ಸಿ ವೋಟರ್ಸ್-ಎಬಿಪಿ ಸಮೀಕ್ಷೆ: ಬಿಜೆಪಿಗೆ 233 ಸೀಟು, ಲೋಕಸಭೆ ಅತಂತ್ರ
ನವದೆಹಲಿ, ಜನವರಿ 24: ಈ ಬಾರಿಯ ಲೋಕಸಭೆ ಚುನಾವಣಾ ಫಲಿತಾಂಶ ಅತಂತ್ರವಾಗಲಿದ್ದು, ಯಾವ ಕ್ಷೇತ್ರಕ್ಕೂ ನಿಚ್ಚಳ ಬಹುಮತ ಸಿಗುವುದಿಲ್ಲ ಎಂದು ಚುನಾವಣಾ ಪೂರ್ವ ಸಮೀಕ್ಷೆಯೊಂದು ತಿಳಿಸಿದೆ.
ಲೋಕಸಭೆ ಚುನಾವಣೆ 2019ರ ಚುನಾವಣಾ ಪೂರ್ವ ಸಮೀಕ್ಷೆಯನ್ನು ಸಿ ವೋಟರ್ ನಡೆಸಿದ್ದು, ಎಬಿಪಿ ಸುದ್ದಿ ವಾಹಿನಿ ಈ ಸಮೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.
ಒಟ್ಟು 22,309 ಸಮೀಕ್ಷೆ ಮಾದರಿಗಳನ್ನು ಬಳಸಿಕೊಳ್ಳಲಾಗಿದ್ದು, 2018ರ ಡಿಸೆಂಬರ್ನಿಂದ ಜನವರಿ ಮೂರನೇ ವಾರದವರೆಗೆ ಸಮೀಕ್ಷೆ ನಡೆಸಲಾಗಿದೆ. ಎಲ್ಲ ರಾಜ್ಯಗಳಲ್ಲಿನ ಎಲ್ಲ 543 ಲೋಕಸಭೆ ಕ್ಷೇತ್ರಗಳಲ್ಲಿಯೂ ಸಮೀಕ್ಷೆ ನಡೆಸಲಾಗಿದೆ.

ದೇಶದಲ್ಲಿ ಕಳೆದ 24 ವರ್ಷಗಳಲ್ಲಿಯೇ ನಡೆದ ಅತಿ ದೊಡ್ಡ ಹಾಗೂ ನಿಖರ ಸ್ವತಂತ್ರ ಚುನಾವಣಾ ಪೂರ್ವ ಮಾದರಿ ಸಮೀಕ್ಷೆಯಾಗಿದೆ ಎಂದು ಸಿ ವೋಟರ್ ಹೇಳಿಕೊಂಡಿದೆ.
ಎಬಿಪಿ ನ್ಯೂಸ್ ಮತ್ತು ಸಿವೋಟರ್ ನಡೆಸಿದ 'ಮೂಡ್ ಆಫ್ ದಿ ನೇಷನ್' ಸಮೀಕ್ಷೆಯ ಒಟ್ಟಾರೆ ಫಲಿತಾಂಶ ಇಲ್ಲಿದೆ.
ಒಟ್ಟು 543 ಲೋಕಸಭೆ ಕ್ಷೇತ್ರಗಳಿದ್ದು, ಸರ್ಕಾರ ರಚನೆಗೆ 272 ಕ್ಷೇತ್ರಗಳಲ್ಲಿ ಜಯಗಳಿಸಬೇಕು. ಆದರೆ, ಯಾವ ಮೈತ್ರಿಕೂಟವೂ ಸ್ಪಷ್ಟ ಬಹುಮತ ಪಡೆದುಕೊಳ್ಳುವುದಿಲ್ಲ ಎನ್ನುತ್ತದೆ ಸಮೀಕ್ಷೆ.
ಎನ್ಡಿಎ ಮೈತ್ರಿಕೂಟದ ಶಕ್ತಿ 233ಕ್ಕೆ ಕುಸಿಯಲಿದೆ. ಯುಪಿಎ 167 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಪಡೆಯಲಿದೆ. ಉಳಿದ 143 ಸ್ಥಾನಗಳಲ್ಲಿ ಇತರೆ ಪಕ್ಷಗಳು ಗೆಲುವು ಕಾಣಲಿದೆ. ಹೀಗಾಗಿ ಸರ್ಕಾರ ರಚನೆಯಲ್ಲಿ ಇತರೆ ಪಕ್ಷಗಳನ್ನು ಅವಲಂಬಿಸುವುದು ಅನಿವಾರ್ಯ.
ಮೈತ್ರಿ ಪಕ್ಷಗಳನ್ನು ಹೊರತುಪಡಿಸಿ ಬಿಜೆಪಿ 203 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಕಾಂಗ್ರೆಸ್ 109 ಕ್ಷೇತ್ರಗಳನ್ನು ಮಾತ್ರ ಪಡೆದುಕೊಳ್ಳಲಿದೆ. ಇನ್ನು 231 ಕ್ಷೇತ್ರಗಳು ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳನ್ನು ಹೊರತುಪಡಿಸಿ ಉಳಿದ ಪಕ್ಷಗಳ ಪಾಲಾಗಲಿವೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications