Liquor sales banned: ನಾಲ್ಕು ದಿನ ಮದ್ಯ ಮಾರಾಟ ನಿಷೇಧ: ಎಲ್ಲಿ, ಯಾಕೆ ಇಲ್ಲಿದೆ ಮಾಹಿತಿ!
ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಹಾಗೂ ಮತದಾನ ಪ್ರಕ್ರಿಯೆ ಮುಗಿದಿದೆ. ಇದೀಗ ಚುನಾವಣೆ ಫಲಿತಾಂಶ ಪ್ರಕಟವಾಗುವುದೊಂದೇ ಬಾಕಿ ಇದೆ. ಚುನಾವಣೆಯ ಫಲಿತಾಂಶ ಏನಾಗುತ್ತೋ ಎನ್ನುವ ಆತಂಕದಲ್ಲಿ ಇದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿತ್ತು. ಇದೀಗ ಮತ್ತೆ ನಾಲ್ಕು ದಿನ ಮದ್ಯ ಮಾರಾಟ ನಿಷೇಧವಾಗುವ ಸುದ್ದಿ ಬಂದಿದೆ. ಮದ್ಯ ಪ್ರಿಯರು ಟೆಂಕ್ಷನ್ ಆಗ್ಬೇಕಿಲ್ಲ. ಮದ್ಯ ಮಾರಾಟ ನಿಷೇಧ ನಮ್ಮಲ್ಲಿ ಅಲ್ಲ!. ಹೌದು ಮಹಾರಾಷ್ಟ್ರ ಚುನಾವಣೆಯಲ್ಲಿ ನಾಲ್ಕು ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಇದೇ 20ರಂದು ಒಂದೇ ಹಂತದಲ್ಲಿ 288 ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗುತ್ತಿದೆ. ಮಹಾರಾಷ್ಟ್ರ ರಾಜಧಾನಿ ಹಾಗೂ ದೇಶದ ಆರ್ಥಿಕ ಖಜಾನೆ ಅಂತಲೇ ಕರೆಯುವ ಮುಂಬೈನಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಮಹಾರಾಷ್ಟ್ರ ಚುನಾವಣೆ ಸುಗಮವಾಗಿ ನಡೆಸುವ ಉದ್ದೇಶದಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದ ವಿವಿಧ ಪ್ರಮುಖ ನಗರಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ. ಸಾಮಾನ್ಯವಾಗಿ ಮದ್ಯ ಮಾರಾಟ ನಿಷೇಧ ದಿನವನ್ನು ಡ್ರೈ ಡೇ ಎನ್ನಲಾಗುತ್ತದೆ. ಚುನಾವಣೆ ನಡೆಯುವ ದಿನ ಹಾಗೂ ಮತ ಎಣಿಕೆಯ ದಿನ ಹಾಗೂ ವಿವಿಧ ಧಾರ್ಮಿಕ ಸಮಾರಂಭಗಳು ನಡೆಯುವ ಸಂದರ್ಭದಲ್ಲಿ ಮದ್ಯ ಮಾರಾಟ ನಿಷೇಧ ಮಾಡುವುದು ಇದೆ.
ಚುನಾವಣೆ ನಡೆಯುವಾಗ ಯಾವುದೇ ಗೊಂದಲ ಸೃಷ್ಟಿಯಾಗಬಾರದು ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಅಡಚಣೆಯಾಗಬಾರದು ಎನ್ನುವುದು ಇದರ ಉದ್ದೇಶವಾಗಿದೆ. ಇನ್ನು ಕಾರ್ತಿಕ ಏಕಾದಶಿ ಹಿನ್ನೆಲೆಯಲ್ಲಿ ನವೆಂಬರ್ 12ರಂದು ಸಹ ಮಹಾರಾಷ್ಟ್ರದ ಮುಂಬೈ ಥಾಣೆ ಮತ್ತು ಪುಣೆ ಸೇರಿದಂತೆ ವಿವಿಧ ನಗರಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿತ್ತು.
ನಾಲ್ಕು ದಿನ ಮದ್ಯ ಮಾರಾಟ ನಿಷೇಧ: ಇನ್ನು ಮಹಾರಾಷ್ಟ್ರದಲ್ಲಿ ನಾಳೆಯಿಂದ ಅಂದರೆ ನವೆಂಬರ್ 18ರಿಂದ ನಾಲ್ಕು ದಿನಗಳ ಕಾಲ ನವೆಂಬರ್ 23ರ ವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ನವೆಂಬರ್ 18ರ ಸಂಜೆ 6 ಗಂಟೆಯಿಂದ ಮದ್ಯ ಮಾರಾಟ ಬಂದ್ ಆಗಲಿದೆ. ನವೆಂಬರ್ 20ಕ್ಕೆ ವಿಧಾನಸಭೆ ಚುನಾವಣೆ ನಡೆಯಲಿದೆ. ನವೆಂಬರ್ 23ಕ್ಕೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಭಾರತೀಯ ಚುನಾವಣೆ ಆಯೋಗ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ - 2024ರ ಫಲಿತಾಂಶವನ್ನು ಪ್ರಕಟಿಸುವ ವರೆಗೂ ಮದ್ಯ ಮಾರಾಟ ನಿಷೇಧ ಇರಲಿದೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಜಿದ್ದಾಜಿದ್ದಿನ ಕಣ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಈ ಬಾರಿ ಚಕ್ರವ್ಯೂಹದಂತಿದ್ದು. ಜಿದ್ದಾಜಿದ್ದಿನ ಕಣವಾಗಿ ಬದಲಾಗಿದೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಈ ಬಾರಿ ದೊಡ್ಡ ಪಕ್ಷಗಳಿಗಿಂತಲೂ ಸಣ್ಣ ಪಕ್ಷಗಳ ಹವಾ ದೊಡ್ಡ ಮಟ್ಟದಲ್ಲಿ ಇದೆ. 10ಕ್ಕೂ ಹೆಚ್ಚು ಸಣ್ಣ ಪಕ್ಷಗಳು ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಬಲ ಪೈಪೋಟಿಯನ್ನು ನೀಡುತ್ತಿವೆ. ಅಲ್ಲದೇ ಮೊದಲ ಬಾರಿ ಪಕ್ಷ ವಿಭಜನೆಯ ನಂತರ ಮತದಾರರ ಮುಂದೆ ಹೋಗುತ್ತಿವೆ. ಹೀಗಾಗಿ, ಈ ಬಾರಿ ಹೈಡ್ರಾಮಾಗೆ ಜನ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎನ್ನುವ ಕುತೂಹಲ ಈಗ ಹೆಚ್ಚಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications