ಲೋಕಸಭೆ ಚುನಾವಣೆ 2019: ಬಿಜೆಪಿ ಮಿತ್ರಪಕ್ಷದ ಮೂಲಕ ಅಮರ್ ಸಿಂಗ್ ಸ್ಪರ್ಧೆ?
ಲಕ್ನೋ, ಆಗಸ್ಟ್ 02: ಉತ್ತರಪ್ರದೇಶದ ಪ್ರಭಾವಿ ನಾಯಕ, ಸಮಾಜ ವಾದಿ ಪಕ್ಷದಿಂದ ಉಚ್ಚಾಟಿತ ಅಮರ್ ಸಿಂಗ್ ಅವರು ಮುಂಬರುವ ಲೋಕಸಭೆ ಚುನಾವಣೆ 2019ರಲ್ಲಿ ಬಿಜೆಪಿ ಟಿಕೆಟ್ ಪಡೆದು ಕಣಕ್ಕಿಳಿಯುವ ಸಾಧ್ಯತೆಯಿದೆ. ಬಿಜೆಪಿಯ ಮಿತ್ರಪಕ್ಷ ಸುಹೆಲ್ದೆವ್ ಭಾರತೀಯ ಸಮಾಜ ಪಾರ್ಟಿ(ಎಸ್ ಬಿ ಎಸ್ ಪಿ)ಯಿಂದ ಸ್ಪರ್ಧಿಸಲು ಅಮರ್ ಸಿಂಗ್ ಗೆ ಆಹ್ವಾನ ಸಿಗುವ ಸಾಧ್ಯತೆಯಿದೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಸಂಸದರಾಗಿರುವ ಅಜಮ್ ಘರ್ ನಿಂದಲೆ ಅಮರ್ ಸಿಂಗ್ ಅವರು ಸ್ಪರ್ಧಿಸಿ ಸೇಡು ತೀರಿಸಿಕೊಳ್ಳಲು ಬಯಸಿದ್ದಾರೆ ಎನ್ನಲಾಗಿದೆ. ಬಿಜೆಪಿಯ ರಮಾಕಾಂತ್ ಯಾದವ್ ಅವರು ಇಲ್ಲಿ ಪರಾಭವಗೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಎಸ್ ಬಿಎಸ್ ಪಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್ ಭರ್, ಅಮರ್ ಅವರು ಪ್ರಭಾವಿ ಹಾಗೂ ರಾಜ್ಯದ ಪ್ರಮುಖ ನಾಯಕರು, 2019ರ ಚುನಾವಣೆಯಲ್ಲಿ ಅಜಮ್ ಘರ್ ನಿಂದ ಸ್ಪರ್ಧೆ ಬಯಸಿದರೆ, ನಮಗೆ ಇಲ್ಲಿನ ಕೋಟಾ ಸಿಕ್ಕರೆ, ಖಂಡಿತವಾಗಿ ಅವರು ನಮ್ಮ ಪಕ್ಷದಿಂದಲೆ ಸ್ಪರ್ಧಿಸಲಿ. ಆದರೆ, ಇನ್ನೂ ಸೀಟು ಹಂಚಿಕೆ ಬಗ್ಗೆ ಎನ್ಡಿಎ ಜತೆ ಇನ್ನೂ ಮಾತುಕತೆಯಾಗಬೇಕಿದೆ ಎಂದಿದ್ದಾರೆ.

ಇತ್ತೀಚೆಗೆ ಮೋದಿ ಅವರಿದ್ದ ಕಾರ್ಯಕ್ರಮದಲ್ಲಿ ಅಮರ್ ಸಿಂಗ್ ಕಾಣಿಸಿಕೊಂಡಿದ್ದರು. ನಂತರ ಯುಪಿ ಸಿಎಂ ಯೋಗಿ ಆದಿತ್ಯನಾಥ್ ರನ್ನು ಭೇಟಿ ಮಾಡಿದ್ದರು. ತಮ್ಮನ್ನು ಜಾತಿವಾದಿ ಎಂದು ಜರೆದಿರುವ ಎಸ್ಪಿ ಹಾಗೂ ಬಿಎಸ್ಪಿ ವಿರುದ್ಧ ಅಮರ್ ಸಿಂಗ್ ಕಿಡಿಕಾಡಿ, ಆ ಎರಡು ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು, ಕಾಂಗ್ರೆಸ್ಸಿಗೆ ಇಲ್ಲಿ ಬೆಲೆಯಿಲ್ಲ, ನಾನು ಮೋದಿ ಹಾಗೂ ಆದಿತ್ಯನಾಥ್ ರನ್ನು ಬೆಂಬಲಿಸುವೆ ಎಂದು ಹೇಳಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications