ಲೋಕಸಭಾ ಚುನಾವಣೆ : ಏ.29ರಂದು 9 ರಾಜ್ಯ, 71 ಕ್ಷೇತ್ರದಲ್ಲಿ ಮತದಾನ
ಬೆಂಗಳೂರು, ಏಪ್ರಿಲ್ 28 : ಲೋಕಸಭಾ ಚುನಾವಣೆಯ 4ನೇ ಹಂತದ ಮತದಾನ ಸೋಮವಾರ ನಡೆಯಲಿದೆ. ಉತ್ತರ ಪ್ರದೇಶ, ರಾಜಸ್ಥಾನ ಮುಂತಾದ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿಗೆ ಸವಾಲು ಎದುರಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಏಪ್ರಿಲ್ 29ರ ಸೋಮವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ 4ನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. 9 ರಾಜ್ಯಗಳ 71 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಒಟ್ಟು ಏಳು ಹಂತದಲ್ಲಿ ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಈಗಾಗಲೇ 3 ಹಂತದ ಲೋಕಸಭಾ ಚುನಾವಣೆಗಳು ಪೂರ್ಣಗೊಂಡಿದ್ದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಕ್ತಾಯಗೊಂಡಿದೆ.

ರಾಜ್ಯಗಳು, ಸೀಟು : ಬಿಹಾರ 5, ಜಾರ್ಖಂಡ್ 3, ಮಧ್ಯಪ್ರದೇಶ 6, ಮಹಾರಾಷ್ಟ್ರ 17, ಓಡಿಶಾ 6, ರಾಜಸ್ಥಾನ 13, ಉತ್ತರ ಪ್ರದೇಶ 13, ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ಸೋಮವಾರ ಮತದಾನ ನಡೆಯಲಿದೆ.
ಪ್ರಮುಖ ಅಭ್ಯರ್ಥಿಗಳು : ಕನ್ಹಯ್ಯ ಕುಮಾರ್, ಗಿರಿರಾಜ್ ಸಿಂಗ್, ಉರ್ಮಿಳಾ ಮಾತೋಂಡ್ಕರ್, ಪೂನಂ ಮಹಾಜನ್, ಪ್ರಿಯಾ ದತ್, ಮಿಲಿಂದ್ ದಿಯೋರಾ, ಡಿಂಪಲ್ ಯಾದವ್, ನಕುಲ್ ನಾಥ್, ವೈಭವ್ ಗೆಲ್ಹೋಟ್.
ಸೋಮವಾರ ಚುನಾವಣೆ ನಡೆಯಲಿರುವ 71 ಕ್ಷೇತ್ರಗಳ ಪೈಕಿ 45ರಲ್ಲಿ ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಜಯಗಳಿಸಿದ್ದರು. ಆದ್ದರಿಂದ, ಸೋಮವಾರದ ಚುನಾವಣೆ ಬಿಜೆಪಿಗೆ ಅದರಲ್ಲೂ ಉತ್ತರ ಪ್ರದೇಶದ 13 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
ಈಗಾಗಲೇ ದೇಶದಲ್ಲಿ 3 ಹಂತದ ಚುನಾವಣೆ ಮುಕ್ತಾಯಗೊಂಡಿದ್ದು 302 ಸ್ಥಾನಗಳಿಗೆ ಮತದಾನ ನಡೆದಿದೆ. ಮೇ 6ರಂದು 5ನೇ ಹಂತ, ಮೇ 12ರಂದು 6ನೇ ಹಂತ ಮತ್ತು ಮೇ 19ರಂದು 7ನೇ ಹಂತದ ಚುನಾವಣೆ ನಡೆಯಲಿದೆ. ಮೇ 23ರಂದು ಫಲಿತಾಂಶ ಘೋಷಣೆಯಾಗಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications