ಅಡ್ವಾಣಿಗೆ ತೊಂಬತ್ತು: ಶುಭಕೋರಿದ ಪ್ರಧಾನಿ ಮೋದಿ
ನವದೆಹಲಿ, ನವೆಂಬರ್ 08: 2002 ರಿಂದ 2004ರವರೆಗೆ ಉಪ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದ ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿಯವರ ಜನ್ಮದಿನ ಇಂದು. 1927 ನವೆಂಬರ್ 8 ರಂದು ಜನಿಸಿದ ಅಡ್ವಾಣಿಯವರು ಪ್ರಖರ ಹಿಂದುತ್ವವಾದಿಯಾಗಿ ಗುರುತಿಸಿಕೊಂಡವರು.
ಭಾರತೀಯ ಜನತಾ ಪಕ್ಷ ಇಂದು ಕೇಂದ್ರದಲ್ಲಿ ಸ್ವತಂತ್ರವಾಗಿ ಆಡಳಿತ ನಡೆಸುತ್ತಿದ್ದರೆ ಅದರಲ್ಲಿ ಅಡ್ವಾಣಿಯವರ ಕೊಡುಗೆ ಅಪಾರವಿದೆ. ಅಪನಗದೀಕರಣದ ಸುದ್ದಿಯ ಸದ್ದಿನಲ್ಲೂ ಅಡ್ವಾಣಿಯವರ ಜನ್ಮದಿನದ ಹ್ಯಾಶ್ ಟ್ಯಾಗ್ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಆಗಿದೆ.
ಕರಾಚಿಯ ವ್ಯಾಪಾರಿ ಕಿಶನ್ ಚಂದ್ ಅಡ್ವಾಣಿ ಮತ್ತು ಗ್ಯಾನಿ ದೇವಿ ಅವರ ಪುತ್ರನಾಗಿ ಜನಿಸಿದ ಅಡ್ವಾಣಿಯವರಿಗೆ ಈಗ 90ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಚಿಕ್ಕ ವಯಸ್ಸಿನಿಂದಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಅಡ್ವಾಣಿಯವರ ಹೆಸರು ಬಾಂಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಕೇಳಿಬಂದಿತ್ತು.
"ದೇಶದ ಸೇವೆಗಾಗಿ ತಮ್ಮ ಬದುಕನ್ನು ಮೀಸಲಿಟ್ಟ ರಾಜಕೀಯ ಅಗ್ರಗಣ್ಯರಾದ ಎಲ್.ಕೆ.ಅಡ್ವಾಣಿಯವರಿಗೆ ಜನ್ಮದಿನದ ಶುಭಾಶಯಗಳು" ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಜೊತೆಗೆ ದೇಶದ ಹಲವು ಗಣ್ಯರು ಬಿಜೆಪಿ ಮಾಜಿ ರಾಷ್ಟ್ರಾಧ್ಯಕ್ಷ ಅಡ್ವಾಣಿಯವರಿಗೆ ಜನ್ಮದಿನದ ಶುಭ ಕೋರಿದ್ದಾರೆ.
|
ನರೇಂದ್ರ ಮೋದಿ
ಲಾಲ್ ಕೃಷ್ಣ ಅಡ್ವಾಣಿಯವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ದೇವರು ಆಯುರಾರೋಗ್ಯ ನೀಡಲಿ ಎಂದು ನಾನು ಹಾರೈಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
|
ಆದರಣೀಯ ಅಡ್ವಾಣಿಜೀ ಅವರಿಗೆ ಶುಭಕಾಮನೆಗಳು
ಆದರಣೀಯ ಲಾಲ್ ಕೃಷ್ಣ ಅಡ್ವಾಣಿಯವರಿಗೆ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ನಾನು ಅವರ ದೀರ್ಘಾಯುಷ್ಯ ಮತ್ತು ಆರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಿಂದಿಯಲ್ಲಿಯೇ ಟ್ವೀಟ್ ಮಾಡಿದ್ದಾರೆ.
|
ನಮ್ಮ ಮಹಾನಾಯಕನಿಗೆ ಶುಭಾಶಯಗಳು
ಉಪಪ್ರಧಾನಿಯಾಗಿದ್ದ ಲಾಲ್ ಕೃಷ್ಣ ಅಡ್ವಾಣಿಯವರಿಗೆ ಜನ್ಮದಿನದ ಶುಭಾಶಯಗಳು. ಅವರು ನಮ್ಮೆಲ್ಲರ ಮಹಾನಾಯಕ. ಅವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ದಯಪಾಲಿಸಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.
|
ಅವರು ನಮಗೆ ತಂದೆಯ ಸಮಾನ
ಲಾಲ್ ಕೃಷ್ಣ ಅಡ್ವಾಣಿಯವರ 90 ನೇ ಹುಟ್ಟುಹಬ್ಬಕ್ಕೆ ಶುಭ ಕೋರಲು ಅವರ ಮನೆಗೆ ತೆರಳಿದ್ದೆ. ಅವರು ನಮಗೆ ತಂದೆ ಸಮಾನರು ಮತ್ತು ಮಹಾನ್ ನಾಯಕರು. ಅವರಿಗೆ ಆರೋಗ್ಯಪೂರ್ಣ ಜೀವನ ಸಿಗಲಿ ಎಂದು ಹಾರೈಸುತ್ತೇನೆ ಎಂದು ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿ ಶಂಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications