ಲೋಕಸಭಾ ಚುನಾವಣೆ: ಬಿಜೆಪಿಯ ನಿತ್ಯಾನಂದ ರೈ ಭೇಟಿಯಾದ ಚಿರಾಗ್ ಪಾಸ್ವಾನ್, ಮೈತ್ರಿ ಸಾಧ್ಯತೆ
ನವದೆಹಲಿ, ಜುಲೈ. 09: ಪಾಟ್ನಾದಲ್ಲಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ನಿತ್ಯಾನಂದ ರೈ ಅವರನ್ನು ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಭೇಟಿಯಾಗಿದ್ದಾರೆ. 2024 ರ ಲೋಕಸಭೆ ಚುನಾವಣೆಗೆ ಎರಡು ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದ್ದು, ಈ ಬಗ್ಗೆ ಚರ್ಚಿಸಲು ಪಾಟ್ನಾದಲ್ಲಿ ಪಕ್ಷದ ಸಭೆಯನ್ನು (ರಾಮ್ ವಿಲಾಸ್ ಪಾಸ್ವಾನ್ ಬಣ) ಕರೆದಿದ್ದಾರೆ.
ಚಿರಾಗ್ ಪಾಸ್ವಾನ್ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್ಡಿಎ) ಸೇರ್ಪಡೆಯಾಗುತ್ತಾರೆ ಎಂಬ ಬಲವಾದ ವದಂತಿಗಳ ನಡುವೆಯೇ ಬ್ಯಾಕ್ ಟು ಬ್ಯಾಕ್ ಸಭೆಗಳು ನಡೆಯುತ್ತಿವೆ. "ಮುಂಬರುವ 2024 ರ ಲೋಕಸಭೆ ಚುನಾವಣೆ ಮತ್ತು 2025 ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಜೆಪಿ ಮೈತ್ರಿ ಕುರಿತು ಚರ್ಚಿಸಲು ಇಂದಿನ ಸಭೆ ನಡೆಸಲಾಯಿತು. ಮೈತ್ರಿ ಕುರಿತು ನಿರ್ಧಾರ ತೆಗೆದುಕೊಳ್ಳಲು ಪಕ್ಷದ ನಾಯಕರು ನನಗೆ ಅಧಿಕಾರ ನೀಡಿದ್ದಾರೆ" ಎಂದು ಪಾಟ್ನಾದಲ್ಲಿ ಪಕ್ಷದ ನಾಯಕರನ್ನು ಭೇಟಿ ಮಾಡಿದ ನಂತರ ಎಲ್ಜೆಪಿ ಮುಖ್ಯಸ್ಥರು ಹೇಳಿದ್ದಾರೆ.

" ಎರಡು ಪಕ್ಷಗಳ ಮೈತ್ರಿಯ ಬಗ್ಗೆ ಇನ್ನೂ ಚರ್ಚೆಗಳು ನಡೆಯುತ್ತಿವೆ. ಸಚಿವರಾಗುವುದು ನನ್ನ ಆದ್ಯತೆಯಲ್ಲ" ಎಂದು ಚಿರಾಗ್ ಪಾಸ್ವಾನ್ ದೆಹಲಿಗೆ ತೆರಳುವ ಮೊದಲು ಹೇಳಿದ್ದರು. ಸಭೆಯಲ್ಲಿ ಪಕ್ಷದ ಅಧಿಕಾರಿಗಳು ಅಧಿಕೃತವಾಗಿ ಚಿರಾಗ್ ಪಾಸ್ವಾನ್ ಅವರಿಗೆ ಮೈತ್ರಿ ಬಗ್ಗೆ ನಿರ್ಧಾರ ಕೈಗೊಳ್ಳಲು ಅಧಿಕಾರ ನೀಡಿದ್ದಾರೆ.
ಎನ್ಡಿಎಗೆ ಸೇರ್ಪಡೆಗೊಳ್ಳುವ ಕುರಿತು ಚರ್ಚೆ ನಡೆಯುತ್ತಿದೆ. ಅಂತಿಮ ನಿರ್ಧಾರಕ್ಕೆ ಮುನ್ನ ಏನನ್ನೂ ಹೇಳುವುದು ಸೂಕ್ತವಲ್ಲ ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ. ಇನ್ನು, ಚಿರಾಗ್ ಪಾಸ್ವಾನ್ ಅವರನ್ನು ಕೇಂದ್ರ ಸಂಪುಟಕ್ಕೆ ಬಿಜೆಪಿ ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇಂಟಲಿಜೆನ್ಸ್ ಬ್ಯೂರೋ ತನ್ನ ವರದಿಯಲ್ಲಿ ಆತನಿಗೆ ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಅವರಿಗೆ ಝಡ್ ಕೆಟಗರಿ ಭದ್ರತೆಯನ್ನು ನೀಡಲಾಗಿದೆ.
ಸಭೆಯ ನಂತರ ಬಿಜೆಪಿ ನಾಯಕ ಹೇಳಿದ್ದೇನು?
ಚಿರಾಗ್ ಪಾಸ್ವಾನ್ ಅವರನ್ನು ಭೇಟಿ ಮಾಡಿದ ನಂತರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ, "ಇದು ನಮ್ಮ ಹಳೆಯ ಮನೆ, ನಾವು ಭೇಟಿಯಾದಾಗ ಯಾವಾಗಲೂ ಒಳ್ಳೆಯದಾಗುತ್ತದೆ. ರಾಮ್ ವಿಲಾಸ್ ಪಾಸ್ವಾನ್ ಮತ್ತು ಬಿಜೆಪಿ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದೆ. ಪ್ರತಿಪಕ್ಷಗಳ ಒಗ್ಗಟ್ಟಿಗೆ ಪ್ರಧಾನಿ ಮೋದಿ ಜನಪ್ರಿಯತೆಯ ಭಯವೇ ಕಾರಣ.ಪ್ರತಿಪಕ್ಷಗಳಿಗೆ ಯಾವುದೇ ನಾಯಕ ಅಥವಾ ಯಾವುದೇ ನೀತಿ ಇಲ್ಲ. ಅವರು ಪ್ರಧಾನಿ ಮೋದಿಯಿಂದ ನೀತಿಗಳು, ಸೇವೆ ಮತ್ತು ನಾಯಕತ್ವದ ಬಗ್ಗೆ ಕಲಿಯಬೇಕು" ಎಂದಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications