Republic Doubl Exit Poll 2024: ದೇಶದಲ್ಲಿ ಮತ್ತೆ ಪ್ರಧಾನಿ ಮೋದಿ ಸರ್ಕಾರ ರಚನೆ? 'ಇಂಡಿಯಾ' ಕೂಟಕ್ಕೆ ಆಘಾತ, ವರದಿ
ನವದೆಹಲಿ, ಜೂನ್ 01: ಭಾರತದಲ್ಲಿ ಸಾರ್ವತ್ರಿಕ ಚುನಾವಣೆ- 2024ರ ಏಳು ಹಂತಗಳ ಚುನಾವಣೆ ಪೂರ್ಣಗೊಂಡಿದೆ. ಇಂದು ಶನಿವಾರ (ಜೂನ್ 01) ಏಳು ರಾಜ್ಯ ಮತ್ತು ಒಂದು ಕೇಂದ್ರಾಳಿತ ಪ್ರದೇಶ ಒಳಗೊಂಡಂತೆ ಒಟ್ಟು 57 ಕ್ಷೇತ್ರಗಳಿಗೆ 7ನೇ ಹಂತ ಚುನಾವಣೆ ನಡೆಯಿತು. ಇಂದು ಸಾರ್ವತ್ರಿಕ ಚುನಾವಣೋತ್ತರವಾಗಿ Republic TV with PMARQ and Matrize Exit Poll ಸಮೀಕ್ಷೆ ಬಿಡುಗಡೆ ಮಾಡಿದೆ.
ಪಬ್ಲಿಕ್ ಟಿವಿ ಮತ್ತು ಮ್ಯಾಟ್ರಿಜ್ ಎಕ್ಸಿಟ್ ಪೋಲ್ 2024 ಪ್ರಕಾರ, ದೇಶದ ಒಟ್ಟು ಸ್ಥಾನಗಳಲ್ಲಿ ಎನ್ಡಿಎ 353-368 ಸ್ಥಾನಗಳನ್ನು ಪಡೆಯಲಿದೆ. ಇಂಡಿಯಾ ಮೈತ್ರಿಕೂಟ 118-133 ಸ್ಥಾನಗಳನ್ನು ಪಡೆಯಲಿದ್ದು, ಇತರರು 43-48 ಸ್ಥಾನಗಳನ್ನು ಪಡೆಯುತ್ತಾರೆ ಎಂದು ಸಮೀಕ್ಷೆ ಮಾಹಿತಿ ನೀಡಿದೆ.

ಎನ್ಡಿಎ ಮೈತ್ರಿಕೂಟದ ವಿರುದ್ಧ ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಉದ್ದೇಶದಿಂದ ವಿಪಕ್ಷಗಳು 'ಇಂಡಿಯಾ' ಮೈತ್ರಿಕೂಟ ರಚಿಸಿಕೊಂಡವು. ದೇಶದಲ್ಲಿರುವ ಒಟ್ಟು 543 ಕ್ಷೇತ್ರಗಳ ಪೈಕಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಯ ಪಕ್ಷವು ಗರಿಷ್ಠ 368 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ರಿಪಬ್ಲಿಕ್ ಟಿವಿ ಚುನಾವಣೋತ್ತರ ಸಮೀಕ್ಷೆಯು ಮಾಹಿತಿ ನೀಡಿದೆ.
ಕೇಂದ್ರ ಮಟ್ಟದಲ್ಲಿ ಎಲ್ಲ ವಿಪಕ್ಷಗಳು ಮಾಡಿಕೊಂಡಿರುವ ಇಂಡಿಯಾ ಮೈತ್ರಿಕೂಟವು 2024ರ ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಒಟ್ಟು 118-133 ಸ್ಥಾನಗಳನ್ನು ಗೆಲ್ಲಲ್ಲಿದೆ. ಇನ್ನು ಇತರ ಪಕ್ಷಗಳು ಕೇವಲ 43-48 ಸ್ಥಾನ ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ಸಮೀಕ್ಷೆ ತಿಳಿಸಿದೆ.
ಸಾರ್ವತ್ರಿಕ ಚುನಾವಣೆಗೆ ಒಳನೋಟ
ದೇಶದಲ್ಲಿ ಒಟ್ಟು ಏಳ ಹಂತಗಳ ಪೈಕಿ ಮೊದಲ ಹಂತದ ಮತದಾನ ಏಪ್ರಿಲ್ 19ರಂದು, ಏಪ್ರಿಲ್ 26ರಂದು 2ನೇ ಹಂತದ ಚುನಾವಣೆ, ಮೇ 7ರಂದು 3ನೇ ಹಂತದಲ್ಲಿ ಮತದಾನ ನಡೆಯಿತು. ಇನ್ನೂ 4ನೇ ಹಂತದ ಮತದಾನ ಮೇ 13ರಂದು ನಡೆದರೆ, ಮೇ 20ರಂದು 5ನೇ ಹಂತದ ಮತದಾನ ಜರುಗಿತು.
ಮೇ 25ರಂದು 6ನೇ ಹಂತ ಹಾಗೂ ಇಂದು ಶನಿವಾರ ಜೂನ್ 1ರಂದು 7ನೇ ಹಂತದ ಮತದಾನದ ಮೂಲಕ ದೇಶದ ಸಾರ್ವತ್ರಿಕ ಚುನಾವಣೆ ನಡೆದಿದೆ. ಜೂನ್ 04ರಂದು ಕೇಂದ್ರ ಚುನಾವಣೆ ಆಯೋದಿಂದ ಅಧಿಕೃತ ಫಲಿತಾಂಶ ಹೊರ ಬೀಳಲಿದೆ. ಅದಕ್ಕೂ ಮೊದಲು ಇಂದು ರಿಪಬ್ಲಿಕ್ ಟಿವಿ ಸುದ್ದಿ ಎರಡು ಸಂಸ್ಥೆಗಳ ಜೊತೆಗೆ ಸಮೀಕ್ಷೆ ನಡೆಸಿ ಶನಿವಾರ ಚುನಾವಣೋತ್ತರ ಸಮೀಕ್ಷೆ ಬಿಡುಗಡೆ ಮಾಡಿತು.
ಇನ್ನೂ 2019ರ ಲೋಕಸಭಾ ಚುನಾವಣೆಯಲ್ಲಿ ECI ಅಧಿಕೃತ ಮಾಹಿತಿ ಪ್ರಕಾರ ಬಿಜೆಪಿ ಒಟ್ಟು 303 ಸೀಟು ಗೆದ್ದರೆ, ಕಾಂಗ್ರೆಸ್ 52 ಸ್ಥಾನ ಗೆದ್ದಿದೆ. ಡಿಎಂಕೆ 23 ಸ್ಥಾನ, ವೈಎಸ್ಆರ್ಪಿ ಪಕ್ಷ 23 ಸೀಟುಗಳನ್ನು ಗೆದ್ದಿತ್ತು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications