Lok Sabha Election 2024 Result; ಹೈದರಾಬಾದ್ನಲ್ಲಿ ಬಿಜೆಪಿ ಹಿನ್ನಡೆ
ಹೈದರಾಬಾದ್, ಜೂನ್ 04; ಲೋಕಸಭಾ ಚುನಾವಣೆ 2024ರ ಮತ ಎಣಿಕೆ ನಡೆಯುತ್ತಿದೆ. ದೇಶದ ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ತೆಲಂಗಾಣ ರಾಜ್ಯದ ಹೈದರಾಬಾದ್ ಸಹ ಒಂದು. ಸದ್ಯದ ಮಾಹಿತಿ ಪ್ರಕಾರ ಕ್ಷೇತ್ರದಲ್ಲಿ ಬಿಜೆಪಿಯ ಕೆ. ಮಾಧವಿ ಲತಾ ಹಿನ್ನಡೆ ಅನುಭವಿಸಿದ್ದಾರೆ.
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಪ್ರತಿನಿಧಿಸುವ ಕ್ಷೇತ್ರ ಹೈದರಾಬಾದ್. ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಒವೈಸಿಗೆ ಎದುರಾಳಿಯಾಗಿ ಕೆ. ಮಾಧವಿ ಲತಾ ಕಣಕ್ಕಿಳಿಸಿದೆ. ಕ್ಷೇತ್ರದ ಚುನಾವಣಾ ಪ್ರಚಾರ ಜೋರಾಗಿತ್ತು.

ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಅಭ್ಯರ್ಥಿ ಕೆ. ಮಾಧವಿ ಲತಾ ಅವರು 122254 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ. ಅಸಾದುದ್ದೀನ್ ಒವೈಸಿ 162979 ಮತಗಳನ್ನು ಪಡೆದಿದ್ದಾರೆ. ತೆಲಂಗಾಣ ಕಾಂಗ್ರೆಸ್ ಆಡಳಿತ ಇರುವ ರಾಜ್ಯ. ಹೈದರಾಬಾದ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಹಮದ್ ವಾಲಿವುಲ್ಲಾ ಸಮೀರ್ 16641 ಮತಗಳನ್ನು ಪಡೆದಿದ್ದಾರೆ.
ಹೈದರಾಬಾದ್ನ ಬಿಜೆಪಿ ಅಭ್ಯರ್ಥಿ ಕೆ. ಮಾಧವಿ ಲತಾ ಅವರಿಗೆ ಇದು ಮೊದಲ ಚುನಾವಣೆ. ಹೈದರಾಬಾದ್ ಎಐಎಂಐಎಂ ಭದ್ರಕೋಟೆ ಎಂದರೂ ತಪ್ಪಿಲ್ಲ. ಅಸಾದುದ್ದೀನ್ ಒವೈಸಿ ಕ್ಷೇತ್ರದ ಹಾಲಿ ಸಂಸದರು. 2004ರಿಂದ ನಾಲ್ಕು ಬಾರಿ ಅವರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಅವರ ತಂದೆ ಸುಲ್ತಾನ್ ಸಲಾವುದ್ದೀನ್ ಓವೈಸಿ 6 ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಆದರೆ ಈ ಬಾರಿ ಬಿಜೆಪಿ ಕ್ಷೇತ್ರದಲ್ಲಿ ಗೆಲ್ಲಬೇಕು ಎಂದು ಭಾರೀ ಪ್ರಚಾರ ಕೈಗೊಂಡಿತ್ತು.
ಚುನಾವಣಾ ಪೂರ್ವ ಸಮೀಕ್ಷೆಗಳು ಹೈದರಾಬಾದ್ನಲ್ಲಿ ಅಸಾದುದ್ದೀನ್ ಒವೈಸಿ ಜಯಗಳಿಸಲಿದ್ದಾರೆ ಎಂದು ಅಂದಾಜಿಸಿದ್ದವು. ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಸಹ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎರಡಂಕಿ ಸೀಟುಗಳು ಬರುವುದಿಲ್ಲ ಎಂದು ಸಮೀಕ್ಷೆಗಳು ಹೇಳಿದ್ದವು.
ಕಾಂಗ್ರೆಸ್, ಬಿಜೆಪಿ ನಡುವೆ ತೆಲಂಗಾಣದಲ್ಲಿ ನೇರ ಪೈಪೋಟಿ ಇದೆ. ಬಿಆರ್ಎಸ್ ಪಕ್ಷ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿಯೂ ಸೋಲು ಕಂಡಿತ್ತು. ಲೋಕಸಭೆ ಚುನಾವಣೆಯಲ್ಲಿ 1 ಸ್ಥಾನವನ್ನು ಪಕ್ಷ ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications