ಸರ್ಕಾರಿ ಸಿಬ್ಬಂದಿಗೆ ಶುಭಸುದ್ದಿ: ಕಚೇರಿ ಹಾಜರಾಗುವ ಬಗ್ಗೆ ಇಲ್ಲಿದೆ ಮಾಹಿತಿ
ನವದೆಹಲಿ, ಮೇ.21: ನೊವೆಲ್ ಕೊರೊನಾ ವೈರಸ್ ಭೀತಿ ನಡುವೆ ಕಚೇರಿಗಳು ಕಾರ್ಯಾರಂಭ ಮಾಡಿವೆ. ಸಿಬ್ಬಂದಿಯು ಕಚೇರಿಗಳಿಗೆ ಹಾಜರಾಗುವಂತೆ ಆದೇಶಿಸಿದ ನೌಕರರು ಹಾಗೂ ತರಬೇತಿ ಇಲಾಖೆಯು ಗರ್ಭಿಣಿಯರಿಗೆ ವಿನಾಯಿತಿ ನೀಡಿದೆ.
Recommended Video
ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ವೆಟರ್ನರಿ ರಜೆಯಲ್ಲಿ ಇರುವ ಮಹಿಳೆಯರು ಕರ್ತವ್ಯಕ್ಕೆ ಹಾಜರಾಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ಸಂಬಂಧ ದೇಶದ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇರುವ ಸಚಿವಾಲಯ ಮತ್ತು ಇಲಾಖೆಗಳಿಗೆ ಸರ್ಕ್ಯುಲರ್ ಹೊರಡಿಸಲಾಗಿದೆ.
ಗರ್ಭಿಣಿ ಹಾಗೂ ವಿಕಲಾಂಗ ಚೇತನ ಸಿಬ್ಬಂದಿ ಕೂಡಾ ಕಚೇರಿಗಳಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಕೊರೊನಾ ವೈರಸ್ ಭೀತಿ ನಡುವೆ ಅನಾರೋಗ್ಯಕ್ಕೆ ತುತ್ತಾದ ಸಿಬ್ಬಂದಿ ಹಾಗೂ ಅಸ್ವಸ್ಥಗೊಂಡ ನೌಕರರು ಕಚೇರಿಗಳಿಗೆ ಹಾಜರಾಗಲು ಅವಕಾಶವಿಲ್ಲ.

ಅನಾರೋಗ್ಯಪೀಡಿತ ಮತ್ತು ಅಸ್ವಸ್ಥ ಸಿಬ್ಬಂದಿಗೂ ವಿನಾಯತಿ
ನೊವೆಲ್ ಕೊರೊನಾ ವೈರಸ್ ಭೀತಿ ನಡುವೆ ಅಸ್ವಸ್ಥಗೊಂಡ ಮತ್ತು ಅನಾರೋಗ್ಯದಿಂದ ಚಿಕಿತ್ಸೆಗೆ ಒಳಗಾದ ಸಿಬ್ಬಂದಿಗೂ ವಿನಾಯಿತಿ ನೀಡಲಾಗಿದೆ. ಸಿಜಿಹೆಚ್ಎಸ್/ಸಿಎ (ಎಂಹೆಚ್) ಕಾಯ್ದೆ ಅನ್ವಯ ವೈದ್ಯರು ಸಲಹೆ ನಂತರ ಸಿಬ್ಬಂದಿಯು ಕಚೇರಿಗೆ ಹಾಜರಾಗಲು ಅವಕಾಶ ನೀಡಲಾಗಿದೆ.

ಕಚೇರಿಗಳನ್ನು ತೆರೆಯುವ ವೇಳಾಪಟ್ಟಿ ನಡುವೆ ಅಂತರ
ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಲಭ್ಯತೆ ಆಧಾರದ ಮೇಲೆ ಹೆಚ್ಚಿನ ಜನದಟ್ಟಣೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ ಕಚೇರಿ ಸಮಯವನ್ನು ನಿಗದಿಪಡಿಸಬೇಕಾಗಿದೆ. ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರವೇಶ ಮತ್ತು ನಿರ್ಗಮನದ ಸಮಯದಲ್ಲಿ ಅಂತರ ಕಾಯ್ದುಕೊಳ್ಳಬೇಕಿದೆ.

ಮೂರು ಶಿಫ್ಟ್ ಗಳಲ್ಲಿ ಸರ್ಕಾರಿ ಕಚೇರಿಗಳ ಕಾರ್ಯ
ಸರ್ಕಾರಿ ಕಚೇರಿಗಳಲ್ಲೂ ಕೂಡಾ ಶಿಫ್ಟ್ ಗಳ ಆಧಾರದಲ್ಲಿ ಕೆಲಸ ನಿರ್ವಹಿಸಲು ಸರ್ಕ್ಯುಲರ್ ನಲ್ಲಿ ಸೂಚನೆ ನೀಡಲಾಗಿದೆ. ಬೆಳಗ್ಗೆ 9 ರಿಂದ ಸಂಜೆ 5ವರೆಗೂ ಮೊದಲ ಶಿಫ್ಟ್. ಬೆಳಗ್ಗೆ 9.30 ರಿಂದ ಸಂಜೆ 6ವರೆಗೂ ಎರಡನೇ ಶಿಫ್ಟ್. ಹಾಗೂ ಬೆಳಗ್ಗೆ 10 ರಿಂದ ಸಂಜೆ 6.30ರ ಮೂರು ಅವಧಿಯಲ್ಲಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಎಲ್ಲ ಇಲಾಖೆಗಳಿಗೂ ಸಲಹೆ ನೀಡಲಾಗಿದೆ.

ಎಲ್ಲ ದಿನಗಳಲ್ಲೂ ಹಿರಿಯ ಅಧಿಕಾರಿಗಳ ಕಡ್ಡಾಯ ಹಾಜರಿ
ಡೆಪ್ಯುಟಿ ಸೆಕ್ರಟರಿ ಹಂತ ಹಾಗೂ ಅದಕ್ಕಿಂತ ಮೇಲ್ಪಟ್ಟ ಅಧಿಕಾರಿಗಳು ಎಲ್ಲ ಕೆಲಸದ ದಿನಗಳಲ್ಲೂ ಕಚೇರಿಗಳಿಗೆ ಕಡ್ಡಾಯವಾಗಿ ಹಾಜರಾಗಬೇಕು. ಡೆಪ್ಯುಟಿ ಸೆಕ್ರಟರಿ ಹಂತದಿಂದ ಕೆಳಗಿರುವ ಸಿಬ್ಬಂದಿಯು ಶೇ.50ರಷ್ಟು ಮಾತ್ರ ಕಚೇರಿಗೆ ಹಾಜರಾಗಬೇಕು. ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಫೋನ್ ಮತ್ತು ವಿದ್ಯುತ್ ವ್ಯವಸ್ಥೆಗಳಿದ್ದಲ್ಲಿ ಮನೆಯಲ್ಲಿದ್ದುಕೊಂಡೇ ಕರ್ತವ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications