ಅರುಣ್ ಜೇಟ್ಲಿ ಅಸ್ತಂಗತ: ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ
ನವದೆಹಲಿ, ಆಗಸ್ಟ್ 24: ಮಾಜಿ ಹಣಕಾಸು ಸಚಿವ, ಬಿಜೆಪಿ ಪ್ರಮುಖ ಮುಖಂಡ ಅರುಣ್ ಜೇಟ್ಲಿ ಶನಿವಾರ ಮಧ್ಯಾಹ್ನ 12:30 ರ ಸುಮಾರಿಗೆ ನಿಧನ ಹೊಂದಿದ್ದಾರೆ.
ಅರುಣ್ ಜೇಟ್ಲಿ ಅವರು ಕಳೆದ ಹಲವು ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಅವರಿಗೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆ ಉಸಿರೆಳೆದಿದ್ದಾರೆ.
ಅರುಣ್ ಜೇಟ್ಲಿ ಬದುಕಿನ ಅಪರೂಪದ ಚಿತ್ರಗಳು
ಅರುಣ್ ಜೇಟ್ಲಿ ಅವರು ಕಳೆದ ಅವಧಿಯ ಮೋದಿ ಸರ್ಕಾರದಲ್ಲಿ ವಿತ್ತ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಡಿಸೆಂಬರ್ 28 ರ 1952 ರಂದು ಹುಟ್ಟಿದ್ದ ಅವರು 66 ವರ್ಷ ವಯಸ್ಸಾಗಿತ್ತು.
ಬಿಜೆಪಿಯ ಪ್ರಮುಖ ಮುಖಂಡರಾಗಿದ್ದ ಜೇಟ್ಲಿ ಅವರಿಗೆ ಕೆಲವು ವರ್ಷಗಳಿಂದ ಅನಾರೋಗ್ಯ ಕಾಡುತ್ತಿತ್ತು. ಅವರು ವಿದೇಶದಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದರು. ಈ ವರ್ಷ ಅನಾರೋಗ್ಯದ ಸಮಸ್ಯೆಯಿಂದಾಗಿಯೇ ಅವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ ಮತ್ತು ಸಂಪುಟವನ್ನೂ ಸೇರಿರಲಿಲ್ಲ.
ಭಾನುವಾರ ಮಧ್ಯಾಹ್ನ ಅರುಣ್ ಜೇಟ್ಲಿ ಅಂತ್ಯಕ್ರಿಯೆ: ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಪ್ರಧಾನಿ ಹುದ್ದೆಗೆ ಮೋದಿ ಹೆಸರು ಸೂಚಿಸಿದ್ದ ಜೇಟ್ಲಿ ಎಂಬ ಟ್ರಬಲ್ ಶೂಟರ್
During his long political career, Arun Jaitley Ji held multiple ministerial responsibilities, which enabled him to contribute towards India’s economic growth, strengthening our defence capabilities, creating people friendly laws and enhancing trade with other nations.
— Narendra Modi (@narendramodi) August 24, 2019
Full of life, blessed with wit, a great sense of humour and charisma, Arun Jaitley Ji was admired by people across all sections of society. He was multi-faceted, having impeccable knowledge about India’s Constitution, history, public policy, governance and administration.
— Narendra Modi (@narendramodi) August 24, 2019