Chandrayaan 2 Moon Landing Live Updates: ಇಸ್ರೋದಲ್ಲಿ ಪ್ರಧಾನಿ ಮೋದಿ ಭಾಷಣ
ಬೆಂಗಳೂರು, ಸೆಪ್ಟೆಂಬರ್ 6: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲು ನಿರ್ಮಿಸುವ ಭಾರತದ ಬೃಹತ್ ಯೋಜನೆ ಚಂದ್ರಯಾನ 2 ತನ್ನ ಗುರಿ ತಲುಪುವ ಕೆಲವೇ ಕಿ.ಮೀ ಅಂತರದಲ್ಲಿ ಸಂವಹನ ಕಳೆದುಕೊಂಡಿದೆ. ನೌಕೆ ಗುರಿ ತಲುಪಿರಬಹುದು, ಆದರೆ ನಮಗೆ ಸಂವಹನ ಸಿಕ್ಕದ ಕಾರಣ ಖಚಿತ ಮಾಹಿತಿ ಲಭ್ಯವಾಗುತ್ತಿಲ್ಲ. ಡೇಟಾಗಳನ್ನು ವಿಶ್ಲೇಷಿಸಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಇಸ್ರೋ ಹೇಳಿದೆ.
ಭಾರತದ ಚಂದ್ರಯಾನ ಏಕೆ ಇಷ್ಟು ಮಹತ್ವದ್ದು? ಇಲ್ಲಿದೆ ವಿವರ
ಭಾರತ ಮಾತ್ರವಲ್ಲದೆ ಇಡೀ ಜಗತ್ತು ಈ ಸಾಧನೆಯ ಕ್ಷಣಕ್ಕೆ ಬೆರಗುಗಣ್ಣಿನಿಂದ ಕಾಯುತ್ತಿದೆ. ಚಂದ್ರ ಉಪಗ್ರಹಕ್ಕೆ ಅಧ್ಯಯನ ನೌಕೆಗಳನ್ನು ಕಳಿಸುವುದು ಇದೇ ಮೊದಲೇನಲ್ಲ. ಬೇರೆ ದೇಶಗಳು ಹಲವು ಬಾರಿ ಈ ಪ್ರಯತ್ನಗಳನ್ನು ನಡೆಸಿವೆ. ಅಲ್ಲಿ ಮಾನವನ ಓಡಾಟವೂ ನಡೆದಿದೆ. ಭಾರತವೂ ಚಂದ್ರಯಾನ-1ರಲ್ಲಿ ಯಶಸ್ವಿ ಪ್ರಯೋಗ ನಡೆಸಿ ಮಾಹಿತಿಗಳನ್ನು ಕಲೆಹಾಕಿದೆ.
ಆದರೆ ಚಂದ್ರನ ಅಂಗಳಕ್ಕೆ ಕಾಲಿಡುವ ಇಸ್ರೋದ ಈ ಯೋಜನೆ ವಿಶಿಷ್ಟವಾದುದು. ಇದುವರೆಗೂ ಚಂದ್ರನ ದಕ್ಷಿಣ ಧ್ರುವ ಹೇಗಿದೆ? ಅಲ್ಲಿ ಏನೇನಿವೆ ಎಂಬುದು ಜಗತ್ತಿಗೆ ಗೊತ್ತಿಲ್ಲ. ಅದನ್ನು ನೋಡುವ ಪ್ರಯತ್ನವನ್ನೂ ಮಾಡಿರಲಿಲ್ಲ. ಈ ಸಾಧನೆ ಮಾಡಿರುವುದು ಭಾರತ ಮಾತ್ರ. ಹೀಗಾಗಿಯೇ ಈ ಯೋಜನೆ ಹೆಚ್ಚು ಮಹತ್ವ ಪಡೆದಿದೆ. ಚಂದ್ರಯಾನ ನೌಕೆಯ ಪಯಣದ ಕೊನೆಯ ನಿಲ್ದಾಣವನ್ನು ತಲುಪುವ ಗಳಿಗೆ ಹೇಗಿರಲಿದೆ? ಈ ಬಗ್ಗೆ ಅಪ್ಡೇಟ್ಸ್ ಇಲ್ಲಿ ಸಿಗಲಿದೆ.
PM Narendra Modi at ISRO: There are ups and downs in life. This is not a small achievement. The nation in proud of you. Hope for the best. I congratulate you. You all have done a big service to nation, science and mankind. I am with you all the way, move forward bravely. pic.twitter.com/h6r1kwYlsC
— ANI (@ANI) September 6, 2019