ಅಧಿಕಾರ ಇದ್ರೂ ನಿರುದ್ಯೋಗಿಯಂತಾದ ಅಡ್ವಾಣಿ
ನವದೆಹಲಿ, ಆ.26: ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ ಅವರನ್ನು ಪಕ್ಷದ ಸಂಸದೀಯ ಮಂಡಳಿಯಿಂದ ಹೊರಹಾಕಲಾಗಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಅಧಿಕಾರ ಸ್ವೀಕರಿಸಿದ ಮೇಲೆ ಬಿಜೆಪಿ ತೆಗೆದುಕೊಂಡ ಪ್ರಮುಖ ನಿರ್ಧಾರ ಇದಾಗಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಮೂರು ಬಾರಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜೆಪಿ ನಡ್ಡಾ ಅವರನ್ನು ಪಕ್ಷದ ಉನ್ನತ ನಿರ್ಣಾಯಕ ಮಂಡಳಿಗೆ ಆಯ್ಕೆ ಮಾಡಲಾಗಿದೆ.
ಆದರೆ, ಎಲ್.ಕೆ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ ಅವರ ಹಿರಿತನವನ್ನು ಮನ್ನಿಸಿ ಅವರಿಬ್ಬರಿಗೂ ಹೊಸ ಹುದ್ದೆ ಸೃಷ್ಟಿಸಲಾಗಿದೆ. ಪಕ್ಷದಲ್ಲಿ 'ಮಾರ್ಗದರ್ಶಕ ಮಂಡಳಿ' ಸ್ಥಾಪಿಸಲಾಗಿದ್ದು, ಈ ಇಬ್ಬರು ಹಿರಿಯರು ಅದರ ಸದಸ್ಯರಾಗಿ ಪಕ್ಷಕ್ಕೆ ಮಾರ್ಗದರ್ಶನ ಮಾಡಲಿದ್ದಾರಂತೆ. ಆದರೆ, ನಿರ್ಣಾಯಕ ಮಂಡಳಿಯೇ ಅಂತಿಮ ನಿರ್ಧಾರ ಕೈಗೊಳ್ಳುವುದು ಖಾತ್ರಿಯಾಗಿದೆ. ವಿಶೇಷವೆಂದರೆ, ಮಾರ್ಗದರ್ಶಕ ಮಂಡಳಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ, ನರೇಂದ್ರ ಮೋದಿ, ರಾಜನಾಥ್ ಅವರ ಹೆಸರೂ ಸೇರಿಸಲಾಗಿದೆ.

ಅಡ್ವಾಣಿ ಅವರಿಗೆ ಸ್ಥಾನ ನೀಡದಿರಲು ಕಾರಣವೇನು? ಎಂಬ ಸರಳ ಪ್ರಶ್ನೆಗೆ ಬಿಜೆಪಿ ಸಿದ್ಧ ಉತ್ತರ ಇಟ್ಟುಕೊಂಡಿದೆ. 75 ವರ್ಷ ಮೀರಿದ ಮುಖಂಡರನ್ನು ಪಕ್ಷದ ಸಂಸದೀಯ ಮಂಡಳಿ, ಮೋದಿ ಕ್ಯಾಬಿನೆಟ್ ಗೆ ತೆಗೆದುಕೊಳ್ಳದಿರಲು ಈ ಮೊದಲೇ ನಿರ್ಧರಿಸಲಾಗಿತ್ತು ಎನ್ನಲಾಗಿದೆ.
ಆದರೆ, ಅಡ್ವಾಣಿ ಅಭಿಮಾನಿಗಳು ಮಾತ್ರ. ಪಕ್ಷದ ನಿರ್ಧಾರದಿಂದ ಬೇಜಾರಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರನ್ನು ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಯಿತು. ಅಡ್ವಾಣಿ ಅವರು ತಮ್ಮ ಇಷ್ಟದ ಕ್ಷೇತ್ರ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವನ್ನು ನೀಡಲಿಲ್ಲ. ಮೋದಿ ಕ್ಯಾಬಿನೆಟ್ ನಲ್ಲಿ ಸ್ಥಾನವೂ ಸಿಗಲಿಲ್ಲ. ಲೋಕಸಭಾ ಸ್ಪೀಕರ್, ಪಕ್ಷದ ಅಧ್ಯಕ್ಷ, ಎನ್ ಡಿಎ ಮುಖ್ಯಸ್ಥ ಸ್ಥಾನಮಾನವೂ ಇಲ್ಲ ಈಗ ಸಂಸದೀಯ ಮಂಡಳಿಯಿಂದಲೂ ಅಡ್ವಾಣಿ ಅವರಿಗೆ ಕೊಕ್ ನೀಡಲಾಗಿದೆ.
12 ಜನ ಸದಸ್ಯರ ಸಂಸದೀಯ ಮಂಡಳಿಯ ಸದಸ್ಯರು:
* ಅಮಿತ್ ಶಾ
* ನರೇಂದ್ರ ಮೋದಿ
* ರಾಜನಾಥ್ ಸಿಂಗ್
* ಅರುಣ್ ಜೇಟ್ಲಿ
* ಸುಷ್ಮಾ ಸ್ವರಾಜ್
* ವೆಂಕಯ್ಯ ನಾಯ್ಡು
* ನಿತಿನ್ ಗಡ್ಕರಿ
* ಅನಂತಕುಮಾರ್
* ತಾವರ್ ಚಂದ್ ಗೆಹ್ಲೋಟ್
* ಶಿವರಾಜ್ ಸಿಂಗ್ ಚೌಹಾಣ್
* ಜೆಪಿ ನಡ್ಡಾ
* ರಾಮಲಾಲ್
ಬಿಜೆಪಿಯ ಮಾರ್ಗದರ್ಶಕ ಮಂಡಳಿ ಸ್ಥಾಪನೆ ಬಗ್ಗೆ ತಕ್ಷಣವೇ ಪ್ರತಿಕ್ರಿಯಿಸಿರುವ ಕಾಂಗ್ರೆಸ, ' ಇದು ಮಾರ್ಗದರ್ಶಕ ಮಂಡಳಿ ಅಲ್ಲ ಮೂಕ ದರ್ಶಕ ಮಂಡಳಿ ಎಂದು ಹೇಳಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications