ಕೇರಳ: ಓಣಂ ಹಬ್ಬದ ಮೊದಲ 9 ದಿನಗಳಲ್ಲಿ 665 ಕೋಟಿ ರೂ.ಗಳ ಮದ್ಯ ಮಾರಾಟ- ಚಂದ್ರಯಾನದ ಬಜೆಟ್ ಅನ್ನೇ ಮೀರಿಸಿದ ಮಲಯಾಳಿಗಳು
ಕೊಚ್ಚಿ, ಸೆಪ್ಟೆಂಬರ್ 02: ಓಣಂ ಹಬ್ಬದ ಮೊದಲ ಒಂಬತ್ತು ದಿನಗಳಲ್ಲಿ ಕೇರಳದಾದ್ಯಂತ 665 ಕೋಟಿ ರೂಪಾಯಿ ಮೌಲ್ಯದ ಮದ್ಯ ಮಾರಾಟವಾಗಿದೆ. ಓಣಂ ಅವಧಿಯ ಮೊದಲ 9 ದಿನಗಳಲ್ಲಿ ದಾಖಲೆ ಪ್ರಮಾಣದ ಮದ್ಯ ಮಾರಾಟವಾಗಿರುವ ಬಗ್ಗೆ ವರದಿಯಾಗಿದೆ. ಕಳೆದ ವರ್ಷದ ಓಣಂ ಹಬ್ಬದ ಮೊದಲ 9 ದಿನಗಳಲ್ಲಿ 624 ಕೋಟಿ ಮದ್ಯ ಮಾರಾಟವಾಗಿತ್ತು. ಇದಕ್ಕೆ ಹೋಲಿಸಿದರೆ 41 ಕೋಟಿ ರೂಪಾಯಿ ಮೌಲ್ಯದ ಮದ್ಯ ಮಾರಾಟ ಹೆಚ್ಚಾಗಿದೆ.
ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಕೇರಳ ಸ್ಟೇಟ್ ಬೆವರೇಜಸ್ ಕಾರ್ಪೊರೇಷನ್ (ಬೆವ್ಕೊ) ಮಳಿಗೆಗಳಲ್ಲಿ ಉತ್ರಾಂ ( ಹತ್ತು ದಿನಗಳ ಓಣಂ ಹಬ್ಬದ ಪ್ರಮುಖ ದಿನ ) ದಿನದಂದು ಮದ್ಯದ ಒಟ್ಟು ಮಾರಾಟವು ಕಳೆದ ವರ್ಷಕ್ಕಿಂತ ಹೆಚ್ಚಾಗಿದೆ. ಏಕೆಂದರೆ ಈ ವರ್ಷದ ಉತ್ರಾಂ ದಿನದಂದು ಒಟ್ಟು ಮಾರಾಟದ ಮೌಲ್ಯವು 116.1 ರೂ.ಗಳಷ್ಟಾಗಿದೆ. ಇದು ಕಳೆದ ವರ್ಷ 112 ಕೋಟಿ ರೂ. ಆಗಿತ್ತು.

ತ್ರಿಶೂರ್ ಜಿಲ್ಲೆಯ ಇರಿಂಜಲಕುಡದಲ್ಲಿರುವ ಬೆವ್ಕೋ ಮಳಿಗೆಯು ಸೋಮವಾರ ಅತಿ ಹೆಚ್ಚು 1.06 ಕೋಟಿ ರೂ.ಗಳ ಮದ್ಯ ಮಾರಾಟವನ್ನು ದಾಖಲಿಸಿದೆ. ಮತ್ತೊಂದೆಡೆ, ಕೊಲ್ಲಂನಲ್ಲಿರುವ ಆಶ್ರಮಮ್ ಬೆವ್ಕೋ ಔಟ್ಲೆಟ್ ಕೂಡ 1.01 ಕೋಟಿ ರೂಪಾಯಿಗಳ ಮದ್ಯ ಮಾರಾಟವನ್ನು ದಾಖಲಿಸಿದೆ.
ಚಂಗನಾಶ್ಶೇರಿಯ ಬೆವ್ಕೋ ಔಟ್ಲೆಟ್ವೊಂದರಲ್ಲಿ 95.7 ಲಕ್ಷ ರೂಪಾಯಿಗಳ ಮದ್ಯ ಮಾರಾಟವಾಗಿದೆ. ಇದೇ ನಗರದ ಇನ್ನೊಂದು ಔಟ್ಲೆಟ್ನನಲ್ಲಿ 90 ಲಕ್ಷ ರೂಪಾಯಿಗಳ ಮದ್ಯ ಮಾರಾಟವಾಗಿದೆ. ಕೋರ್ಟ್ ಜಂಕ್ಷನ್ ಚೇರ್ತಲ ಸ್ಟೋರ್ನಲ್ಲಿ 93.7 ಲಕ್ಷ ರೂ. ಮತ್ತು ಪಯ್ಯನೂರು ಔಟ್ಲೆಟ್ನಲ್ಲಿ 91.6 ಲಕ್ಷ ರೂ.ಗಳ ಮದ್ಯ ಮಾರಾಟವಾಗಿದೆ ಎಂದು ವರದಿ ತಿಳಿಸಿದೆ.
ಹತ್ತು ದಿನಗಳ ಕಾಲ ನಡೆಯುವ ಓಣಂ ಹಬ್ಬದ ಒಂಬತ್ತನೇ ದಿನವಾದ ಉತ್ರಾಂ ಅನ್ನು ಪ್ರಮುಖ ದಿನವೆಂದು ಪರಿಗಣಿಸಲಾಗಿದೆ. ಕೇರಳದ ಕೆಲವು ಭಾಗಗಳಲ್ಲಿ ಓಣಂ ಹಬ್ಬ ಇದೇ ದಿನದಂದು ಪ್ರಾರಂಭವಾಗುತ್ತವೆ. ಉತ್ತರಾಮದ ದಿನದಂದು, ರಾಜ ಮಹಾಬಲಿಯ ಆಗಮನವನ್ನು ಗೌರವಿಸಲು ಜನರು ಹಬ್ಬವನ್ನು ಆಚರಿಸುತ್ತಾರೆ. ಹಬ್ಬವನ್ನು ಆಚರಿಸಲು ಇತ್ತೀಚೆಗೆ ಕೊಯ್ಲು ಮಾಡಿದ ತಾಜಾ ಹಣ್ಣುಗಳು ಮತ್ತು ತರಕಾರಿಗಳಿಂದ ಅನೇಕ ಭಕ್ಷ್ಯಗಳನ್ನು ತಯಾರಿಸಲಾಗುತ್ತದೆ.

ನ್ಯೂಸ್ ಮಿನಿಟ್ ವರದಿಯ ಪ್ರಕಾರ, 2022 ರಲ್ಲಿ ಓಣಂನ ಹಬ್ಬದ ದಿನಗಳಲ್ಲಿ ಒಟ್ಟು ಮದ್ಯ ಮಾರಾಟವು 624 ಕೋಟಿ ರೂ. ಆಗಿತ್ತು. 2021ರ ಇದೇ ಅವಧಿಯಲ್ಲಿ 529 ಕೋಟಿ ರೂ.ಗೆ ತಲುಪಿತ್ತು.
ಗ್ರಾಹಕರಿಗೆ ಅನುಕೂಲವಾಗುವಂತೆ ಬೆವ್ಕೋ ಮಳಿಗೆಗಳಲ್ಲಿ ಹಲವು ವ್ಯವಸ್ಥೆಗಳನ್ನು ಮಾಡಲಾಗಿತ್ತು. ಸಿಬ್ಬಂದಿಗಳಿಗೆ ರಜೆ ನೀಡದಂತೆ ನೋಟಿಸ್ನಲ್ಲಿ ತಿಳಿಸಲಾಗಿತ್ತು. ಗ್ರಾಹಕರಿಗೆ ಆನ್ಲೈನ್ ಪಾವತಿಯ ಆಯ್ಕೆಯು ಲಭ್ಯವಿದೆಯೇ ಎಂದು ಖಚಿತಪಡಿಸಿಕೊಳ್ಳಲು ನಿಗಮವು ಔಟ್ಲೆಟ್ಗಳಿಗೆ ನಿರ್ದೇಶನ ನೀಡಿತ್ತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications