50 ಸಾವಿರ ಶೂರಿಟಿ ಕೊಟ್ಟು ಜೈಲು ತಪ್ಪಿಸಿಕೊಂಡ ತಾಯಿಮಗ
ದೆಹಲಿ, ಡಿಸೆಂಬರ್ 19 : ನ್ಯಾಷನಲ್ ಹೆರಾಲ್ಡ್ ಆಸ್ತಿಯ ಅಕ್ರಮ ಪರಭಾರೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೆಹಲಿಯ ಪಟಿಯಾಲಾ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಶನಿವಾರ ಮಧ್ಯಾಹ್ನ ಇಬ್ಬರು ಕೋರ್ಟ್ಗೆ ಹಾಜರಾಗಿದ್ದರು.
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ವೈಯಕ್ತಿಕ 50 ಸಾವಿರ ರೂ. ಬಾಂಡ್ ಮತ್ತು ಒಬ್ಬರ ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಕೋರ್ಟ್ನಲ್ಲಿ ವಿಚಾರಣೆ ಆರಂಭವಾಯಿತು. ಐದು ನಿಮಿಷಗಳಲ್ಲಿ ಇಬ್ಬರು ನಾಯಕರು ಜಾಮೀನು ಪಡೆದು ಹೊರನಡೆದರು. ಪ್ರಕರಣದ ಮುಂದಿನ ವಿಚಾರಣೆ 2016ರ ಫೆಬ್ರವರಿ 20ರ ಮಧ್ಯಾಹ್ನ 2ಗಂಟೆಗೆ ನಡೆಯಲಿದೆ. [ಏನಿದು ನ್ಯಾಷನಲ್ ಹೆರಾಲ್ಡ್ ಹಗರಣ?]

ಸಮಯ 3.30 : ಪ್ರಕರಣದ ದೂರುದಾರ ಸುಬ್ರಮಣ್ಯ ಸ್ವಾಮಿ ಅವರು, ಸೋನಿಯಾ ಗಾಂಧಿಯವರ ಪಾಸ್ ಪೋರ್ಟ್ ಜಪ್ತಿ ಮಾಡಿ ವಿದೇಶ ಪ್ರವಾಸಕ್ಕೆ ನಿರ್ಬಂಧ ಹೇರಬೇಕು ಎಂದು ಮನವಿ ಮಾಡಿದ್ದರು. ಆದರೆ, ಕೋರ್ಟ್ ಮನವಿ ತಿರಸ್ಕರಿಸಿದೆ.
ಸಮಯ 3.20 : ಸೋನಿಯಾ ಗಾಂಧಿ ಅವರಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ರಾಹುಲ್ ಗಾಂಧಿ ಅವರಿಗೆ ಅಹ್ಮದ್ ಪಟೇಲ್ ಶ್ಯೂರಿಟಿ ನೀಡಿದರು.
ಸಮಯ 3.10 : ಪ್ರಕರಣದ ಮುಂದಿನ ವಿಚಾರಣೆಯನ್ನು ಕೋರ್ಟ್ ಫೆಬ್ರವರಿ 20ಕ್ಕೆ ಮುಂದೂಡಿದೆ. [ಹೆರಾಲ್ಡ್ : ಒಂದಿಷ್ಟು ತಮಾಷೆಯ, ಕೆಣಕುವ ಟ್ವೀಟುಗಳು]
ಸಮಯ 3.05 : ನ್ಯಾಷನಲ್ ಹೆರಾಲ್ಡ್ ಕೇಸಿನಲ್ಲಿ ಸೋನಿಯಾ, ರಾಹುಲ್ಗೆ ಜಾಮೀನು ಮಂಜೂರು [ನ್ಯಾಷನಲ್ ಹೆರಾಲ್ಡ್ ಕೇಸ್ : ಬಿಜೆಪಿ ವಿರುದ್ಧ ಬೀದಿಗಿಳಿದ ಕಾಂಗ್ರೆಸ್]
ಸಮಯ 3.01 : ಕೋರ್ಟ್ನಲ್ಲಿ ವಿಚಾರಣೆ ಆರಂಭ. ವಾದ ಆರಂಭಿಸಿದ ಸೋನಿಯಾ ಪರ ವಕೀಲ ಕಪಿಲ್ ಸಿಬಲ್
ಸಮಯ 2.43 : ಪಟಿಯಾಲಾ ಕೋರ್ಟ್ ತಲುಪಿದ ಸೋನಿಯಾ ಗಾಂಧಿ, ರಾಹುಲ್
ಸಮಯ 2.30 : ಪಟಿಯಾಲಾ ಕೋರ್ಟ್ನತ್ತ ಹೊರಟ ರಾಹುಲ್ ಗಾಂಧಿ
ಸಮಯ 2.25 : ಕೋರ್ಟ್ಗೆ ಆಗಮಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ವಾದ್ರಾ ಇತರ ನಾಯಕರು
ಸಮಯ 2.15 : ಪಟಿಯಾಲಾ ಕೋರ್ಟ್ ತಲುಪಿದ ಕಾಂಗ್ರೆಸ್ ನಾಯಕ ಮತ್ತು ಸೋನಿಯಾ ಪರ ವಕೀಲ ಅಭಿಷೇಕ್ ಸಿಂಘ್ವಿ
Sonia Gandhi and Rahul Gandhi enter Patiala House Court #NationalHerald pic.twitter.com/umJ3YhFygQ
— ANI (@ANI_news) December 19, 2015 -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications