ಲಿವ್ ಇನ್ ರಿಲೇಶನ್ಶಿಪ್ ಅಪಾಯಕಾರಿ ಕಾಯಿಲೆ ಇದ್ದಂತೆ: ಬಿಜೆಪಿ ಸಂಸದ ಧರಂಬೀರ್ ಸಿಂಗ್
ನವದೆಹಲಿ, ಡಿಸೆಂಬರ್ 7: ಲಿವ್-ಇನ್ ಸಂಬಂಧಗಳು ಭಾರತೀಯ ಸಮಾಜದಿಂದ ನಿರ್ಮೂಲನೆ ಮಾಡಬೇಕಾದ ಅಪಾಯಕಾರಿ ಕಾಯಿಲೆಯಾಗಿದೆ. ಇಂತಹ ವ್ಯವಸ್ಥೆಗಳ ವಿರುದ್ಧ ಕಾನೂನನ್ನು ಜಾರಿಗೊಳಿಸಬೇಕೆಂದು ಬಿಜೆಪಿ ಸಂಸದ ಧರಂಬೀರ್ ಸಿಂಗ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಹರಿಯಾಣದ ಬಿಜೆಪಿ ಸಂಸದ ಧರಂಬೀರ್ ಸಿಂಗ್ ಈ ಆಗ್ರಹ ಮಾಡಿದ್ದಾರೆ.

ತಮ್ಮ ಭಾಷಣದಲ್ಲಿ ಧರಂಭೀರ್ ಸಿಂಗ್ ಅವರು, ಭಾರತೀಯ ಸಂಸ್ಕೃತಿಯ ವಿಶಿಷ್ಟವಾದುದು. ಅದರ ತತ್ವವಾದ 'ವಸುಧೈವ ಕುಟುಂಬಕಮ್' (ಜಗತ್ತು ಒಂದೇ ಕುಟುಂಬ) ಮತ್ತು ವಿವಿಧತೆಯಲ್ಲಿ ಏಕತೆಗೆ ಹೆಸರಾದ ದೇಶವಾಗಿದೆ. ಭಾರತದಲ್ಲಿ ಅರೇಂಜ್ಡ್ ಮ್ಯಾರೇಜ್ಗಳು ದೀರ್ಘಕಾಲ ಉಳಿಯುತ್ತವೆ. ಸಮಾಜದ ಬಹುತೇಕರು ಪೋಷಕರು ಅಥವಾ ಸಂಬಂಧಿಕರು ಏರ್ಪಡಿಸಿದ ಮದುವೆಗಳಿಗೆ ಆದ್ಯತೆ ನೀಡುತ್ತದೆ ಎಂದು ಪ್ರತಿಪಾದಿಸಿದರು.
ಸಾಮಾಜಿಕ ಮೌಲ್ಯಗಳು, ವೈಯಕ್ತಿಕ ಆದ್ಯತೆಗಳು ಮತ್ತು ಕೌಟುಂಬಿಕ ಹಿನ್ನೆಲೆಗಳಂತಹ ಅಂಶಗಳ ಆಧಾರದ ಮೇಲೆ ಈ ಮದುವೆಗಳನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ಇವು ಏಳು ತಲೆಮಾರುಗಳವರೆಗೆ ಬಾಳಿಕೆ ಬರುತ್ತದೆ. ಭಾರತದಲ್ಲಿ ವಿಚ್ಛೇದನದ ಪ್ರಮಾಣವು ಯುನೈಟೆಡ್ ಸ್ಟೇಟ್ಸ್ನಂತಹ ದೇಶಗಳಿಗಿಂತ ಗಣನೀಯವಾಗಿ ಕಡಿಮೆಯಾಗಿದೆ. ಈ ವ್ಯವಸ್ಥೆಗೆ ಅರೇಂಜ್ಡ್ ಮ್ಯಾರೇಜ್ಗಳ ಪ್ರಭುತ್ವ ಕಾರಣವಾಗಿದೆ ಎಂದರು.
ಪ್ರೇಮ ವಿವಾಹಗಳಲ್ಲಿ ವಿಚ್ಛೇದನ ಸಂಖ್ಯೆ ಹೆಚ್ಚುತ್ತಿದೆ. ಅಂತಹ ಒಪ್ಪಂದಗಳಿಗೆ ವಧು ಮತ್ತು ವರನ ಪೋಷಕರ ಒಪ್ಪಿಗೆಯನ್ನು ಕಡ್ಡಾಯವಾಗಿ ಪಡೆಯಬೇಕು. ಪ್ರೇಮ ವಿವಾಹಗಳಿಂದ ಉಂಟಾಗುವ ಘರ್ಷಣೆಗಳು, ವಿಶೇಷವಾಗಿ ಮದುವೆಗಳು ಹೆಚ್ಚಾಗಿ ಗೋತ್ರ ಗಡಿಗಳನ್ನು ದಾಟುವ ಹಳ್ಳಿಗಳಲ್ಲಿ ಕುಟುಂಬಗಳನ್ನು ಛಿದ್ರಗೊಳಿಸುತ್ತಿವೆ ಎಂದು ಅವರು ವಾದಿಸಿದರು.
ಲಿವ್ ಇನ್ ರಿಲೇಶನ್ಶಿಫ್ ಪ್ರವೃತ್ತಿ ಮಾರಕವಾಗಿದೆ. ಇದು ಭಾರತೀಯ ಸಮಾಜವನ್ನು ನುಸುಳುವ ಹೊಸ ಕಾಯಿಲೆ. ಶ್ರದ್ಧಾ ವಾಕರ್ ಮತ್ತು ಅಫ್ತಾಬ್ ಪೂನಾವಾಲಾ ಪ್ರಕರಣವನ್ನು ಸೂಚಿಸಿದ ಅವರು, ಹಿಂಸೆ ಮತ್ತು ಭಯಾನಕ ಘಟನೆಗಳು ಸೇರಿದಂತೆ ಅಂತಹ ಸಂಬಂಧಗಳ ಸಂಭಾವ್ಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದರು.
ಈ ಅಪಾಯಕಾರಿ ಕಾಯಿಲೆಯನ್ನು ಸಮಾಜದಿಂದ ನಿರ್ಮೂಲನೆ ಮಾಡಲು ಕಾನೂನನ್ನು ಜಾರಿಗೊಳಿಸುವ ಮೂಲಕ ಲಿವ್-ಇನ್ ಸಂಬಂಧಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಂತಹ ಸಂಬಂಧಗಳಿಗೆ ಅವಕಾಶ ನೀಡುವುದರಿಂದ ಭಾರತೀಯ ಸಂಸ್ಕೃತಿಗೆ ಧಕ್ಕೆಯಾಗುವುದಲ್ಲದೆ ದ್ವೇಷ ಮತ್ತು ಸಾಮಾಜಿಕ ಅನಿಷ್ಟಗಳನ್ನು ಬೆಳೆಸುತ್ತದೆ. ಭಾರತದ ಸಾಂಸ್ಕೃತಿಕ ರಚನೆಯನ್ನು ಸಂರಕ್ಷಿಸುವ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ











Click it and Unblock the Notifications