ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಚುನಾವಣೆ ಘೋಷಣೆ : ಯಾರು, ಏನು ಹೇಳಿದರು?

|
Google Oneindia Kannada News

Recommended Video

Lok Sabha Elections 2019 : ಲೋಕಸಭಾ ಚುನಾವಣೆ ಬಗ್ಗೆ ರಾಜಕೀಯ ನಾಯಕರ ಪ್ರತಿಕ್ರಿಯೆ | Oneindia Kannada

ಬೆಂಗಳೂರು, ಮಾರ್ಚ್ 10 : ಕೇಂದ್ರ ಚುನಾವಣಾ ಆಯೋಗ 17ನೇ ಲೋಕಸಭಾ ಚುನಾವಣೆ ದಿನಾಂಕವನ್ನು ಭಾನುವಾರ ಘೋಷಣೆ ಮಾಡಿದೆ. ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು ಚುನಾವಣಾ ವೇಳಾಪಟ್ಟಿ ಪ್ರಕಟಿಸಿದರು. ಏಪ್ರಿಲ್ 18 ಮತ್ತು 23ರಂದು ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಲೋಕ ಸಮರ : 7 ಹಂತದಲ್ಲಿ ಮತದಾನ, ಮೇ 23ರಂದು ಫಲಿತಾಂಶಲೋಕ ಸಮರ : 7 ಹಂತದಲ್ಲಿ ಮತದಾನ, ಮೇ 23ರಂದು ಫಲಿತಾಂಶ

ದೇಶದ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ದಿನಾಂಕ ಘೋಷಣೆಗಾಗಿ ಕಾಯುತ್ತಿದ್ದವು. ಚುನಾವಣೆಗೆ ನಾವು ಸಿದ್ಧರಿದ್ದೇವೆ ಎಂದು ವಿವಿಧ ಪಕ್ಷಗಳು ಘೋಷಣೆ ಮಾಡಿವೆ. ಈ ಬಾರಿಯ ಚುನಾವಣೆ ಹಲವು ಕಾರಣಗಳಿಗಾಗಿ ಕುತೂಹಲಕ್ಕೆ ಕಾರಣವಾಗಿದೆ.

ಲೋಕಸಭೆ ಚುನಾವಣೆ 2019ರ ಮಾಹಿತಿ ಅಂಕಿ- ಅಂಶಗಳಲ್ಲಿ ಲೋಕಸಭೆ ಚುನಾವಣೆ 2019ರ ಮಾಹಿತಿ ಅಂಕಿ- ಅಂಶಗಳಲ್ಲಿ

'ದೇಶ ಮತ್ತೊಂದು ಚುನಾವಣೆಗೆ ಸಜ್ಜಾಗಿದೆ. ಪ್ರಜಾತಂತ್ರದ ಈ ಸಮರದಲ್ಲಿ ಚುನಾವಣೆ ಪ್ರಕ್ರಿಯೆಯನ್ನು ಸ್ವತಂತ್ರ, ನಿಷ್ಪಕ್ಷಪಾತವಾಗಿ ನಡೆಯುವುದು ಎಂದು ಆಶಿಸುತ್ತೇನೆ' ಎಂದು ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ತೀರ್ಪನ್ನು ಗೌರವಿಸೋಣ

'ಎಲ್ಲಾ ಪಕ್ಷಗಳು, ಅಭ್ಯರ್ಥಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವುದರೊಂದಿಗೆ ಮತದಾರರ ತೀರ್ಪನ್ನು ಗೌರವಿಸೋಣ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಘೋಷಣೆಯನ್ನು ಸ್ವಾಗತಿಸುತ್ತೇವೆ

'ಕಾಂಗ್ರೆಸ್ಸಿನ ಕಾರ್ಯಕರ್ತರು, ನಾಯಕರು ಚುನಾವಣೆಗೆ ಸಂಪೂರ್ಣ ಸನ್ನದ್ಧರಾಗಿದ್ದು, ಚುನಾವಣಾ ದಿನಾಂಕ ಘೋಷಣೆಯನ್ನು ಸ್ವಾಗತಿಸುತ್ತೇವೆ' ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್‌ ಮಾಡಿದೆ.

ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ 2 ಹಂತದ ಮತದಾನ ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ 2 ಹಂತದ ಮತದಾನ

ಸರ್ಕಾರವನ್ನು ಬದಲಾಯಿಸುವ ಸಮಯ ಬಂದಿದೆ

'ಲೋಕ ಸಭಾ ಚುನಾವಣೆ ಘೋಷಣೆ ಆಗಿದೆ. 5 ವರುಷ ಯಾವ ಭರವಸೆಯನ್ನು ಈಡೇರಿಸದೆ ಸುಳ್ಳು ಕಲ್ಪನೆಯನ್ನು ತೋರಿಸಿದ ಮೋದಿ ಸರ್ಕಾರವನ್ನು ಬದಲಾಯಿಸುವ ಸಮಯ ಹತ್ತಿರ ಬಂದಿದೆ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Array

ಮತ್ತೊಮ್ಮೆ ಮೋದಿ

ಮತ್ತೊಮ್ಮೆ ಮೋದಿ ಅವರನ್ನು ಆಯ್ಕೆ ಮಾಡಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.

ಎಲ್ಲ ಪಕ್ಷಗಳ ಧ್ಯೇಯ ಒಂದೇ; ಪ್ರಧಾನಿ ನರೇಂದ್ರ ಮೋದಿ ಟ್ವೀಟ್ಎಲ್ಲ ಪಕ್ಷಗಳ ಧ್ಯೇಯ ಒಂದೇ; ಪ್ರಧಾನಿ ನರೇಂದ್ರ ಮೋದಿ ಟ್ವೀಟ್

ಕಾಂಗ್ರೆಸ್‌ ಮುಕ್ತ ಭಾರತ

ಭಾರತವನ್ನು ಕಾಂಗ್ರೆಸ್‌ ಮುಕ್ತ ಮಾಡಲು ದಿನಾಂಕ ಘೋಷಣೆಯಾಗಿದೆ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.

English summary
The Election Commission (EC) announced the schedule for 2019 general elections. Election will he held on 7 phase and result will be announced on May 23. Who said what on election announced.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X