Lok Sabha Election: ಇವಿಎಂನಲ್ಲಿ ಪ್ರಧಾನಿ ಚಿತ್ರ ನೋಡದ ಮಹಿಳೆ ಜಗಳ
ದೇಶದಲ್ಲಿ ಮೊದಲ ಹಂತದ ಮತದಾನ ಪೂರ್ಣಗೊಂಡಿದ್ದು, ಎರಡನೇ ಹಂತದ ಮತದಾನಕ್ಕೆ 88 ಲೋಕಸಭಾ ಕ್ಷೇತ್ರಗಳು ಸಾಕ್ಷಿಯಾಗುತ್ತಿವೆ. ಈ ಬೆನ್ನಲ್ಲೆ ಮೊದಲ ಹಂತದಲ್ಲಿ ನಡೆದ ಘಟನೆ ಬೆಳಕಿಗೆ ಬಂದಿದೆ. ಅಷ್ಟಕ್ಕೂ ಈ ಸುದ್ದಿಯನ್ನು ಓದಿ ನಗುವುದು ಗ್ಯಾರಂಟಿ.
ರಾಜಸ್ಥಾನದಲ್ಲಿ ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆದಿತ್ತು. ಈ ವೇಳೆ ಮತದಾರರೊಬ್ಬರು ಅಧಿಕಾರಿಗಳೊಂದಿಗೆ ಜಗಳ ಮಾಡಿಕೊಂಡಿದ್ದಾರೆ. ಅಂದಹಾಗೆ ಈ ಮತದಾರೆ ಜಗಳ ಮಾಡಿಕೊಂಡಿದ್ದು ಏಕೆಂದರೆ, ಇವಿಎಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವನ್ನು ಏಕೆ ಪ್ರದರ್ಶಿಸಿಲ್ಲ ಎಂದು ಮಹಿಳೆಯೊಬ್ಬರು ಮತಗಟ್ಟೆಯಲ್ಲಿ ಅಧಿಕಾರಿಗಳೊಂದಿಗೆ ಜಗಳ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಆಗಿದ್ದೇನು?
ಏಪ್ರಿಲ್ 19 ರಂದು ರಾಜಸ್ಥಾನದ ಪಿಪ್ರಾಲಿಯ ಬೂತ್ಗೆ ಮಹಿಳೆಯರ ಗುಂಪೊಂದು ಮತ ಚಲಾಯಿಸಲು ಬಂದಿತ್ತು. ಆಗ ಎಲ್ಲರೂ ಸರತಿ ಸಾಲಿನಲ್ಲಿ ನಿಂತು ಮತ ಚಾಲಿಸುತ್ತಿದ್ದರು. ಅಷ್ಟರಲ್ಲಿ ಒಬ್ಬ ಮಹಿಳೆ ಮತ ಚಲಾಯಿಸುವಾಗ, ಇವಿಎಂ ಮಶೀನ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಕಾಣದೆ ಕಂಗಾಲಾಗಿದ್ದಾಳೆ.
ಮಹಿಳೆ ಪೋಲಿಂಗ್ ಅಧಿಕಾರಿಗಳನ್ನು ಕರೆದು ನನ್ನ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಎಲ್ಲಿದೆ ಎಂದು ಕಿಡಿಕಾರಿದ್ದಾರೆ ಎಂದು ತಿಳಿದ ಬಂದಿದೆ. ಆಗ ಅಲ್ಲಿದ್ದ ಅಧಿಕಾರಿಗಳು ವಸ್ತು ಸ್ಥಿತಿಯನ್ನು ವಿವರಿಸಿದರು. ಫೋಟೋ ಹಾಗೂ ಚುನಾವಣೆ ಚಿಹ್ನೆ ಪ್ರಧಾನಿ ಮೋದಿ ಅವರದ್ದಲ್ಲ. ಅವರ ಪಕ್ಷವನ್ನು ಪ್ರತಿನಿಧಿಸುವ ಅಭ್ಯರ್ಥಿಯದ್ದಾಗಿದೆ ಎಂದು ತಿಳಿಸಿದರು. ಅಲ್ಲದೆ ಇದು ಮೋದಿ ಅವರ ಚುನಾವಣೆಯಲ್ಲ ಅವರ ಪಕ್ಷದ ಚುನಾವಣೆ. ಅವರ ಪಕ್ಷದ ಪರವಾಗಿ ಈ ಕ್ಷೇತ್ರದಲ್ಲೂ ಒಬ್ಬ ಅಭ್ಯರ್ಥಿಗೆ ಟಿಕೆಟ್ ನೀಡಲಾಗುತ್ತದೆ ಎಂದು ತಿಳಿಸಿದರು. ಇದಾದ ಬಳಿಕ ಅವರು ಮತ ಚಲಾಯಿಸಿದರು ಎಂದು ತಿಳಿದು ಬಂದಿದೆ.
माताओं-बहनों के इस स्नेह को देखकर मेरी आंखों में आंसू हैं, संकल्प भी है इस कर्ज को उतारने का 🙏🙏
— Narendra Modi (@narendramodi) April 25, 2024
लेकिन लक्ष्मीकांत जी, यह हम कार्यकर्ताओं की जिम्मेदारी है कि हम इन बारीकियों पर ध्यान दें। घर-घर जाकर लोगों को जागरूक करें। https://t.co/E8XtzAyS0u
ಮೋದಿ ಭಾವುಕ
ಏಪ್ರಿಲ್ 19ರಂದು ರಾಜಸ್ಥಾನದ ಪಿಪ್ರಾಲಿಯಲ್ಲಿ ನಡೆದ ಸುದ್ದಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಲುಪಿತು. ಇದಕ್ಕೆ ಪ್ರತಿಯಾಗಿ ಪ್ರಧಾನಿ ಸಹ ಟ್ವೀಟ್ ಮಾಡಿ ಮಾಡಿದ್ದಾರೆ. ತಾಯಂದಿರು ಮತ್ತು ಸಹೋದರಿಯರ ಈ ವಾತ್ಸಲ್ಯವನ್ನು ನೋಡಿದ ನಂತರ ನನ್ನ ಕಣ್ಣಲ್ಲಿ ನೀರು ಬಂದಿದೆ. ಈ ಋಣವನ್ನು ತೀರಿಸುವ ಸಂಕಲ್ಪ ನನಗೂ ಇದೆ ಎಂದು ಬರೆದುಕೊಂಡಿದ್ದಾರೆ.
ಇನ್ನು ಲಕ್ಷ್ಮಿಕಾಂತ್ ಅವರೇ, ಇದು ನಮ್ಮ ಕಾರ್ಯಕರ್ತರ ಜವಾಬ್ದಾರಿಯಾಗಿದೆ. ನಾವೆಲ್ಲಾ ಈ ಸಣ್ಣ ಸಣ್ಣ ಕೆಲಸಗಳತ್ತವೂ ಗಮನ ಹರಿಸಬೇಕಿದೆ. ಮನೆ ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ್ದಾರೆ.
ಈ ಘಟನೆಯ ಪತ್ರಿಕೆಯ ಕಟಿಂಗ್ ಅನ್ನು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ಮೊದಲು ಪಕ್ಷದ ಕಾರ್ಯಕರ್ತ ಲಕ್ಷ್ಮೀಕಾಂತ್ ಭಾರದ್ವಾಜ್ ಅವರು ಹಂಚಿಕೊಂಡಿದ್ದಾರೆ.
ಲೋಕಸಭೆ ಚುನಾವಣೆ 2024 ಬಿಸಿ ಏರುತ್ತಲೇ ಇದೆ. ಭಾರತದಲ್ಲಿ ಒಟ್ಟು ಏಳು ಹಂತಗಳಲ್ಲಿ ಚುನಾವಣೆಗಳು ನಡೆಯುತ್ತಿವೆ. ಶುಕ್ರವಾರ (ಏ.26)ರಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಏಳನೇ ಹಂತದ ಮತದಾನ ಜೂನ್ 1 ರಂದು ನಡೆಯಲಿದೆ. 2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಜೂನ್ 4 ರಂದು ಹೋರ ಬೀಳಲಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications