ಮೋದಿ 2.0 ಪ್ರಮಾಣ ವಚನ ಸಮಾರಂಭಕ್ಕೆ ಗೈರಾದವರು ಯಾರು?
Recommended Video
ನವದೆಹಲಿ, ಮೇ 31: ಲೋಕಸಭೆ ಚುನಾವಣೆ 2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅದ್ಭುತ ಪ್ರದರ್ಶನದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. ಮೋದಿ ಅವರು ಪ್ರಧಾನಿಯಾಗಿ ಗುರುವಾರ(ಮೇ 30)ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿ, ಹೊಸ ಸರ್ಕಾರ ಸ್ಥಾಪಿಸಿದರು
ಮೇ 30ರಂದು ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್ ನಲ್ಲಿ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಬಾರಿ 8 ಸಾವಿರಕ್ಕೂ ಹೆಚ್ಚು ಆಹ್ವಾನಿತ ಅತಿಥಿಗಳು ಭಾಗವಹಿಸಲಿದ್ದಾರೆ.
ಹಲವು ರಾಜ್ಯಗಳ ಮುಖ್ಯಮಂತ್ರಿಗಲು, ಮಾಜಿ ಪ್ರಧಾನಿ, ಸಾಂವಿಧಾನಿಕ ಸಂಸ್ಥೆಗಳ ಅಧಿಕಾರಿಗಳು, ರಾಜತಾಂತ್ರಿಕರು, ಹಿರಿಯ ರಾಜಕೀಯ ನಾಯಕರು, ಕಲಾವಿದರು, ಕ್ರೀಡಾಪಟುಗಳು, ಮಾಧ್ಯಮದವರು, ಸ್ವಾಮೀಜಿಗಳು ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.

ಕಳೆದ ಬಾರಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಮಾಣ ವಚನ ಬೋಧಿಸಿದ್ದರು. ನಾಲ್ಕು ಸಾವಿರ ಮಂದಿ ಆಹ್ವಾನಿತರು ಆಗಮಿಸಿದ್ದರು, ಕೆಲವರಿಗೆ ಅನಿವಾರ್ಯದಿಂದ ಗೈರಾಗಿದ್ದರೆ, ಮತ್ತೆ ಕೆಲವರು ನಿರೀಕ್ಷಿತವಾಗಿ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.
2014ರಲ್ಲಿ ಸಿದ್ದರಾಮಯ್ಯ, ಜಯಲಲಿತಾ, ಮಮತಾ ಬ್ಯಾನರ್ಜಿ ಅವರು ಗೈರು ಹಾಜರಾಗಿದ್ದರು. ಜೆ ಜಯಲಲಿತಾ ಅವರು ನಿಧನರಾಗಿದ್ದಾರೆ, ಮಾಜಿ ಸಿಎಂ ಆಗಿರುವ ಸಿದ್ದರಾಮಯ್ಯ, ಪಶ್ಚಿಮ ಬಂಗಾಳ ಸಿಎಂ ಮಮತಾ ಈ ಸಲ ಕೂಡಾ ಗೈರು ಹಾಜರಾಗಿದ್ದಾರೆ.
* ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ.
* ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ.
* ತೆಲಂಗಾಣದ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್.
* ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ.
* ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್.
* ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್.
* ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್.
* ಪಂಜಾಬ್ ಮುಖ್ಯಮಂತ್ರಿ ಕ್ಯಾ. ಅಮರೀಂದರ್ ಸಿಂಗ್.
* ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಭಘೇಲ್.
* ಮಿಜೋರಾಂ ಮುಖ್ಯಮಂತ್ರಿ ಜೂಮರ್ ತಾಂಗ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications