ಚುನಾವಣೆ ದಿನಾಂಕ ಘೋಷಣೆ : ಫಾರಂ 26 ಎಂದರೇನು?
ಬೆಂಗಳೂರು, ಮಾರ್ಚ್ 11 : ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ದೇಶಾದ್ಯಂತ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಕೇಂದ್ರ ಚುನಾವಣಾ ಆಯಕ್ತ ಸುನೀಲ್ ಅರೋರಾ ಅವರು ಭಾನುವಾರ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದರು. ಏಪ್ರಿಲ್ 18 ಮತ್ತು 23ರಂದು ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮತದಾನ ನಡೆದ ಬಳಿಕ ಒಂದು ತಿಂಗಳ ಕಾಲ ರಾಜ್ಯದ ಜನರು ಫಲಿತಾಂಶಕ್ಕಾಗಿ ಕಾಯಬೇಕಿದೆ.
ಚುನಾವಣಾ ನೀತಿ ಸಂಹಿತೆ ಮಾ.10ರ ಭಾನುವಾರದಿಂದಲೇ ಜಾರಿಗೆ ಬಂದಿದೆ. ಈ ಬಾರಿಯ ಚುನಾವಣೆ ಹಲವು ಕಾರಣಗಳಿಗಾಗಿ ಕುತೂಹಲ ಮೂಡಿಸಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ ಈ ಬಾರಿ ಫಾರಂ 26 ಭರ್ತಿ ಮಾಡುವುದು ಅಗತ್ಯವಾಗಿದೆ.
ಚುನಾವಣಾ ಕಣಕ್ಕಿಳಿಯುವ ಅಭ್ಯರ್ಥ ಹಲವು ಅರ್ಜಿಗಳನ್ನು ಭರ್ತಿ ಮಾಡಬೇಕಾಗುತ್ತದೆ. ಅವುಗಳಲ್ಲಿ ಬಿಫಾರಂ, ಫಾರಂ ಬಿಎ, ಫಾರಂ2ಸಿ ಸೇರಿವೆ. ನಾಮಪತ್ರವನ್ನು ಸಲ್ಲಿಸುವ ಅಭ್ಯರ್ಥಿಯು ಫಾರಂ 26 ಅನ್ನು ಸಲ್ಲಿಸಬೇಕಾಗಿದೆ.

5 ವರ್ಷದ ಆದಾಯ ತೆರಿಗೆ ಮಾಹಿತಿ
ಚುನಾವಣಾ ಆಯೋಗ ಅಭ್ಯರ್ಥಿಯು ನಾಮಪತ್ರ ಸಲ್ಲಿಸುವಾಗ 5 ವರ್ಷದ ಆದಾಯ ತೆರಿಗೆ ಪಾವತಿ ಮಾಡಿದ ಮಾಹಿತಿ ಒದಗಿಸುವಂತೆ ಕಾನೂನು ಬದಲಾವಣೆ ಮಾಡಬೇಕು ಎಂದು ಫೆ. 13ರಂದು ಕೇಂದ್ರ ಕಾನೂನು ಇಲಾಖೆಗೆ ಪತ್ರ ಬರೆದಿತ್ತು. ಇದಕ್ಕೆ ಕಾನೂನು ಇಲಾಖೆಯು ಬದಲಾವಣೆ ತಂದಿದ್ದು ಅಭ್ಯರ್ಥಿ ಫಾರಂ 26 ಭರ್ತಿ ಮಾಡಿ ನೀಡಬೇಕು ಎಂದು ಸೂಚನೆ ನೀಡಿದೆ.

ಏನಿದು ಫಾರಂ 26?
ಫಾರಂ 26 ಭರ್ತಿ ಮಾಡಿದರೆ ಅಭ್ಯರ್ಥಿಯ ಆಸ್ತಿಯ ವಿವರಗಳು, ವಿದ್ಯಾರ್ಹತೆ, ಕ್ರಿಮಿನಲ್ ಪ್ರಕರಣಗಳು (ಇತ್ಯರ್ಥ ಆಗಿರುವುದು, ಬಾಕಿ ಇರುವುದು) ಮುಂತಾದ ಮಾಹಿತಿಗಳು ಇದರಲ್ಲಿ ಸಿಗಲಿವೆ. ಅಭ್ಯರ್ಥಿ ನಾಮಪತ್ರವನ್ನು ಸಲ್ಲಿಸುವಾಗ ಫಾರಂ 26 ಅನ್ನು ಭರ್ತಿ ಮಾಡಿ ನೀಡಬೇಕಿದೆ.

ಏನು ಬದಲಾವಣೆಯಾಗಿದೆ?
ಫಾರಂ 26 ಭರ್ತಿ ಮಾಡುವಲ್ಲಿ ಕೆಲವು ನಿಯಮ ಬದಲಾವಣೆಯಾಗಿದೆ. ಹಿಂದೆ ಅಭ್ಯರ್ಥಿಯು ಹಿಂದಿನ ವರ್ಷದ ತನ್ನ ಆದಾಯ ತೆರಿಗೆ ಪಾವತಿ ಮಾಡಿದ ಮಾಹಿತಿ ನೀಡಿದರೆ ಸಾಕಿತ್ತು. ವಿದೇಶದಲ್ಲಿರುವ ಆಸ್ತಿಯ ಮಾಹಿತಿ ನೀಡುವ ಅಗತ್ಯವಿರಲಿಲ್ಲ. ಫೆ.26ರಂದು ಕಾನೂನು ಇಲಾಖೆ ಹೊರಡಿಸಿರುವ ಆದೇಶದಂತೆ ವಿದೇಶದಲ್ಲಿರುವ ಆಸ್ತಿ, ಅಲ್ಲಿ ಮಾಡಿರುವ ಹೂಡಿಕೆ, ವ್ಯವಹಾರದ ಪಾಲುದಾರಿಕೆಯ ಮಾಹಿತಿ ನೀಡಬೇಕು.

ನಾಮಪತ್ರ ತಿರಸ್ಕಾರವಾಗಲಿದೆ
ಫಾರಂ 26 ಅನ್ನು ಅಭ್ಯರ್ಥಿ ಭರ್ತಿ ಮಾಡುವುದರಿಂದ ಮತದಾರರಿಗೆ ಸಂಪೂರ್ಣ ಮಾಹಿತಿ ತಿಳಿಯಲಿದೆ. ಆತನ ವಿರುದ್ಧ ಕ್ರಿಮಿನಲ್ ಪ್ರಕರಣವಿದ್ದರೆ ಆ ಮಾಹಿತಿಗಳು ಸಿಗಲಿವೆ. ಕಳೆದ ಐದು ವರ್ಷಗಳಲ್ಲಿ ಅಭ್ಯರ್ಥಿ ಎಷ್ಟು ತೆರಿಗೆ ಕಟ್ಟಿದ್ದಾನೆ. ಅವನ ಆಸ್ತಿ ಎಷ್ಟು ಹೆಚ್ಚಾಗಲಿದೆ ಎಂಬ ಮಾಹಿತಿಗಳು ಸಿಗಲಿವೆ. ಫಾರಂ 26 ಭರ್ತಿ ಮಾಡದಿದ್ದರೆ ಅಭ್ಯರ್ಥಿ ನಾಮಪತ್ರವನ್ನು ತಿರಸ್ಕಾರ ಮಾಡಲು ಚುನಾವಣಾಧಿಕಾರಿಗೆ ಅಧಿಕಾರವಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications