21 ದಿನದ ಲಾಕ್ ಡೌನ್; ವಲಸೆ ಕಾರ್ಮಿಕರು ಸಂಕಷ್ಟದಲ್ಲಿ
ನವದೆಹಲಿ, ಏಪ್ರಿಲ್ 06 : ಕೊರೊನಾ ಹರಡದಂತೆ ತಡೆಯಲು 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ ಹೆಚ್ಚು ಸಂಕಷ್ಟಕ್ಕೆ ಸಿಲುಕಿರುವುದು ವಲಸೆ ಕಾರ್ಮಿಕರು. ಅವರಿಗೆ ಮುಂದೆ ಕೆಲಸ ಸಿಗುತ್ತದೆಯೇ? ಎಂಬ ಭೀತಿ ಆವರಿಸಿದೆ.
3196 ಕಾರ್ಮಿಕರನ್ನು ಮಾತನಾಡಿಸಿ ಮಾಡಿರುವ ಸಮೀಕ್ಷೆಯ ವರದಿಗಳು ನಿಜಕ್ಕೂ ಗಾಬರಿ ಮೂಡಿಸುತ್ತದೆ. ಈ ಕಾರ್ಮಿಕರಿಗೆ ತುರ್ತಾಗಿ ಬೇಕಾಗಿರುವುದು ಆಹಾರ ಪದಾರ್ಥಗಳು. ಇವರಲ್ಲಿ ಶೇ 83ರಷ್ಟು ಜನರು ಏಪ್ರಿಲ್ 14ರ ಬಳಿಕ ಯಾವ ಕೆಲಸ ಹುಡುಕುವುದು ಎಂದು ಚಿಂತೆಯಲ್ಲಿದ್ದಾರೆ.
21 ದಿನಗಳ ಲಾಕ್ ಡೌನ್ ಅವಧಿಯಲ್ಲಿ ಶೇ 92.5ರಷ್ಟು ಜನರು ತಮ್ಮ ಕೆಲಸಗಳನ್ನು ಕಳೆದುಕೊಂಡಿದ್ದಾರೆ. ಜನ ಸಾಹಸ್ ಎಂಬ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆ ಉತ್ತರ ಮತ್ತು ಮಧ್ಯ ಭಾರತದ ಕಾರ್ಮಿಕರನ್ನು ದೂರವಾಣಿ ಮೂಲಕ ಮಾತನಾಡಿಸಿ ಸಮೀಕ್ಷೆ ನಡೆಸಿದೆ.

ಶೇ 42 ರಷ್ಟು ಜನರು ಒಂದು ದಿನಕ್ಕೆ ಆಗುವಷ್ಟು ಮಾತ್ರ ಆಹಾರ ಪದಾರ್ಥಗಳು ಉಳಿದಿವೆ. ಮುಂದೇನು ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ. ಲಾಕ್ ಡೌನ್ 21 ದಿನಗಳಾದ ಮೇಲೂ ಮುಂದುವರೆದರೆ ಮನೆಯ ಖರ್ಚನ್ನು ಹೊಂದಿಸಲು ಸಾಧ್ಯವಿಲ್ಲ ಎಂದು ಶೇ 66ರಷ್ಟು ಜನರು ಸಮೀಕ್ಷೆಯಲ್ಲಿ ತಿಳಿಸಿದ್ದಾರೆ.
ಕೆಲವು ಕಾರ್ಮಿಕರು ನಗರದಲ್ಲಿಯ ಕ್ಯಾಂಪ್ಗಳಲ್ಲಿ ಸಿಲುಕಿದ್ದಾರೆ. ಲಾಕ್ ಡೌನ್ ಮುಗಿದ ಮೇಲೆ ಮುಂದೇನು? ಎಂಬ ಪ್ರಶ್ನೆಗೆ ಅವರ ಬಳಿ ಉತ್ತರವಿಲ್ಲ. ಇನ್ನೂ ಕೆಲವರು ಹಳ್ಳಿಗಳಿಗೆ ತಲುಪಿದ್ದಾರೆ. ಆದರೆ, ಕೆಲಸವಿಲ್ಲದೇ ಕೈ ಖಾಲಿಯಾಗಿದೆ.
ಹಲವು ಕಾರ್ಮಿಕರು ಖಾಸಗಿ ವ್ಯಕ್ತಿಗಳ ಬಳಿ ಸಾಲವನ್ನು ಮಾಡಿದ್ದಾರೆ. ಆ ಸಾಲವನ್ನು ತೀರಿಸುವುದು ಹೇಗೆ? ಎಂಬುದು ಅವರ ಚಿಂತೆಯಾಗಿದೆ. ಈಗ ಮಾಡಿಕೊಂಡಿದ್ದ ಕೆಲಸವನ್ನು ಲಾಕ್ ಡೌನ್ ಅವಧಿ ಮುಗಿದ ಮೇಲೆ ಮುಂದುವರೆಸಲು ಅವಕಾಶ ಸಿಗಲಿದೆಯೇ? ಎಂಬುದು ಇನ್ನೂ ತಿಳಿದಿಲ್ಲ.
ಶೇ 55 ರಷ್ಟು ಕಾರ್ಮಿಕರು ದಿನಕ್ಕೆ 200 ರಿಂದ 400 ರೂ. ಸಂಪಾದನೆ ಮಾಡುತ್ತಾರೆ. ಅದರಲ್ಲಿ ಅವರು ನಾಲ್ವರು ಇರುವ ಕುಟುಂಬವನ್ನು ಸಾಕುತ್ತಾರೆ. ಶೇ 39ರಷ್ಟು ಕಾರ್ಮಿಕರು 400 ರಿಂದ 600 ರೂ. ಗಳಿಸುತ್ತಾರೆ. ಆದರೆ, ಕನಿಷ್ಠ ಕೂಲಿ ಕಾನೂನಿಗಿಂತಲೂ ಕಡಿಮೆ ಸಂಪಾದನೆ ಮಾಡುತ್ತಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications