ಸಿ ವೋಟರ್-ಎಬಿಪಿ ಸಮೀಕ್ಷೆ: ಕರ್ನಾಟಕದಲ್ಲಿ ಬಿಜೆಪಿಗೆ 3 ಸ್ಥಾನ ಕುಸಿತ
ನವದೆಹಲಿ, ಜನವರಿ 24: ಲೋಕಸಭೆ ಚುನಾವಣೆ 2019ರ ಚುನಾವಣಾ ಪೂರ್ವ ಸಮೀಕ್ಷೆಯನ್ನು ಸಿ ವೋಟರ್ ನಡೆಸಿದ್ದು, ಎಬಿಪಿ ಸುದ್ದಿ ವಾಹಿನಿ ಈ ಸಮೀಕ್ಷೆಯ ಫಲಿತಾಂಶವನ್ನು ಪ್ರಕಟಿಸುತ್ತಿದೆ.
ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಲಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಮುನ್ನಡೆ ಪಡೆದುಕೊಳ್ಳಲಿವೆ.
ಒಟ್ಟು 22,309 ಸಮೀಕ್ಷೆ ಮಾದರಿಗಳನ್ನು ಬಳಸಿಕೊಳ್ಳಲಾಗಿದ್ದು, 2018ರ ಡಿಸೆಂಬರ್ನಿಂದ ಜನವರಿ ಮೂರನೇ ವಾರದವರೆಗೆ ಸಮೀಕ್ಷೆ ನಡೆಸಲಾಗಿದೆ. ಎಲ್ಲ ರಾಜ್ಯಗಳಲ್ಲಿನ ಎಲ್ಲ 543 ಲೋಕಸಭೆ ಕ್ಷೇತ್ರಗಳಲ್ಲಿಯೂ ಸಮೀಕ್ಷೆ ನಡೆಸಲಾಗಿದೆ.

ದೇಶದಲ್ಲಿ ಕಳೆದ 24 ವರ್ಷಗಳಲ್ಲಿಯೇ ನಡೆದ ಅತಿ ದೊಡ್ಡ ಹಾಗೂ ನಿಖರ ಸ್ವತಂತ್ರ ಚುನಾವಣಾ ಪೂರ್ವ ಮಾದರಿ ಸಮೀಕ್ಷೆಯಾಗಿದೆ ಎಂದು ಸಿ ವೋಟರ್ ಹೇಳಿಕೊಂಡಿದೆ.
ಎಬಿಪಿ ನ್ಯೂಸ್ ಮತ್ತು ಸಿವೋಟರ್ ನಡೆಸಿದ 'ಮೂಡ್ ಆಫ್ ದಿ ನೇಷನ್' ಸಮೀಕ್ಷೆಯ ಕರ್ನಾಟಕದ ಫಲಿತಾಂಶ ಇಲ್ಲಿದೆ.
ರಾಜ್ಯದಲ್ಲಿ ಬಿಜೆಪಿ ಕಳೆದ ಲೋಕಸಭೆ ಚುನಾವಣೆಯಲ್ಲಿ 28 ಲೋಕಸಭೆ ಕ್ಷೇತ್ರಗಳ ಪೈಕಿ 17ರಲ್ಲಿ ಬಿಜೆಪಿ ಜಯಭೇರಿ ಬಾರಿಸಿತ್ತು. ಆದರೆ, ಈ ಬಾರಿ ಚುನಾವಣೆಯಲ್ಲಿ ಅದು ಮೂರು ಸ್ಥಾನಗಳನ್ನು ಕಳೆದುಕೊಳ್ಳಲಿದೆ.

ಬಿಜೆಪಿ 14 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ 11 ಕ್ಷೇತ್ರಗಳಿಗೆ ಸಾಮರ್ಥ್ಯ ವೃದ್ಧಿಸಿಕೊಳ್ಳಲಿದೆ. ಎರಡು ಕ್ಷೇತ್ರದಲ್ಲಿ ಗೆದ್ದಿದ್ದ ಜೆಡಿಎಸ್, ಈ ಬಾರಿ ಮೂರಕ್ಕೇರಲಿದೆ ಎಂದು ಸಮೀಕ್ಷೆ ತಿಳಿಸಲಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications