಲಾಗಿ ಮದ್ಯದ ಲಾಬಿಯ ಆಜ್ಞೆಯ ಮೇರೆಗೆ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಸಂಸ್ಥೆ ವಾದಿಸಿದೆ.

*ಸಿಸೋಡಿಯಾ ಅವರ ಕಂಪ್ಯೂಟರ್ನಿಂದ ಕರಡು ಟಿಪ್ಪಣಿಯನ್ನು ಮರುಪಡೆಯಲಾಗಿದೆ ಎಂದು ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿದೆ. ಇದು ಲಾಭಾಂಶದ ಷರತ್ತುಗಳನ್ನು ಶೇಕಡಾ 5 ರಿಂದ 12 ಕ್ಕೆ ಬದಲಾಯಿಸಲಾಗಿದೆ ಎಂದು ತೋರಿಸುತ್ತದೆ. ಸಿಸೋಡಿಯಾ ಅವರು ಕರಡು ಟಿಪ್ಪಣಿಯನ್ನು ಅಬಕಾರಿ ಆಯುಕ್ತರಿಗೆ ನೀಡಿದರು ಮತ್ತು ಕರಡು ಟಿಪ್ಪಣಿಯಿಂದ ಕಾನೂನು ತಜ್ಞರ ಅಭಿಪ್ರಾಯವನ್ನು ತೆಗೆದುಹಾಕಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಸಂಸ್ಥೆ ಆರೋಪಿಸಿದೆ.
*ಈ ಮಧ್ಯೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ದೆಹಲಿ, ಬೆಂಗಳೂರು, ಚಂಡೀಗಢ, ಭೋಪಾಲ್ ಮತ್ತು ಇತರ ಹಲವು ನಗರಗಳಲ್ಲಿ ಬೀದಿಗಿಳಿದು ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯ ಬಳಿ ಪೊಲೀಸರು ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

*ಎಎಪಿ ಪ್ರತಿಭಟನಾಕಾರರು ಡಿಡಿಯು ಮಾರ್ಗದಲ್ಲಿರುವ ಬಿಜೆಪಿ ಕಚೇರಿಯತ್ತ ಮೆರವಣಿಗೆ ನಡೆಸಲು ಪ್ರಯತ್ನಿಸಿದಾಗ, ಪೊಲೀಸರು ಬ್ಯಾರಿಕೇಡ್ಗಳ ಮೂಲಕ ಅವರ ದಾರಿಯನ್ನು ತಡೆದರು. ಆದರೆ ಪ್ರತಿಭಟನಾಕಾರರು ನಿಲ್ಲದೆ ಬ್ಯಾರಿಕೇಡ್ಗಳನ್ನು ಏರಲು ಯತ್ನಿಸಿದ ಪರಿಣಾಮ ಪೊಲೀಸರು ಹಲವರನ್ನು ವಶಕ್ಕೆ ಪಡೆದರು.
*ಪೊಲೀಸ್ ಸಿಬ್ಬಂದಿ ಎಎಪಿ ಕಾರ್ಯಕರ್ತರನ್ನು ಬಸ್ಗಳಿಗೆ ತಳ್ಳುತ್ತಿರುವುದು ಕಂಡುಬಂದಿದೆ. ಪಕ್ಷದ ಕಾರ್ಯಕರ್ತರನ್ನು ಕರೆದೊಯ್ಯಲು 10-15 ಬಸ್ಳು ಸ್ಥಳದಲ್ಲಿದ್ದವು.
*ಎಎಪಿ ಸ್ವಯಂಸೇವಕರನ್ನು ಬಂಧಿಸಲು ಪ್ರಧಾನಿ ಮೋದಿ ಅವರ ಪೊಲೀಸರು ಆಪ್ ಕಚೇರಿಗೆ ಬಲವಂತವಾಗಿ ಪ್ರವೇಶಿಸಿದ್ದಾರೆ ಎಂದು ಎಎಪಿ ಆರೋಪಿಸಿದೆ ಮತ್ತು ಇದನ್ನು "ತುರ್ತು ಪರಿಸ್ಥಿತಿ" ಎಂದು ಕರೆದಿದೆ.
*ರಾಷ್ಟ್ರ ರಾಜಧಾನಿಯಲ್ಲಿ ಹೊಸ ಮದ್ಯ ಮಾರಾಟ ನೀತಿಯನ್ನು ತರುವಲ್ಲಿ ಮನೀಶ್ ಸಿಸೋಡಿಯಾ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದ್ದಾರೆ. 2021 ರ ನೀತಿಯ ಕರಡು ಭಾಗಗಳನ್ನು ರಚಿಸುವಲ್ಲಿ ಮದ್ಯ ಕಂಪನಿಗಳು ತೊಡಗಿಸಿಕೊಂಡಿವೆ ಎಂದು ಸಿಬಿಐ ವಾದಿಸಿದೆ. ಇದಕ್ಕಾಗಿ "ಸೌತ್ ಗ್ರೂಪ್" ಎಂದು ಕರೆಯಲ್ಪಡುವ ಮದ್ಯದ ಲಾಬಿಯಿಂದ ₹ 30 ಕೋಟಿಗಳಷ್ಟು ಕಿಕ್ಬ್ಯಾಕ್ಗಳನ್ನು ಪಾವತಿಸಲಾಗಿದೆ.
*ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭಾನುವಾರ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಕೇಂದ್ರೀಯ ತನಿಖಾ ದಳ (ಸಿಬಿಐ) ನಿನ್ನೆ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದೆ.
*ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು "ಹೆಚ್ಚಿನ ಸಿಬಿಐ ಅಧಿಕಾರಿಗಳು" ತಮ್ಮ ಡೆಪ್ಯೂಟಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುವುದನ್ನು ವಿರೋಧಿಸಿದ್ದಾರೆ. "ರಾಜಕೀಯ ಒತ್ತಡ" ದ ಕಾರಣ ಸಾಕ್ಷ್ಯಾಧಾರಗಳಿಲ್ಲದೆ ಬಲವಂತವಾಗಿ ಅವರನ್ನು ಬಂಧಿಸಲಾಗಿದೆ. ಇದಕ್ಕೆ ಏನ್ ಮಾಡಬೇಕಿದೆ ಎಂದು ನನಗೆ ತಿಳಿದಿದೆ ಎಂದು ಅವರು ಹೇಳಿದರು.
*ಸಿಸೋಡಿಯಾ ಅವರು ದೆಹಲಿಯ ಕೇಂದ್ರೀಯ ತನಿಖಾ ದಳದ ಪ್ರಧಾನ ಕಚೇರಿಯಲ್ಲಿ ರಾತ್ರಿ ಕಳೆದರು. ಭದ್ರತಾ ಕಾರಣಗಳಿಗಾಗಿ ಎಐಐಎಂಎಸ್ನ ವೈದ್ಯರ ತಂಡ ಸಿಬಿಐ ಕೇಂದ್ರ ಕಚೇರಿಯಲ್ಲಿ ಆಪ್ ನಾಯಕನ ವೈದ್ಯಕೀಯ ಪರೀಕ್ಷೆಯನ್ನು ನಡೆಸಿತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications