ಲಾಕ್ ಡೌನ್ ಅಂದರೆ ಆನ್, ಆಫ್ ಸ್ವಿಚ್ ಅಲ್ಲ: ಮೋದಿಗೆ ಗಂಭೀರ ಪ್ರಶ್ನೆ ಎಸೆದ ರಾಹುಲ್ ಗಾಂಧಿ
ನವದೆಹಲಿ, ಮೇ 8: ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಂ ರಾಜನ್ ಮತ್ತು ಪ್ರೊ. ಅಭಿಜಿತ್ ಬ್ಯಾನರ್ಜಿಯವರಿಂದ ಮಹತ್ವದ ಟಿಪ್ಸ್ ಅನ್ನು ಪಡೆದುಕೊಂಡಿರುವ ರಾಹುಲ್ ಗಾಂಧಿ, ಮೋದಿ ಸರಕಾರಕ್ಕೆ ಗಂಭೀರ ಪ್ರಶ್ನೆಯನ್ನು ಎಸೆದಿದ್ದಾರೆ.
ರಾಜಧಾನಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ,"ಮೇ 17ರಂದು, ಮೂರನೇ ಹಂತದ ಲಾಕ್ ಡೌನ್ ಮುಕ್ತಾಯಗೊಂಡ ನಂತರದ ಮತ್ತು ಆರ್ಥಿಕತೆ ಸುಧಾರಣೆಯ ಕಾರ್ಯತಂತ್ರದ ಬಗ್ಗೆ ಕೇಂದ್ರ ಸರಕಾರ, ಜನರಿಗೆ ತಿಳಿಸುವ ಅಗತ್ಯವಿದೆ" ಎಂದು ಹೇಳಿದರು.
"ಲಾಕ್ ಡೌನ್ ಎಂದರೆ ಅದು ಆನ್, ಆಫ್ ಸ್ವಿಚ್ ಅಲ್ಲ. ಮೋದಿ ಸರಕಾರ ತನ್ನ ಮುಂದಿನ ಯೋಜನೆಗಳ ಬಗ್ಗೆ ಪಾರದರ್ಶತೆಯಿಂದ ಕೆಲಸ ಮಾಡಬೇಕಿದೆ. ಯಾವುದೇ ಯೋಜನೆಯನ್ನು ಆರಂಭಿಸುವ ಮುನ್ನ, ಅದಕ್ಕೆ ಬಳಸಲಾಗುವ ಮಾನದಂಡಗಳು ಯಾವುವು ಎನ್ನುವುದರ ಬಗ್ಗೆಯೂ ಸ್ಪಷ್ಟತೆ ಇರಬೇಕು"ಎಂದು ರಾಹುಲ್ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

"ಮೊದಲು ಕೊರೊನಾ ಬಗ್ಗೆ ಜನರಿಗೆ ಇರುವ ಭಯವನ್ನು ದೂರ ಮಾಡಬೇಕು. ಇದೇನು ಮಾರಕ ರೋಗವಲ್ಲ. ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡರೆ, ಏನೂ ತೊಂದರೆಯಾಗುವುದಿಲ್ಲ ಎನ್ನುವುದು ಸಾರ್ವಜನಿಕರಿಗೆ ಮನವರಿಕೆ ಮಾಡಬೇಕಿದೆ"ಎಂದು ರಾಹುಲ್ ಅಭಿಪ್ರಾಯ ಪಟ್ಟಿದ್ದಾರೆ.
"ಕೇಂದ್ರ ಸರಕಾರ ವಲಸೆ ಕಾರ್ಮಿಕರು ಮತ್ತು ಕಷ್ಟದಲ್ಲಿರುವ ಜನರಿಗೆ ಯಾವುದೇ ವಿಳಂಬ ಮಾಡದೇ ನೇರ ನಗದು ವರ್ಗಾವಣೆ ಮಾಡಬೇಕು" ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
"ಕೊರೊನಾ ರೋಗವು ಕೆಲವು ವರ್ಗದ ಜನರಿಗೆ ಮಾಅತ್ರ ಅಪಾಯಕಾರಿ. ವಯಸ್ಸಾದವರಿಗೆ, ಮಧುಮೇಹ, ಅಧಿಕ ರಕ್ತದೊತ್ತಡ ಇತ್ಯಾದಿ ಇರುವವರಿಗೆ ಇದು ಅಪಾಯಕಾರಿ. ಆದರೆ ಅದನ್ನು ಹೊರತುಪಡಿಸಿ, ಇದು ಅಪಾಯಕಾರಿ ರೋಗವಲ್ಲ" ಎಂದು ರಾಹುಲ್ ಗಾಂಧಿ ಹೇಳಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications