ಲೋಕಸಭೆಗೆ ಇಂದು 4ನೇ ಹಂತದ ಮತದಾನ: ಘಟಾನುಘಟಿ ನಾಯಕರಿಗೆ ಅಗ್ನಿ ಪರೀಕ್ಷೆ- ಕಣದಲ್ಲಿ ಯಾರಿದ್ದಾರೆ?
ದೆಹಲಿ, ಮೇ 13: ಲೋಕಸಭೆಗೆ ಇಂದು 4ನೇ ಹಂತದ ಮತದಾನ ನಡೆಯಲಿದೆ. ಎರಡು ತೆಲುಗು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಒಟ್ಟು 9 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದ 96 ಸ್ಥಾನಗಳಿಗೆ ಮತದಾನ ನಡೆಯಲಿದೆ. 1,717 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಲ್ಲದೇ ಅಖಿಲೇಶ್ ಯಾದವ್ನಿಂದ ಮಹುವಾ ಮೊಯಿತ್ರಾ ವರೆಗೆ ಇಂದು ಘಟಾನುಘಟಿ ನಾಯಕರಿಗೆ ಅದೃಷ್ಟ ಪರೀಕ್ಷೆ ಎದುರಾಗಿದೆ.
ಏಳು ಹಂತದ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಇಂದು (ಮೇ 13) ನಡೆಯುತ್ತಿದೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮತ್ತು ಟಿಎಂಸಿ ನಾಯಕ ಮಹುವಾ ಮೊಯಿತ್ರಾ ಸೇರಿದಂತೆ ಹಲವು ಪ್ರಮುಖ ನಾಯಕರ ಚುನಾವಣಾ ಭವಿಷ್ಯ ಈ ಹಂತದಲ್ಲಿ ನಿರ್ಧಾರವಾಗಲಿದೆ. ನಾಲ್ಕನೇ ಹಂತದ ಸಾರ್ವತ್ರಿಕ ಚುನಾವಣೆಯಲ್ಲಿ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

8.73 ಕೋಟಿ ಮಹಿಳೆಯರು ಸೇರಿದಂತೆ ಒಟ್ಟು 17.70 ಕೋಟಿಗೂ ಹೆಚ್ಚು ಮತದಾರರಿಗೆ ಅನುಕೂಲ ಮಾಡಿಕೊಡಲು 1.92 ಲಕ್ಷ ಮತಗಟ್ಟೆಗಳಲ್ಲಿ 19 ಲಕ್ಷಕ್ಕೂ ಹೆಚ್ಚು ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರದ 5, ಮಧ್ಯಪ್ರದೇಶದ 8, ಜಾರ್ಖಂಡ್ನ 4, ಮಹಾರಾಷ್ಟ್ರದ 11, ತೆಲಂಗಾಣದ ಎಲ್ಲಾ 17 ಸ್ಥಾನಗಳು, ಉತ್ತರಪ್ರದೇಶದ 13, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಜಮ್ಮುವಿನಲ್ಲಿ ಮತದಾನ ನಡೆಯಲಿದೆ.
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, 2021ರ ಲಖೀಂಪುರ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ತೇನಿ, ನಟ-ರಾಜಕಾರಣಿ ಶತ್ರುಘ್ನ ಸಿನ್ಹಾ ಮತ್ತು ಮಾಜಿ ಕ್ರಿಕೆಟಿಗ ಸೇರಿದಂತೆ ಹಲವಾರು ರಾಜಕೀಯ ದಿಗ್ಗಜರು ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಕಣದಲ್ಲಿದ್ದಾರೆ.
ಪ್ರಮುಖ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ
* ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ - ಕನೌಜ್, ಉತ್ತರ ಪ್ರದೇಶ
* ಕೇಂದ್ರ ಸಚಿವ ಗಿರಿರಾಜ್ ಸಿಂಗ್ - ಬೇಗುಸರಾಯ್, ಬಿಹಾರ
* ಕೇಂದ್ರ ಸಚಿವ ನಿತ್ಯಾನಂದ ರೈ - ಉಜಿಯಾರ್ಪುರ, ಬಿಹಾರ
* ಕೇಂದ್ರ ಸಚಿವ ರಾವ್ಸಾಹೇಬ್ ದಾನ್ವೆ - ಜಲ್ನಾ, ಮಹಾರಾಷ್ಟ್ರ
* ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ತೇನಿ - ಖೇರಿ, ಉತ್ತರ ಪ್ರದೇಶ
* ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೈದರಾಬಾದ್, ತೆಲಂಗಾಣ
* ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಹರಂಪುರ್, ಪಶ್ಚಿಮ ಬಂಗಾಳ
* ಚಲನಚಿತ್ರ ನಟ ಕಮ್ ರಾಜಕಾರಣಿ ಶತ್ರುಘ್ನ ಸಿನ್ಹಾ - ಅಸನ್ಸೋಲ್, WB
* TMC ಯ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್, ಬಹರಂಪುರ್, WB
* ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ವೈ.ಎಸ್ ಶರ್ಮಿಳಾ - ಕಡಪ, ಆಂಧ್ರ ಪ್ರದೇಶ,
ಅಖಿಲೇಶ್ ಯಾದವ್: ಸಮಾಜವಾದಿ ಪಕ್ಷ ಮುಖ್ಯಸ್ಥರಾದ ಅಖಿಲೇಶ್ ಯಾದವ್ ಅವರು ಉತ್ತರಪ್ರದೇಶದ ಕನೌಜ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇನ್ನೂ ಬಿಜೆಪಿಯು ಸುಬ್ರತ್ ಪಾಠಕ್ ಅವರನ್ನು ಕಣಕ್ಕಿಳಿಸಿದ್ದು, ಈ ಕ್ಷೇತ್ರವು 1998 ರಿಂದ ಎಸ್ಪಿಯ ಭದ್ರಕೋಟೆಯಾಗಿದ್ದು, 2019 ರಲ್ಲಿ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರು ಈ ಕ್ಷೇತ್ರದಿಂದ ಸೋಲು ಕಂಡಿದ್ದರು.
ವೈಎಸ್ ಶರ್ಮಿಳಾ: ಈ ಬಾರಿ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ್ ರೆಡ್ಡಿ ಅವರ ಕುಟುಂಬದ ವೈಎಸ್ ಶರ್ಮಿಳಾ ಕಡಪ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆಯಲ್ಲಿದ್ದಾರೆ. ಆಂಧ್ರಪ್ರದೇಶದ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆಯಾಗಿರುವ ಶರ್ಮಿಳಾ ರೆಡ್ಡಿ, ವೈಎಸ್ಆರ್ಸಿಪಿ ಸಂಸದ ವೈಎಸ್ ಅವಿನಾಶ್ ರೆಡ್ಡಿ ವಿರುದ್ಧ ಕಣಕ್ಕಿಳಿದಿದ್ದಾರೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications