Arun Goel: ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜೀನಾಮೆ ನೀಡಿ ಆಘಾತ ನೀಡಿದ ಚುನಾವಣಾ ಆಯುಕ್ತ ಅರುಣ್ ಗೋಯಲ್!
ನವದೆಹಲಿ, ಮಾರ್ಚ್ 10: ಲೋಕಸಭೆ ಚುನಾವಣೆಗೆ ವಾರಗಳು ಬಾಕಿ ಇರುವಾಗಲೇ ಆಘಾತಕಾರಿ ರೀತಿಯಲ್ಲಿ ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿಗಳು ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಮೂರು ಸದಸ್ಯರ ಭಾರತೀಯ ಚುನಾವಣಾ ಆಯೋಗವು ಈಗಾಗಲೇ ಖಾಲಿಯಿತ್ತು. ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತ್ರ ಉಳಿದಿದ್ದಾರೆ.
ಲೋಕಸಭೆ ಚುನಾವಣೆ ದಿನಾಂಕಗಳನ್ನು ಮುಂದಿನ ವಾರ ಘೋಷಿಸುವ ಸಾಧ್ಯತೆಯಿದ್ದು, ಇದೇ ವೇಳೆ ಅರುಣ್ ಗೋಯಲ್ ಅವರ ರಾಜೀನಾಮೆ ಈಗ ಪ್ರಶ್ನಾರ್ಥಕ ಚಿಹ್ನೆಯನ್ನು ಹಾಕಿದೆ. ರಾಜೀನಾಮೆ ನೀಡುವಾಗ ಅರುಣ್ ಗೋಯಲ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಉನ್ನತ ಅಧಿಕಾರಿಗಳು ಹೇಳಿದ್ದಾರೆ. ಸರ್ಕಾರವು ಅವರನ್ನು ರಾಜೀನಾಮೆ ನೀಡದಂತೆ ಮನವೊಲಿಸಲು ಪ್ರಯತ್ನಿಸಿದೆ, ಆದರೆ ಅವರು ನಿರಾಕರಿಸಿದ್ದಾರೆ.

ಅರುಣ್ ಗೋಯಲ್ 1985-ಬ್ಯಾಚ್ ಐಎಎಸ್ ಅಧಿಕಾರಿ ನವೆಂಬರ್ 18, 2022 ರಂದು ಸ್ವಯಂ ನಿವೃತ್ತಿ ಪಡೆದಿದ್ದರು. ನಿವೃತ್ತಿ ಪಡೆದ ಒಂದು ದಿನದ ನಂತರ ಚುನಾವಣಾ ಆಯುಕ್ತರಾಗಿ ನೇಮಕಗೊಂಡರು. ಈ ನೇಮಕಾತಿ ಕೂಡ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದು, ಸರ್ಕಾರಕ್ಕೇ ಏನಿದು ಆತುರ ಎಂದು ಕೇಳಿತ್ತು.
"ಕಾನೂನು ಸಚಿವರು ಶಾರ್ಟ್ಲಿಸ್ಟ್ ಮಾಡಲಾದ ಹೆಸರುಗಳ ಪಟ್ಟಿಯಿಂದ ನಾಲ್ಕು ಹೆಸರುಗಳನ್ನು ತೆಗೆದುಕೊಳ್ಳುತ್ತಾರೆ. ಫೈಲ್ ಅನ್ನು ನವೆಂಬರ್ 18 ರಂದು ಫೈಲ್ ಮಡಲಾಗಿತ್ತು. ಅದೇ ದಿನ ಅದು ಮೂವ್ ಆಗಿದೆ. ಪಿಎಂ ಕೂಡ ಅದೇ ದಿನ ಹೆಸರನ್ನು ಶಿಫಾರಸು ಮಾಡುತ್ತಾರೆ. ಇದೇಲ್ಲಾ ಯಾವುದಾದರೂ ತರಾತುರಿಯಲ್ಲಿ ಇದನ್ನು ಮಾಡಲಾಗಿದೆಯೇ?, ಇಂತಹ ಆತುರವೇನು..?" ಎಂದು ನ್ಯಾಯಾಲಯ ಪ್ರಶ್ನಿಸಿತ್ತು.
ಅರುಣ್ ಗೋಯಲ್ ಅವರ ನೇಮಕಾತಿಯ ವಿರುದ್ಧದ ಅರ್ಜಿಯನ್ನು ಕಳೆದ ವರ್ಷ ಇಬ್ಬರು ನ್ಯಾಯಾಧೀಶರ ಪೀಠವು ವಜಾಗೊಳಿಸಿತ್ತು. ಸಂವಿಧಾನ ಪೀಠವು ಸಮಸ್ಯೆಯನ್ನು ಪರಿಶೀಲಿಸಿ, ಅರುಣ್ ಗೋಯಲ್ ಅವರ ನೇಮಕಾತಿಯನ್ನು ರದ್ದುಗೊಳಿಸಲು ನಿರಾಕರಿಸಿದೆ ಎಂದು ನ್ಯಾಯಾಧೀಶರು ಗಮನಿಸಿದರು. ಇನ್ನು, ಅರುಣ್ ಗೋಯಲ್ ಅವರ ಅಧಿಕಾರಾವಧಿಯು 2027 ರವರೆಗೆ ಇತ್ತು. ಮುಂದಿನ ವರ್ಷ ಅವರು ರಾಜೀವ್ ಕುಮಾರ್ ನಿವೃತ್ತಿ ಬಳಿಕ ಮುಖ್ಯ ಚುನಾವಣಾ ಆಯುಕ್ತರಾಗುತ್ತಿದ್ದರು.
ಇನ್ನು, ಅರುಣ್ ಗೋಯಲ್ ಅವರ ರಾಜೀನಾಮೆಗೆ ಮುಂಚೆಯೇ, ತ್ರಿಸದಸ್ಯ ಸಮಿತಿಯ ಬದಲಿಗೆ ಅವರು ಮತ್ತು ರಾಜೀವ್ ಕುಮಾರ್ ಮಾತ್ರ ಭಾರತೀಯ ಚುನಾವಣಾ ಆಯೋಗದ ಕೋರ್ ಬಾಡಿಯಲ್ಲಿ ಲೋಕಸಭೆ ಚುನಾವಣೆ ನಡೆಸಲಾಗುತ್ತಿದೆ ಎಂಬ ಆತಂಕವಿತ್ತು. ಇತರ ಚುನಾವಣಾ ಆಯುಕ್ತರಾದ ಅನುಪ್ ಪಾಂಡೆ ಕಳೆದ ತಿಂಗಳು ನಿವೃತ್ತರಾಗಿದ್ದರು.

ತೃಣಮೂಲ ಕಾಂಗ್ರೆಸ್ ನಾಯಕ ಸಾಕೇತ್ ಗೋಖಲೆ ಅವರು ಅರುಣ್ ಗೋಯಲ್ ಅವರ ರಾಜೀನಾಮೆಯನ್ನು "ಬಹಳ ಕಾಳಜಿ" ಎಂದು ವ್ಯಂಗ್ಯವಾಡಿದ್ದಾರೆ. ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯು ಈಗ ಪ್ರಧಾನಿ, ಕೇಂದ್ರ ಕ್ಯಾಬಿನೆಟ್ ಸಚಿವರು ಮತ್ತು ವಿರೋಧ ಪಕ್ಷದ ನಾಯಕರನ್ನು ಒಳಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.
"ಹಠಾತ್ ನಡೆಯಲ್ಲಿ, ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ಹಠಾತ್ತನೆ ರಾಜೀನಾಮೆ ನೀಡಿದ್ದಾರೆ. ಇತರ ಚುನಾವಣಾ ಆಯೋಗದ ಹುದ್ದೆ ಖಾಲಿಯಾಗಿದೆ... ಮೋದಿ ಸರ್ಕಾರವು ಹೊಸ ಕಾನೂನನ್ನು ಪರಿಚಯಿಸಿದೆ. ಅಲ್ಲಿ ಈಗ ಚುನಾವಣಾ ಆಯುಕ್ತರನ್ನು ಪ್ರಧಾನಿ ಮೋದಿ ಮತ್ತು ಸಚಿವರು ಆಯ್ಕೆ ಮಾಡುತ್ತಾರೆ. ಆದ್ದರಿಂದ, 2024 ರ ಲೋಕಸಭಾ ಚುನಾವಣೆಯ ಮೊದಲು, ಮೋದಿ ಅವರು ಇಂದಿನ ರಾಜೀನಾಮೆಯ ನಂತರ 3 ಚುನಾವಣಾ ಆಯುಕ್ತರ ಪೈಕಿ 2 ಸದಸ್ಯರನ್ನು ನೇಮಕ ಮಾಡುತ್ತಾರೆ" ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
In a sudden move, Election Commissioner Arun Goel has abruptly resigned.
— Saket Gokhale (@SaketGokhale) March 9, 2024
The post of the other EC is vacant.
That leaves the Election Commission now with just 1 Chief Election Commissioner.
Modi Govt has introduced a new law where Election Commissioners will now be… pic.twitter.com/bCcPRgDHPr
ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಅವರು ರಾಜೀನಾಮೆಯನ್ನು ಗಂಭೀರ ವಿಷಯ ಎಂದು ಕರೆದಿದ್ದಾರೆ. ಚುನಾವಣಾ ಆಯೋಗವು ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದರಲ್ಲಿ "ಸಂಪೂರ್ಣವಾಗಿ ಯಾವುದೇ ಪಾರದರ್ಶಕತೆ ಇಲ್ಲ" ಎಂದು ಹೇಳಿದ್ದಾರೆ.
ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆ
ಕಳೆದ ವರ್ಷ ಮಾರ್ಚ್ನಲ್ಲಿ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಆಯುಕ್ತರನ್ನು ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯಿಂದ ನೇಮಕ ಮಾಡಬೇಕೆಂದು ನಿರ್ದೇಶಿಸಿತ್ತು. ಸಂಸತ್ತು ಕಾನೂನು ರೂಪಿಸುವವರೆಗೆ ಆದೇಶ ಜಾರಿಯಲ್ಲಿರುತ್ತದೆ ಎಂದೂ ಪೀಠ ಹೇಳಿದೆ. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಈ ತೀರ್ಪು ಬಂದಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications