Chandrashekhar Azad: ಉತ್ತರ ಪ್ರದೇಶದಲ್ಲಿ ಇತಿಹಾಸ ಬರೆದ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್
ಲಕ್ನೋ, ಜೂನ್. 04: ಆಜಾದ್ ಸಮಾಜ ಪಕ್ಷ (ಎಎಸ್ಪಿ) ಕಾನ್ಶಿ ರಾಮ್ ನಾಯಕ ಮತ್ತು ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ 'ರಾವಣ' ಉತ್ತರ ಪ್ರದೇಶದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಉತ್ತರ ಪ್ರದೇಶದ ನಗೀನಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಗೆಲುವು ದಾಖಲಿಸಿದ್ದಾರೆ.
ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಓಂ ಕುಮಾರ್ ಅವರು ಸಮಾಜವಾದಿ ಪಕ್ಷದ (ಎಸ್ಪಿ) ಮನೋಜ್ ಕುಮಾರ್ ಮತ್ತು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಸುರೇಂದ್ರ ಪಾಲ್ ಸಿಂಗ್ಗಿಂತ 1,51,473ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಓಂ ಕುಮಾರ್ ಸೋಲು ಕಂಡಿದ್ದಾರೆ.

ಚಂದ್ರಶೇಖರ್ ಆಜಾದ್ ರಾವಣ ಒಟ್ಟು 5,12,552 ಮತಗಳು, ಬಿಜೆಪಿ ಅಭ್ಯರ್ಥಿ ಓಂ ಕುಮಾರ್ 3,61,079 ಮತಗಳು ಮತ್ತು ಸಮಾಜವಾದಿ ಪಕ್ಷದ ಅಭ್ಯರ್ಥಿ 1,02,374 ಮತಗಳನ್ನು ಪಡೆದಿದ್ದಾರೆ. ಚಂದ್ರಶೇಖರ್ ಆಜಾದ್ ಅವರ ಆಜಾದ್ ಸಮಾಜ ಪಕ್ಷ (ASP) ಎದುರಿಸುತ್ತಿರುವ ಮೊದಲ ಲೋಕಸಭಾ ಚುನಾವಣೆ ಇದಾಗಿದೆ. ಇದು ಕೇವಲ ನಾಲ್ಕು ವರ್ಷಗಳ ಹಳೆಯ ಪಕ್ಷವಾಗಿದೆ. ಟೀ ಪಾಟ್ ಇದರ ಚುನಾವಣಾ ಚಿಹ್ನೆಯಾಗಿದೆ. ಸಾಮಾಜಿಕ ಪರಿವರ್ತನೆಯೇ ಚಂದ್ರಶೇಖರ್ ಆಜಾದ್ ಪಕ್ಷದ ಕರೆಯಾಗಿದೆ. ಬಡವರ ಮಕ್ಕಳು ಆಡಳಿತ ನಡೆಸಬೇಕು ಎಂಬ ಧೇಯ್ಯದೊಂದಿಗೆ ಚುನಾವಣೆ ಎದುರಿಸಿದೆ.
ಇದು ಚುನಾವಣೆಯ ಪ್ರಚಾರದಲ್ಲಿ "ಸಾರಿ ಪಾರ್ಟಿ ದೇಖ್ ಲಿ, ಅಬ್ ಕಿ ಬಾರ್ ಕೆಟ್ಲಿ (ನಾವು ಎಲ್ಲಾ ಪಕ್ಷಗಳನ್ನು ನೋಡಿದ್ದೇವೆ, ಇನ್ನು ಮುಂದೆ ಏನಿದ್ದರೂ ಟೀಪಾಟ್ ಸರದಿ)" ಎಂಬ ಘೋಷಣೆಯನ್ನು ಪ್ರಚಾರ ಮಾಡಿದೆ. ಅಂಬೇಡ್ಕರ್ ವಾದಿ ಮತ್ತು ಜಾತಿ ವಿರೋಧಿ ಹೋರಾಟಗಾರ ಆಜಾದ್ ಅವರು ಭಾರತ ಮೈತ್ರಿಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರಾಕರಿಸಿದ್ದಾರೆ.
ಆದರೆ, ಅಗತ್ಯವಿದ್ದರೆ ಅವರು ಎನ್ಡಿಎ ವಿರುದ್ಧದ ಮೈತ್ರಿಯನ್ನು ಬೆಂಬಲಿಸುವ ನಿರೀಕ್ಷೆಯಿದೆ. ಬಿಎಸ್ಪಿಯ ಗಿರೀಶ್ ಚಂದ್ರ ಅವರು 2019 ರ ಚುನಾವಣೆಯಲ್ಲಿ ಈ ಕ್ಷೇತ್ರವನ್ನು ಗೆದ್ದಿದ್ದರು. 3.5 ಲಕ್ಷಕ್ಕೂ ಹೆಚ್ಚು ದಲಿತ ಮತದಾರರನ್ನು ಒಳಗೊಂಡಿರುವ ಮೀಸಲು ಕ್ಷೇತ್ರವಾದ ನಗೀನಾದಲ್ಲಿ ಈ ಬಾರಿ ಚಂದ್ರಶೇಖರ್ ಆಜಾದ್ ಗೆಲುವು ಕಂಡಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications