Lok Sabha election: ಮೇ 20 ರಂದು ಐದನೇ ಹಂತದ ಚುನಾವಣೆ: 49 ಸ್ಥಾನಗಳಲ್ಲಿ 695 ಅಭ್ಯರ್ಥಿಗಳು ಕಣಕ್ಕೆ
ಭಾರತದಲ್ಲಿ ಈಗ ಚುನಾವಣೆಯ ಬಿಸಿ ಜೋರಾಗಿದೆ. ಈಗಾಗಲೇ ದೇಶದಲ್ಲಿ ನಾಲ್ಕು ಹಂತದ ಚುನಾವಣೆಗಳು ಮುಗಿದಿದ್ದು, ಇನ್ನು ಮೂರು ಹಂತದ ಚುನಾವಣೆಗಳು ಬಾಕಿ ಇವೆ. ಐದನೇ ಹಂತದ ಚುನಾವಣೆ ಸೋಮವಾರ ನಡೆಯಲಿದೆ. ಈ ಚುನಾವಣೆ ಬಿಸಿ ಈಗ ಐದನೇ ಹಂತದ ಮತದಾನ ನಡೆಯುವ ರಾಜ್ಯಗಳಲ್ಲಿ ವ್ಯಾಪಕವಾಗಿದೆ. ಐದನೇ ಹಂತದ ಮತದಾನ 49 ಸ್ಥಾನಗಳಿಗೆ ನಡೆಯಲಿದ್ದು, ಒಟ್ಟು 695 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಐದನೇ ಸುತ್ತಿನ ಚುನಾವಣಾ ಪ್ರಚಾರ ಶನಿವಾರ ಮುಕ್ತಾಯವಾಗಲಿದೆ. ಮೇ 20 ರಂದು ನಡೆಯಲಿರುವ ಮತದಾನದಲ್ಲಿ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಒಡಿಶಾ, ಜಾರ್ಖಂಡ್ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಕಾಶ್ಮೀರ ಮತ್ತು ಲಡಾಖ್ನ ಒಟ್ಟು ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಐದನೇ ಸುತ್ತಿನಲ್ಲಿ ಮತದಾನ ನಡೆಯುತ್ತಿರುವ ಸ್ಥಾನಗಳಲ್ಲಿ ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳದ ಏಳು ಮತ್ತು ಬಿಹಾರ ಮತ್ತು ಒಡಿಶಾದಲ್ಲಿ ತಲಾ ಐದು ಸ್ಥಾನಗಳು ಸೇರಿವೆ. ಇದಲ್ಲದೆ, ಈ ಹಂತದಲ್ಲಿ ಜಾರ್ಖಂಡ್ನ ಮೂರು ಸ್ಥಾನಗಳು, ಜಮ್ಮು-ಕಾಶ್ಮೀರ ಮತ್ತು ಲಡಾಖ್ನ ತಲಾ ಒಂದು ಸ್ಥಾನಕ್ಕೂ ಮತದಾನ ನಡೆಯಲಿದೆ.
ಚುನಾವಣಾ ಆಯೋಗದ ಪ್ರಕಾರ ಐದನೇ ಹಂತದ ಮತದಾನಕ್ಕೆ 695 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಐದನೇ ಹಂತಕ್ಕೆ ಸಲ್ಲಿಸಲಾದ 1,586 ನಾಮನಿರ್ದೇಶನ ಸಲ್ಲಿಸಲಾಗಿತ್ತು.

ಕಣದಲ್ಲಿರುವ ಪ್ರಮುಖರು
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನದಲ್ಲಿ ಮತದಾರ ಹಲವು ಪ್ರಮುಖ ಅಭ್ಯರ್ಥಿಗಳ ಹಣೆ ಬರಹ ನಿರ್ಧರಿಸಲಿದ್ದಾನೆ. ಕಾಂಗ್ರೆಸ್ನ ರಾಹುಲ್ ಗಾಂಧಿ, ರಾಯ್ ಬರೇಲಿ ಸ್ಥಾನದಿಂದ ಸ್ಪರ್ಧಿಸುತ್ತಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ, ಅಮೇಥಿ ಕ್ಷೇತ್ರದಿಂದ, ಲಕ್ನೋದಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್; ಕೈಸರ್ಗಂಜ್ನಿಂದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಮಗ ಕರಣ್ ಭೂಷಣ್ ಸಿಂಗ್, RJD ನಾಯಕ ಮತ್ತು ಪಕ್ಷದ ವರಿಷ್ಠ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಅವರ ಪುತ್ರಿ; ಸರನ್ನಿಂದ ರೋಹಿಣಿ ಆಚಾರ್ಯ, ಹಾಜಿಪುರದಿಂದ ಚಿರಾಗ್ ಪಾಸ್ವಾನ್, ಮುಂಬೈ ಉತ್ತರದಿಂದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಮತ್ತು ಬಾರಾಮುಲ್ಲಾದಿಂದ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಕಣದಲ್ಲಿರುವ ಪ್ರಮುಖರು.

ಐದನೇ ಹಂತದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ 2019ರಲ್ಲಿ ಒಟ್ಟು 62.01% ಮತದಾನವಾಗಿದೆ. ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು 80.13% ಮತದಾನ ನಡೆದಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ 34.6% ಮತದಾನ ನಡೆದಿತ್ತು. ಐದನೇ ಹಂತದ ಮತದಾನ ಮುಗಿದ ಕೂಡಲೇ ದೇಶದ 543 ಲೋಕಸಭಾ ಕ್ಷೇತ್ರಗಳ ಪೈಕಿ 428 ಕ್ಷೇತ್ರಗಳಿಗೆ ಮತದಾನ ಪೂರ್ಣಗೊಳ್ಳಲಿದೆ.
ಲೋಕಸಭೆ ಚುನಾವಣೆಗಳು ಏಳು ಹಂತಗಳಲ್ಲಿ ನಡೆಯುತ್ತಿದೆ. ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications