Kejriwal ki Guarantee: ಜೈಲಿನಿಂದ ಬಂದು ಹತ್ತು ಗ್ಯಾರಂಟಿ ಘೋಷಿಸಿದ ಅರವಿಂದ್ ಕೇಜ್ರಿವಾಲ್
ನವದೆಹಲಿ, ಮೇ. 12: ಇತ್ತೀಚೆಗೆ ಜಾಮೀನಿನ ಮೇಲೆ ಹೊರ ಬಂದಿರುವ ದೆಹಲಿಯ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಳೆದೆರಡು ದಿನಗಳಿಂದ ತೊಡಗಿಸಿಕೊಂಡಿದ್ದಾರೆ. ಚುನಾವಣಾ ಪ್ರಚಾರದಲ್ಲಿರುವ ಅವರು "ಕೇಜ್ರಿವಾಲ್ ಕಿ ಗ್ಯಾರಂಟಿ"ಗಳನ್ನು ಘೋಷಿಸಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆದ್ದ ನಂತರ ಇಂಡಿಯಾ ಬಣವು ಅಧಿಕಾರಕ್ಕೆ ಬಂದರೆ ಮಾಡಬೇಕಾದ ಹತ್ತು ಕೆಲಸಗಳು ಇವು ಎಂದಿದ್ದಾರೆ. "ಈ ಗ್ಯಾರಂಟಿಗಳು ನವ ಭಾರತದ ದೃಷ್ಟಿ, ಅವುಗಳಿಲ್ಲದೆ ದೇಶವು ಶಕ್ತಿಯುತವಾಗಲು ಸಾಧ್ಯವಿಲ್ಲ" ಎಂದು ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆ: ಅರವಿಂದ್ ಕೇಜ್ರಿವಾಲ್ ಘೋಷಿಸಿದ 10 ಗ್ಯಾರಂಟಿಗಳು
1. 24 ಗಂಟೆ ವಿದ್ಯುತ್ ಸರಬರಾಜು: ತಮ್ಮ ಸರ್ಕಾರವು ರಾಷ್ಟ್ರವ್ಯಾಪಿ ನಿರಂತರ ವಿದ್ಯುತ್ ಲಭ್ಯತೆಯನ್ನು ಖಚಿತಪಡಿಸುತ್ತದೆ. ರಾಷ್ಟ್ರವ್ಯಾಪಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಅನ್ನು ಒದಗಿಸುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
2. ಶಿಕ್ಷಣ ಸುಧಾರಣೆ: ಸರ್ಕಾರವು ಸರ್ಕಾರಿ ಶಾಲೆಗಳನ್ನು ಗುಣಮಟ್ಟದಲ್ಲಿ ಖಾಸಗಿ ಸಂಸ್ಥೆಗಳನ್ನು ಮೀರಿಸುವಂತೆ ಮಾಡುತ್ತದೆ. ದೇಶದಲ್ಲಿ ಜನಿಸಿದ ಪ್ರತಿ ಮಗುವಿಗೆ ಉಚಿತ ಶಿಕ್ಷಣವನ್ನು ನೀಡುತ್ತದೆ ಎಂದು ಘೋಷಿಸಿದ್ದಾರೆ.
3. ಆರೋಗ್ಯ ಸುಧಾರಣೆ: ಪ್ರತಿ ಗ್ರಾಮ ಮತ್ತು ಪ್ರದೇಶದಲ್ಲಿ ಮೊಹಲ್ಲಾ ಚಿಕಿತ್ಸಾಲಯಗಳನ್ನು ಸ್ಥಾಪಿಸಲಾಗುವುದು. ಜಿಲ್ಲಾ ಆಸ್ಪತ್ರೆಗಳನ್ನು -ವಿಶೇಷ ಸೌಲಭ್ಯಗಳಿಗೆ ಮೇಲ್ದರ್ಜೆಗೇರಿಸುವುದಾಗಿ ಭರವಸೆ ನೀಡಿದ್ದಾರೆ.
4. ರಾಷ್ಟ್ರೀಯ ಭದ್ರತೆ: "ಚೀನಾದಿಂದ ಭೂಮಿಯನ್ನು ಮರಳಿ ಪಡೆಯಲು" ಮತ್ತು ಪ್ರಾದೇಶಿಕ ಸಮಗ್ರತೆಗಾಗಿ ರಾಜತಾಂತ್ರಿಕ ಪ್ರಯತ್ನಗಳನ್ನು ಮುಂದುವರಿಸಲು ನಾವು ಸೈನ್ಯಕ್ಕೆ ಸಂಪೂರ್ಣ ಸ್ವಾಯತ್ತತೆಯನ್ನು ನೀಡುತ್ತೇವೆ ಎಂದಿದ್ದಾರೆ.
5. ಅಗ್ನಿವೀರ್ ಯೋಜನೆ ಸ್ಥಗಿತ: ನಾವು ಅಗ್ನಿವೀರ್ ಯೋಜನೆಯನ್ನು ಸ್ಥಗಿತಗೊಳಿಸುತ್ತೇವೆ. ಈಗಾಗಲೇ ದಾಖಲಾಗಿರುವ ಎಲ್ಲರನ್ನೂ ಶಾಶ್ವತ ಹುದ್ದೆಗಳಿಗೆ ಕ್ರಮಬದ್ಧಗೊಳಿಸುತ್ತೇವೆ. ಗುತ್ತಿಗೆ ವ್ಯವಸ್ಥೆಯನ್ನು ರದ್ದುಗೊಳಿಸುತ್ತೇವೆ ಮತ್ತು ಸೇನೆಗೆ ಸಾಕಷ್ಟು ಹಣವನ್ನು ನೀಡುತ್ತೇವೆ ಎಂದಿದ್ದಾರೆ.

6. ರೈತರ ಕಲ್ಯಾಣ: ಸ್ವಾಮಿನಾಥನ್ ವರದಿಯ ಆಧಾರದ ಮೇಲೆ ಬೆಳೆಗಳಿಗೆ ನ್ಯಾಯಯುತ ಪರಿಹಾರವನ್ನು ಒದಗಿಸಿ, ರೈತರು ಗೌರವಯುತ ಜೀವನವನ್ನು ನಡೆಸುವುದನ್ನು ಖಚಿತಪಡಿಸಿಕೊಳ್ಳುವುದು.
7. ದೆಹಲಿ ರಾಜ್ಯದ ಸ್ಥಾನಮಾನ: ದೆಹಲಿ ಜನರ ಬಹುಕಾಲದ ಬೇಡಿಕೆ ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡುವುದು, ಅದನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು.
8. ಉದ್ಯೋಗ ಸೃಷ್ಟಿ: ನಿರುದ್ಯೋಗವನ್ನು ಬಗೆಹರಿಸಲು ಇಂಡಿಯಾ ಒಕ್ಕೂಟ ಸರ್ಕಾರವು ವಾರ್ಷಿಕವಾಗಿ 2 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಎಎಪಿ ಮುಖ್ಯಸ್ಥರು ಹೇಳಿದ್ದಾರೆ.
9. ಭ್ರಷ್ಟಾಚಾರ ನಿರ್ಮೂಲನೆ: "ಬಿಜೆಪಿಯ ರಕ್ಷಣಾತ್ಮಕ ಕ್ರಮಗಳನ್ನು" ಕಿತ್ತುಹಾಕುವ ಮೂಲಕ ಮತ್ತು ಎಲ್ಲರಿಗೂ ಹೊಣೆಗಾರಿಕೆಯನ್ನು ಖಾತರಿಪಡಿಸುವ ಮೂಲಕ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲಾಗುತ್ತದೆ.
10. ವ್ಯಾಪಾರ ಮತ್ತು ಕೈಗಾರಿಕೆ ಪ್ರಚಾರ: ಪಿಎಂಎಲ್ಎ ನಿಯಮಗಳನ್ನು ತೆಗೆದುಹಾಕುವ ಮೂಲಕ ಜಿಎಸ್ಟಿಯನ್ನು ಸರಳೀಕರಿಸುವುದು. ಉತ್ಪಾದನಾ ವಲಯದಲ್ಲಿ ಚೀನಾವನ್ನು ಮೀರಿಸುವ ಗುರಿಯನ್ನು ನೀಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications