ಲೋಕಸಭಾ ಚುನಾವಣೆ ಘೋಷಣೆ : ಯಾರು, ಏನು ಹೇಳಿದರು?
Recommended Video
ಬೆಂಗಳೂರು, ಮಾರ್ಚ್ 10 : ಕೇಂದ್ರ ಚುನಾವಣಾ ಆಯೋಗ 17ನೇ ಲೋಕಸಭಾ ಚುನಾವಣೆ ದಿನಾಂಕವನ್ನು ಭಾನುವಾರ ಘೋಷಣೆ ಮಾಡಿದೆ. ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು ಚುನಾವಣಾ ವೇಳಾಪಟ್ಟಿ ಪ್ರಕಟಿಸಿದರು. ಏಪ್ರಿಲ್ 18 ಮತ್ತು 23ರಂದು ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಲೋಕ ಸಮರ : 7 ಹಂತದಲ್ಲಿ ಮತದಾನ, ಮೇ 23ರಂದು ಫಲಿತಾಂಶ
ದೇಶದ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ದಿನಾಂಕ ಘೋಷಣೆಗಾಗಿ ಕಾಯುತ್ತಿದ್ದವು. ಚುನಾವಣೆಗೆ ನಾವು ಸಿದ್ಧರಿದ್ದೇವೆ ಎಂದು ವಿವಿಧ ಪಕ್ಷಗಳು ಘೋಷಣೆ ಮಾಡಿವೆ. ಈ ಬಾರಿಯ ಚುನಾವಣೆ ಹಲವು ಕಾರಣಗಳಿಗಾಗಿ ಕುತೂಹಲಕ್ಕೆ ಕಾರಣವಾಗಿದೆ.
ಲೋಕಸಭೆ ಚುನಾವಣೆ 2019ರ ಮಾಹಿತಿ ಅಂಕಿ- ಅಂಶಗಳಲ್ಲಿ
'ದೇಶ ಮತ್ತೊಂದು ಚುನಾವಣೆಗೆ ಸಜ್ಜಾಗಿದೆ. ಪ್ರಜಾತಂತ್ರದ ಈ ಸಮರದಲ್ಲಿ ಚುನಾವಣೆ ಪ್ರಕ್ರಿಯೆಯನ್ನು ಸ್ವತಂತ್ರ, ನಿಷ್ಪಕ್ಷಪಾತವಾಗಿ ನಡೆಯುವುದು ಎಂದು ಆಶಿಸುತ್ತೇನೆ' ಎಂದು ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
|
ತೀರ್ಪನ್ನು ಗೌರವಿಸೋಣ
'ಎಲ್ಲಾ ಪಕ್ಷಗಳು, ಅಭ್ಯರ್ಥಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವುದರೊಂದಿಗೆ ಮತದಾರರ ತೀರ್ಪನ್ನು ಗೌರವಿಸೋಣ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
|
ಘೋಷಣೆಯನ್ನು ಸ್ವಾಗತಿಸುತ್ತೇವೆ
'ಕಾಂಗ್ರೆಸ್ಸಿನ ಕಾರ್ಯಕರ್ತರು, ನಾಯಕರು ಚುನಾವಣೆಗೆ ಸಂಪೂರ್ಣ ಸನ್ನದ್ಧರಾಗಿದ್ದು, ಚುನಾವಣಾ ದಿನಾಂಕ ಘೋಷಣೆಯನ್ನು ಸ್ವಾಗತಿಸುತ್ತೇವೆ' ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ 2 ಹಂತದ ಮತದಾನ
|
ಸರ್ಕಾರವನ್ನು ಬದಲಾಯಿಸುವ ಸಮಯ ಬಂದಿದೆ
'ಲೋಕ ಸಭಾ ಚುನಾವಣೆ ಘೋಷಣೆ ಆಗಿದೆ. 5 ವರುಷ ಯಾವ ಭರವಸೆಯನ್ನು ಈಡೇರಿಸದೆ ಸುಳ್ಳು ಕಲ್ಪನೆಯನ್ನು ತೋರಿಸಿದ ಮೋದಿ ಸರ್ಕಾರವನ್ನು ಬದಲಾಯಿಸುವ ಸಮಯ ಹತ್ತಿರ ಬಂದಿದೆ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Array |
ಮತ್ತೊಮ್ಮೆ ಮೋದಿ
ಮತ್ತೊಮ್ಮೆ ಮೋದಿ ಅವರನ್ನು ಆಯ್ಕೆ ಮಾಡಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.
ಎಲ್ಲ ಪಕ್ಷಗಳ ಧ್ಯೇಯ ಒಂದೇ; ಪ್ರಧಾನಿ ನರೇಂದ್ರ ಮೋದಿ ಟ್ವೀಟ್
|
ಕಾಂಗ್ರೆಸ್ ಮುಕ್ತ ಭಾರತ
ಭಾರತವನ್ನು ಕಾಂಗ್ರೆಸ್ ಮುಕ್ತ ಮಾಡಲು ದಿನಾಂಕ ಘೋಷಣೆಯಾಗಿದೆ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.