ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ನೋಟಿಸ್, ಕಾರಣವೇನು ಗೊತ್ತಾ?

ನವದೆಹಲಿ, ಮಾರ್ಚ್‌ 27: ಲೋಕಸಭೆಯ ವಸತಿ ಸಮಿತಿಯು ದೆಹಲಿಯಲ್ಲಿರುವ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸೋಮವಾರ ನೋಟಿಸ್ ನೀಡಿದೆ.

ಸೂರತ್ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಅಪರಾಧಿ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಶುಕ್ರವಾರ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿತ್ತು. ಅಧಿಕೃತ ನೋಟಿಫಿಕೇಶನ್ ಪ್ರಕಾರ, ವೈನಾಡ್ ಸಂಸದರಾದ ರಾಹುಲ್‌ ಗಾಂಧಿ ಅವರು ಏಪ್ರಿಲ್ 22 ರೊಳಗೆ ಲುಟ್ಯೆನ್ಸ್ ದೆಹಲಿಯ 12 ತುಘಲಕ್ ಲೇನ್‌ನಲ್ಲಿರುವ 5 ಕೋಣೆಗಳ ಟೈಪ್ 8 ಬಂಗಲೆಯನ್ನು ಖಾಲಿ ಮಾಡಬೇಕಾಗುತ್ತದೆ.

Lok Sabha Housing Committee given notice to Rahul Gandhi to vacate govt-allotted bungalow

ಬಿಜೆಪಿ ನೇತೃತ್ವದ ಸರ್ಕಾರವು ಜನರ ನಿವೃತ್ತಿ ಉಳಿತಾಯದ ಹಣವನ್ನು ಅದಾನಿ ಸಮೂಹದ ಒಡೆತನದ ಕಂಪನಿಗಳಲ್ಲಿ ಹೂಡಿಕೆ ಮಾಡಲು ಅವಕಾಶ ನೀಡುತ್ತಿದೆ ಎಂದು ಆರೋಪಿಸಿ ಅದಾನಿ ವಿಷಯದ ಬಗ್ಗೆ ರಾಹುಲ್‌ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆಯಾಗಿದೆ. ಅದಾನಿ ತನಿಖೆಗೆ ಇಷ್ಟೊಂದು ಭಯ ಏಕೆ ಎಂದು ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದರು.

ಟ್ವಿಟರ್‌ನಲ್ಲಿ ರಾಹುಲ್ ಗಾಂಧಿ, "ಎಲ್‌ಐಸಿಯ ಬಂಡವಾಳ, ಅದಾನಿಗೆ! ಎಸ್‌ಬಿಐ ಬಂಡವಾಳ, ಅದಾನಿಗೆ! ಇಪಿಎಫ್‌ಒ ಬಂಡವಾಳವೂ ಅದಾನಿಗೆ! 'ಮೋದಾನಿ' ಬಹಿರಂಗಗೊಂಡ ನಂತರವೂ ಸಾರ್ವಜನಿಕರ ನಿವೃತ್ತಿ ಹಣವನ್ನು ಅದಾನಿ ಕಂಪನಿಗಳಲ್ಲಿ ಏಕೆ ಹೂಡಿಕೆ ಮಾಡಲಾಗುತ್ತಿದೆ?" ಪ್ರಧಾನಿ ಉತ್ತರ ನೀಡುತ್ತಿಲ್ಲ ಮತ್ತು ಯಾವುದೇ ತನಿಖೆಗೆ ಕರೆ ನೀಡುತ್ತಿಲ್ಲ. ಅವರು ಯಾಕೆ ತುಂಬಾ ಹೆದರುತ್ತಾರೆ? ಎಂದು ಟ್ವೀಟ್‌ ಮಾಡಿದ್ದರು.

ಯುಎಸ್ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ವರದಿಯು ಕಳೆದ ತಿಂಗಳು ಮೋಸದ ವಹಿವಾಟುಗಳು ಮತ್ತು ಷೇರು ಬೆಲೆಯ ಏರಿಳಿತ ಸೇರಿದಂತೆ ಆರೋಪಗಳನ್ನು ಮಾಡಿದ ನಂತರ ಅದಾನಿ ಗ್ರೂಪ್ ಷೇರುಗಳ ಮೇಲೆ ಉಂಟಾದ ನಷ್ಟದ ನಂತರ ಪ್ರಮುಖ ರಾಜಕೀಯ ವಿವಾದವು ಸ್ಫೋಟಗೊಂಡಿತು. ಗೌತಮ್ ಅದಾನಿ ನೇತೃತ್ವದ ಗುಂಪು ಹಿಂಡೆನ್‌ಬರ್ಗ್ ರಿಸರ್ಚ್ ವರದಿಯಲ್ಲಿರುವ ಆರೋಪಗಳನ್ನು ಸುಳ್ಳು ಎಂದು ತಳ್ಳಿಹಾಕಿದೆ. ಇದು ಎಲ್ಲಾ ಕಾನೂನುಗಳು ಮತ್ತು ಬಹಿರಂಗಪಡಿಸುವಿಕೆಯ ಅವಶ್ಯಕತೆಗಳನ್ನು ಅನುಸರಿಸುತ್ತದೆ ಎಂದು ಹೇಳಿದೆ. ಅದಾನಿ ವಿಚಾರದಲ್ಲಿ ಗಾಂಧಿ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

Lok Sabha Housing Committee given notice to Rahul Gandhi to vacate govt-allotted bungalow

ಅದಾನಿ ವಿಷಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರಿಂದ ಲೋಕಸಭೆಯಿಂದ ಅನರ್ಹಗೊಳಿಸಲಾಗಿದೆ ಎಂದು ರಾಹುಲ್‌ ಗಾಂಧಿ ಅವರು ಆರೋಪಿಸಿದ್ದಾರೆ. ಆದರೆ ಸಂಸತ್ತಿನಿಂದ ಆಜೀವ ಅನರ್ಹಗೊಂಡರೂ ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಅವರು ತಿಳಿಸಿದ್ದಾರೆ. ಅದಾನಿ ವಿವಾದ ಮತ್ತು ಲೋಕಸಭೆಯಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಹಲವು ವಿರೋಧ ಪಕ್ಷದ ಸಂಸದರು ಸೋಮವಾರ ಕಪ್ಪು ಬಟ್ಟೆ ಧರಿಸಿ ಸಂಸತ್ತಿನಿಂದ ವಿಜಯ್ ಚೌಕ್‌ಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಮಂದಿ ಸಂಸದರು ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸತ್ಯಮೇವ ಜಯತೆ ಬ್ಯಾನರ್ ಮತ್ತು ಪ್ರಜಾಪ್ರಭುತ್ವ ಉಳಿಸಿ ಎಂದು ಬರೆದಿರುವ ಫಲಕಗಳನ್ನು ಹಿಡಿದುಕೊಂಡು ಸಂಸದರು ವಿಜಯ್ ಚೌಕ್ ಕಡೆಗೆ ತೆರಳಿ ಧರಣಿ ನಡೆಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+