ಮೋದಿಯಿಂದ ನೇತಾಜಿ ರಹಸ್ಯ ಕಡತ ಬಿಡುಗಡೆ
ನವದೆಹಲಿ, ಜನವರಿ 23 : ನೇತಾಜಿ ಸುಭಾಷ್ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 100 ರಹಸ್ಯ ಡಿಜಿಟಲ್ ಕಡತಗಳನ್ನು ಇಂದು ಬಿಡುಗಡೆ ಮಾಡಲಾಗಿದೆ. ಶನಿವಾರ ಬೋಸ್ ಅವರ ಜನ್ಮದಿನ. ಇಂದೇ ಪ್ರಧಾನಿ ನರೇಂದ್ರ ಮೋದಿ ಅವರು ದಾಖಲೆಗಳನ್ನು ಬಿಡುಗಡೆ ಮಾಡಿದರು.
ನೇತಾಜಿ ಅವರ ಕುರಿತ ಅನೇಕ ರಹಸ್ಯ ಕಡತಗಳು ರಾಷ್ಟ್ರೀಯ ಪತ್ರಾಗಾರದಲ್ಲಿವೆ. ನೇತಾಜಿ ಅವರ ಕಣ್ಮರೆ ರಹಸ್ಯವನ್ನು ಒಳಗೊಂಡಿರುವ ಕಡತಗಳನ್ನು ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿಸಲಾಗಿದ್ದು, 100 ಕಡತಗಳನ್ನು ಪ್ರಧಾನಿ ಮೋದಿ ಇಂದು ಬಿಡುಗಡೆ ಮಾಡಿದರು. ಪ್ರತಿ ತಿಂಗಳು 25 ಕಡತಗಳನ್ನು ಸಾರ್ವಜನಿಕರಿಗಾಗಿ ಬಿಡುಗಡೆ ಮಾಡಲಾಗುತ್ತದೆ. [ನೇತಾಜಿ ಕುರಿತ 64 ರಹಸ್ಯ ದಾಖಲೆ ಬಹಿರಂಗ]

ನೇತಾಜಿ ಸಂಬಂಧಿಯ ಮೊಮ್ಮಗ ಸೂರ್ಯಕುಮಾರ್ ಬೋಸ್ ಅವರು ಬರ್ಲಿನ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ 1945ರ ಆಗಸ್ಟ್ 18ರಂದು ತೈವಾನ್ನಿಂದ ಬೋಸ್ ಅವರು ಕಣ್ಮರೆಯಾಗಿರುವುದಕ್ಕೆ ಸಂಬಂಧಿಸಿದ ಮಾಹಿತಿ ಬಹಿರಂಗ ಮಾಡಬೇಕು ಎಂದು ಒತ್ತಾಯಿಸಿದ್ದರು. ಆದ್ದರಿಂದ, ಸರ್ಕಾರ ಇಂದು ದಾಖಲೆಗಳನ್ನು ಬಿಡುಗಡೆ ಮಾಡಿದೆ.
PM Narendra Modi meets family members of #NetajiSubhasChandraBose at National Archives pic.twitter.com/6y0dgpcGGd
— ANI (@ANI_news) January 23, 2016
ಈ ರಹಸ್ಯ ಮಾಹಿತಿ ಬಹಿರಂಗ ಮಾಡುವ ಕುರಿತು ಪರಿಶೀಲಿಸಲು ಕೇಂದ್ರ ಸರ್ಕಾರ ಅಂತರ್ ಸಚಿವಾಲಯ ಸಮಿತಿಯೊಂದನ್ನು ರಚಿಸಿಸಿತ್ತು. ಈ ಸಮಿತಿಯ ವರದಿ ಬಂದ ನಂತರ ಕಡತಗಳನ್ನು ಬಹಿರಂಗಗೊಳಿಸುವ ನಿರ್ಣಯ ಕೈಗೊಳ್ಳಲಾಗಿದೆ. ನೇತಾಜಿ ಅವರಿಗೆ ಸಬಂಧಿಸಿದ 25 ದಾಖಲೆಗಳ ಡಿಜಿಟಲ್ ಪ್ರತಿಯನ್ನು ನ್ಯಾಷನಲ್ ಆರ್ಚೀವ್ಸ್ ಆಫ್ ಇಂಡಿಯಾ (ಎನ್ಐಎ) ಪ್ರತಿ ತಿಂಗಳು ಸಾರ್ವಜನಿಕರಿಗಾಗಿ ಬಿಡುಗಡೆ ಮಾಡಲಿದೆ.
ಮೋದಿಯಿಂದ ಕಡತ ಬಿಡುಗಡೆ ವಿಡಿಯೋ
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications