Lok Sabha Election 2024: ಈಗ ಚುನಾವಣೆ ನಡೆದರೆ ಉತ್ತರ ಪ್ರದೇಶದ ಸಮೀಕ್ಷಾ ಫಲಿತಾಂಶ ಹೀಗಿದೆ
ಹಾಲೀ ಲೋಕಸಭೆಯ ಅವಧಿ ಮುಂದಿನ ವರ್ಷದ ಮೇ ತಿಂಗಳವರೆಗೆ ಇದ್ದರೂ, ಅದಕ್ಕಿಂತಲೂ ಮುನ್ನ ಚುನಾವಣೆ ನಡೆಯುವ ಸಾಧ್ಯತೆಯಿದೆ ಎನ್ನುವ ಮಾತು ದಟ್ಟವಾಗಿ ಕೇಳಿ ಬರುತ್ತಿದೆ. ಇದಲ್ಲದೇ ಪಂಚ ರಾಜ್ಯಗಳ ಚುನಾವಣೆ ನಡೆಯಬೇಕಾಗಿರುವುದರಿಂದ ಸಮೀಕ್ಷೆಗಳು ಹೊರಬೀಳುತ್ತಿವೆ.
ದೇಶದ ಒಟ್ಟು 543 ಲೋಕಸಭಾ ಕ್ಷೇತ್ರಗಳ ಪೈಕಿ ಉತ್ತರ ಪ್ರದೇಶ ಒಂದರಲ್ಲೇ ಎಂಬತ್ತು ಸ್ಥಾನಗಳಿವೆ. ಹಾಗಾಗಿ, ಈ ರಾಜ್ಯದ ಸಾರ್ವತ್ರಿಕ ಚುನಾವಣೆಯ ಮೇಲೆ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ವಿಶೇಷ ಒತ್ತನ್ನು ನೀಡುತ್ತದೆ.

ಒಂದು ಕಾಲದಲ್ಲಿ ಕಾಂಗ್ರೆಸ್ ಮತ್ತು ಗಾಂಧಿ ಪರಿವಾರದ ಭದ್ರಕೋಟೆಯೆಂದೇ ಬಿಂಬಿತವಾಗಿದ್ದ ಉತ್ತರ ಪ್ರದೇಶದ ಹಾಲೀ ಚಿತ್ರಣವೇ ಬೇರೆ. ಕಳೆದ ಬಾರಿ ಕೇವಲ ಒಂದು ಸ್ಥಾನವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು, ಅದೂ ಸೋನಿಯಾ ಗಾಂಧಿಯವರ ಮೂಲಕ..
ಉತ್ತರ ಪ್ರದೇಶದಲ್ಲಿ ಬಿಜೆಪಿ ತನ್ನ ಬುನಾದಿಯನ್ನು ಈಗಾಗಲೇ ಭದ್ರ ಪಡಿಸಿಕೊಂಡಿದೆ. ಸತತವಾಗಿ ಎರಡು ಬಾರಿ ಅಸೆಂಬ್ಲಿ ಚುನಾವಣೆಯನ್ನು ಕಮಲದ ಪಕ್ಷ ಗೆದ್ದಿರುವುದರಿಂದ ಮುಂಬರುವ ಚುನಾವಣೆಯಲ್ಲೂ ಪಕ್ಷಕ್ಕೆ ಪೂರಕ ವಾತಾವರಣವಿದೆ ಎನ್ನುವುದು ಸಮೀಕ್ಷಾ ವರದಿಯಲ್ಲಿ ಬಂದಂತಹ ಅಂಶ.
ಮತದಾರರ ನಾಡಿಮಿಡಿತ ಯಾವ ಪಕ್ಷದ ಮೇಲೆ?
ಈಗ ಒಂದು ವೇಳೆ ಚುನಾವಣೆ ನಡೆದರೆ ಮತದಾರರ ನಾಡಿಮಿಡಿತ ಯಾವ ಪಕ್ಷದ ಮೇಲೆ ಎನ್ನುವ ಸರ್ವೇಯನ್ನು ಇಂಡಿಯಾ ಟಿವಿ - ಸಿಎನ್ಎಕ್ಸ್ ನಡೆಸಿದೆ. ಸಮೀಕ್ಷೆಯಲ್ಲಿ ಹೊರಬಿದ್ದ ಫಲಿತಾಂಶದ ಪ್ರಕಾರ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೇರಲಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದ ನಂತರ ಮುಂಬರುವ ಪಂಚ ರಾಜ್ಯಗಳ ಅಸೆಂಬ್ಲಿ ಚುನಾವಣೆಯ ಸಮೀಕ್ಷೆಯ ಪ್ರಕಾರ ಹೆಚ್ಚಿನ ಕಡೆ ಕಾಂಗ್ರೆಸ್ ಪಕ್ಷಕ್ಕೆ ಮುನ್ನಡೆಯಾಗಲಿದೆ ಎಂದು ಸರ್ವೇಗಳು ಹೇಳುತ್ತಿವೆ. ಇದೇ ಆಧಾರದ ಮೇಲೆ, ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವ ಖಚಿತ ವಿಶ್ವಾಸದ ಮಾತನ್ನು ಕಾಂಗ್ರೆಸ್ ನಾಯಕರು ಆಡುತ್ತಿದ್ದಾರೆ.
ಇಂಡಿಯಾ ಟಿವಿ - ಸಿಎನ್ಎಕ್ಸ್ ಸಮೀಕ್ಷೆ
ಸೆಪ್ಟಂಬರ್ 20ರಿಂದ ಅಕ್ಟೋಬರ್ 3ರವರೆಗಿನ ಅವಧಿಯಲ್ಲಿ ಇಂಡಿಯಾ ಟಿವಿ - ಸಿಎನ್ಎಕ್ಸ್ ಸಮೀಕ್ಷೆಯನ್ನು ನಡೆಸಿದೆ. 54,250 ಮತದಾರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ, ಇದರಲ್ಲಿ ಪುರುಷರು 28,309 ಮತ್ತು ಮಹಿಳೆಯರು 25,941. ಸಮೀಕ್ಷೆಯ ಪ್ರಕಾರ ಉತ್ತರ ಪ್ರದೇಶದಲ್ಲಿ ಯೋಗಿ - ಮೋದಿ ದಿಗ್ವಿಜಯ ಮುಂದುವರಿಯಲಿದೆ. ಸಮೀಕ್ಷೆಯ ಫಲಿತಾಂಶ ಈ ರೀತಿಯಿದೆ.
*ಒಟ್ಟು ಸ್ಥಾನಗಳು: 80
*ಬಿಜೆಪಿ: 70
*ಎಸ್.ಪಿ: 04
*ಬಿ.ಎಸ್.ಪಿ: 00
*ಕಾಂಗ್ರೆಸ್: 02
*ಅಪ್ನಾದಳ: 02
*ಆರ್.ಎಲ್.ಡಿ: 01
*ಎಸ್.ಬಿ.ಎಸ್. ಪಿ: 01
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications