ಪತ್ನಿ ಫೋಟೋ ಅಶ್ಲೀಲ ಎಡಿಟ್ ಮಾಡಿ ಲೋನ್ ರಿಕವರಿ ಪ್ಲ್ಯಾನ್, ಸಾಲಕ್ಕೆ ಹೋಯ್ತು ಪ್ರಾಣ
ಇತ್ತೀಚೆಗೆ ಆನ್ಲೈನ್ ಮೂಲಕವೇ ಸಾಲ ನೀಡುವ ಇನ್ಸ್ಟಂಟ್ ಲೋನ್ ಆಪ್ಗಳು ಸಾಕಷ್ಟು ಬಂದಿವೆ. ಆದರೆ ಲೋನ್ ರಿಕವರಿ ಹೆಸರಿನಲ್ಲಿ ಕಿರುಕುಳ ನೀಡುತ್ತಿರುವುದು ಹಾಗೂ ಇದರಿಂದ ಸಾಲ ಪಡೆದವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಅಲ್ಲದೆ ಸಾಲ ವಸೂಲಾತಿ ಹೆಸರಲ್ಲಿ ಏಜೆಂಟ್ಗಳು ಮಾಡಿದ ಕೆಲಸಕ್ಕೆ ನವವಿವಾಹಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹೌದು, ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಈ ದಾರುಣ ಘಟನೆ ನಡೆದಿದೆ ಎನ್ನಲಾಗಿದೆ. ಇನ್ಸ್ಟಂಟ್ ಲೋನ್ ಆಪ್ ಕಂಪನಿಯವರ ಕಿರುಕುಳದಿಂದ ಬೇಸತ್ತು 25 ವರ್ಷದ ನರೇಂದ್ರ ಎಂಬ ವ್ಯಕ್ತಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನ ಮಹಾರಾಣಿಪೇಟಾ ಪ್ರದೇಶದಲ್ಲಿ ವರದಿಯಾಗಿದೆ.

ಇನ್ನು ಮೃತ ನರೇಂದ್ರ ಇತ್ತೀಚೆಗಷ್ಟೇ ವಿವಾಹವಾಗಿದ್ದ. ಈತ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಪತ್ನಿಯೊಂದಿಗೆ ಅನ್ಯೋನ್ಯವಾಗಿ ಬದುಕು ನಡೆಸುವ ಕನಸು ಕಂಡಿದ್ದ ನರೇಂದ್ರ ಅವರ ಬಾಳಲ್ಲಿ ಇತ್ತೀಚೆಗೆ ಬರಸಿಡಿಲು ಬಡಿದಿತ್ತು. ಇತ್ತೀಚೆಗೆ ಅಲ್ಲಿ ಹವಾಮಾನ ವೈಪರೀತ್ಯದಿಂದ ನಷ್ಟ ಅನುಭವಿಸಿದ್ದ ಹಿನ್ನೆಲೆ ಆನ್ಲೈನ್ ಲೋನ್ ಆ್ಯಪ್ ಮೂಲಕ 2,000 ರೂಪಾಯಿ ಹಣ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.
ಆದರೆ, ಪಡೆದ ಸಾಲದ ಅಸಲು ಮೊತ್ತಕ್ಕಿಂತ ಹೆಚ್ಚಿನ ಮೊತ್ತವನ್ನು ಬಡ್ಡಿ ಸಮೇತ ಮರುಪಾವತಿಸಿದ್ದರು. ಆದರೆ ಲೋನ್ ಆ್ಯಪ್ ಅವರು ಇದರ ಹೊರತಾಗಿಯೂ ಉಳಿದಿರುವ ಬಾಕಿಯನ್ನು ತೆರವುಗೊಳಿಸುವಂತೆ ಒತ್ತಡ ಹೇರಿದ್ದರು. ಅಲ್ಲದೆ ಲೋನ್ ಆ್ಯಪ್ನ ಸಿಬ್ಬಂದಿ ಮೃತ ನರೇಂದ್ರ ಅವರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
ಅಲ್ಲದೆ ಏಜೆಂಟರ್ ಅಸಭ್ಯ ಭಾಷೆಗಳಿಂದ ನರೇಂದ್ರ ಅವರಿಗೆ ಮೆಸೇಜ್ ಕಳುಹಿಸುತ್ತಿದ್ದರು. ಇಷ್ಟಕ್ಕೆ ಸುಮ್ಮನಾಗದ ಅವರು ನರೇಂದ್ರ ಅವರ ಪತ್ನಿಯ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಅವರ ಕುಟುಂಬಸ್ಥರು ಹಾಗೂ ಸ್ನೇಹಿತರಿಗೆ ಕಳುಹಿಸಿ ವಿಕೃತಿ ಮೆರೆದಿದ್ದರು. ಕೊನೆಗೆ ಪತ್ನಿಗೂ ಈ ಫೋಟೋಗಳನ್ನು ಕಳಿಸಿದಾಗ ನರೇಂದ್ರ ಅವರಿಗೆ ವಿಷಯ ಗೊತ್ತಾಗಿದೆ.

ನರೇಂದ್ರ ಹಾಗೂ ಅವರ ಪತ್ನಿಯ ಮಾರ್ಫ್ ಮಾಡಿದ ಫೋಟೋಗಳನ್ನು ಅವರ ಸಂಬಂಧಿಕರಿಗೆ ಕಳಿಸಿದ್ದರಿಂದ ಮನನೊಂದು ನರೇಂದ್ರ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ನರೇಂದ್ರ ಅವರ ಕುಟುಂಬಸ್ಥರು ಪೊಲೀಸರು ಹಾಗೂ ವಿಶಾಖಪಟ್ಟಣಂ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ, ಆ ಆಪ್ನವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸಹಾಯಕ ಪೊಲೀಸ್ ಆಯುಕ್ತ (ಪೂರ್ವ ವಿಭಾಗ) ಎಲ್.ಲಕ್ಷ್ಮಣ ಮೂರ್ತಿ ಅವರು ಸೈಬರ್ ಕ್ರೈಂ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಈ ಕಿರುಕುಳಕ್ಕೆ ಕಾರಣರಾದ ಲೋನ್ ಆಪ್ನವರ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ. ನರೇಂದ್ರ ಅವರ ಸಾವಿಗೆ ನಿಖರ ಕಾರಣಗಳಲ್ಲೂ ಅವರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಸಾಲ ವಸೂಲಿ ಹೆಸರಿನಲ್ಲಿ ಈ ರೀತಿಯ ಕಿರುಕುಳಗಳಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ತುರ್ತು ಸಂದರ್ಭಗಳಿಗೆ ಸುಲಭವಾಗಿ ಸಾಲ ಸಿಗುತ್ತೆ ಎಂದು ಇವರ ಜಾಲದಲ್ಲಿ ಸಿಲುಕಿ ಕೊನೆಗೆ ಪ್ರಾಣವನ್ನೇ ಕಳೆದುಕೊಳ್ಳಬೇಕಾದ ಸ್ಥಿತಿ ಎದುರಾಗಿದೆ ಎಂದು ಹಲವರು ಈ ಘಟನೆಯನ್ನು ಖಂಡಿಸಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications