Get Updates
Get notified of breaking news, exclusive insights, and must-see stories!

Breaking: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸದ ಎಲ್‌ಕೆ ಅಡ್ವಾಣಿ

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಭಾಗವಹಿಸುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಉತ್ತರಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನಾ ಕಾರ್ಯ ನಡೆಯಲಿದೆ. ಈ ಬೃಹತ್ ಸಮಾರಂಭಕ್ಕೆ ಎಲ್‌ಕೆ ಅಡ್ವಾಣಿ ಸೇರಿದಂತೆ ಬಿಜೆಪಿಯ ಹಲವಾರು ರಾಜಕೀಯ ಗಣ್ಯರಿಗೆ ಆಹ್ವಾನಿಸಲಾಗಿದೆ. ಆದರೆ ಎಲ್‌ಕೆ ಅಡ್ವಾಣಿ ಅವರು ಈ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ತೀವ್ರ ಚಳಿಯ ಕಾರಣ ಇಂದು ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳದೇ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

LK Advani will not participate in Prana Pratistha in Ayodhya

96ರ ಹರೆಯದ ಬಿಜೆಪಿಯ ಹಿರಿಯ ನಾಯಕನ ಹಾಜರಾತಿ ಬಗ್ಗೆ ಸಾಕಷ್ಟು ಸಂದೇಹಗಳಿದ್ದವು. ಈ ಹಿಂದೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ರಾಮಮಂದಿರ ಟ್ರಸ್ಟ್, ಎಲ್‌ಕೆ ಅಡ್ವಾಣಿ ಮತ್ತು ಅವರ ಹಿರಿಯ ಪಕ್ಷದ ಸಹೋದ್ಯೋಗಿ ಮುರಳಿ ಮನೋಹರ್ ಜೋಶಿ ಅವರ ಆರೋಗ್ಯ ಮತ್ತು ವಯಸ್ಸಿನ ಕಾರಣ ಪ್ರಾಣ ಪ್ರತಿಷ್ಠಾದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ ಎಂದು ಹೇಳಿತ್ತು.

"ಇಬ್ಬರೂ ನಾಯಕರು ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಯಿತು. ಅದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ" ಎಂದು ರಾಮ್ ಟೆಂಪಲ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಕಳೆದ ತಿಂಗಳು ಸುದ್ದಿಗಾರರಿಗೆ ತಿಳಿಸಿದ್ದರು.

ಆದಾಗ್ಯೂ ಈ ತಿಂಗಳ ಆರಂಭದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡರೊಬ್ಬರು ಸುದ್ದಿ ಸಂಸ್ಥೆ ANI ಗೆ ಮಾತನಾಡಿ, ಎಲ್‌ಕೆ ಅಡ್ವಾಣಿ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದಿದ್ದರು. ವಿಎಚ್‌ಪಿಯ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್‌ಕುಮಾರ್‌ ಮಾತನಾಡಿ, ಬಿಜೆಪಿಯ ಯೋಧನಿಗೆ ಅಗತ್ಯವಿರುವ ಎಲ್ಲ ವ್ಯವಸ್ಥೆ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುವುದು ಅವರು ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದರು.

LK Advani will not participate in Prana Pratistha in Ayodhya

ಜೊತೆಗೆ ಡಿಸೆಂಬರ್‌ನಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಹಾಜರಾಗುವಂತೆ ವಿಎಚ್‌ಪಿ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ಆಹ್ವಾನ ನೀಡಿತ್ತು. ಆದರೆ ಇಂದು ಅವರು ರಾಮ ಮಂದಿರ ಉದ್ಘಾಟನೆಗೆ ಆಗಮಿಸುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಅಯೋಧ್ಯೆಗೆ ಬಿಗಿ ಭದ್ರತೆ

ಇಂದು ರಾಮಮಂದಿರದಲ್ಲಿ ರಾಮ ಲಲ್ಲಾನ ಭವ್ಯವಾದ 'ಪ್ರಾಣ ಪ್ರತಿಷ್ಠಾ'ಕ್ಕೆ ಕ್ಷಣಗಣನೆ ಪ್ರಾರಂಭವಾಗುತ್ತಿದ್ದಂತೆ ಅಯೋಧ್ಯೆಯನ್ನು ಹೂವುಗಳು ಮತ್ತು ಬೀದಿದೀಪಗಳು ಮತ್ತು ಭಗವಾನ್ ರಾಮನ ಪೋಸ್ಟರ್‌ಗಳಿಂದ ಅಲಂಕರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯಲ್ಲಿ 'ಪ್ರಾಣ ಪ್ರತಿಷ್ಠಾ' ವಿಧಿವಿಧಾನಗಳಿಗೆ ಚಾಲನೆ ನೀಡಲಿದ್ದಾರೆ.

ಬಾಂಬ್ ನಿಗ್ರಹ ದಳ ಮತ್ತು ಸ್ನೈಪರ್‌ಗಳು ಸೇರಿದಂತೆ 13,000 ಪಡೆಗಳೊಂದಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಎನ್‌ಡಿಆರ್‌ಎಫ್‌ನ ತಂಡವೊಂದು ಅಯೋಧ್ಯೆಯ ರಾಮಮಂದಿರದ ಬಳಿ ಶಿಬಿರವನ್ನು ಸ್ಥಾಪಿಸಿದೆ. 20,000 ಕ್ಕೂ ಹೆಚ್ಚು ವಾಹನಗಳಿಗೆ ಪಾರ್ಕಿಂಗ್ ಸ್ಥಳಗಳೊಂದಿಗೆ ಸಂಚಾರ ವ್ಯತ್ಯಯವನ್ನು ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+