ಲೋಕಸಭೆಯಲ್ಲಿ ಸಂಸದರ ಶೇ.30ರಷ್ಟು ವೇತನ ಕಡಿತದ ಮಸೂದೆ ಅಂಗೀಕಾರ
ನವದೆಹಲಿ, ಸಪ್ಟೆಂಬರ್.15: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಭಾಯಿಸುವ ಉದ್ದೇಶದಿಂದ ಸಂಸದರ ಒಂದು ವರ್ಷದ ವೇತನದಲ್ಲಿ ಶೇ.30ರಷ್ಟು ಕಡಿತಗೊಳಿಸುವ ಪ್ರಸ್ತಾವನೆಯನ್ನು ಲೋಕಸಭೆಯಲ್ಲಿ ಮಂಗಳವಾರ ಸರ್ವಾನುಮತಗಳಿಂದ ಅಂಗೀಕರಿಸಲಾಯಿತು.
ಸಂಸತ್ ಸದಸ್ಯರ ವೇತನ, ಭತ್ಯೆ ಮತ್ತು ಪಿಂಚಣಿ (ತಿದ್ದುಪಡಿ) ಮಸೂದೆ, 2020 ಅನ್ನು ಲೋಕಸಭೆಯ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ. ಸೆ.14ರ ಸೋಮವಾರ ಲೋಕಸಭೆಯಲ್ಲಿ ಮಸೂದೆ ಮಂಡಿಸಲಾಗಿತ್ತು.
ಕೇಂದ್ರ ಸರ್ಕಾರವು ಇದಕ್ಕೂ ಮೊದಲು 2020ರ ಮಂತ್ರಿಗಳ ವೇತನ ಮತ್ತು ಭತ್ಯೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ವರ್ಷದ ಏಪ್ರಿಲ್.1ರಿಂದ ಪ್ರಾರಂಭದಿಂದ ಒಂದು ವರ್ಷದ ಅವಧಿಗೆ ಪ್ರತಿ ಸಚಿವರಿಗೆ ಪಾವತಿಸಬೇಕಾದ ಸಂಪೂರ್ಣ ಭತ್ಯೆಯಲ್ಲಿ ಶೇ.30ರಷ್ಟು ಕಡಿತಗೊಳಿಸಲಾಗುತ್ತದೆ.

ಏಪ್ರಿಲ್.5ರಂದೇ ಸಚಿವರ ಭತ್ಯೆ ಕಡಿತದ ತೀರ್ಮಾನ:
ಕಳೆದ ಏಪ್ರಿಲ್.05ರಂದು ನಡೆದ ಕೇಂದ್ರ ಸಚಿವರ ಸಂಪುಟ ಸಭೆಯಲ್ಲಿ ಸಂಸದರು ಮತ್ತು ಸಚಿವರ ವೇತನ ತಿದ್ದುಪಡಿ ಕಾಯ್ದೆ ಬಗ್ಗೆ ಚರ್ಚಿಸಲಾಗಿತ್ತು. ಸಚಿವರ ಭತ್ಯೆ, ಪಿಂಚಣಿಯನ್ನು ಶೇ.30ರಷ್ಟು ಕಡಿತಗೊಳಿಸುವ ತೀರ್ಮಾನಿಸಲಾಗಿತ್ತು. ಸಂಸದರ ಪ್ರಾದೇಶಿಕ ಅಭಿವೃದ್ಧಿ ಯೋಜನೆಯನ್ನು ಎರಡು ವರ್ಷಗಳ ಕಾಲ ಸ್ಥಗಿತಗೊಳಿಸಲು ಮತ್ತು ಮೊತ್ತವನ್ನು ಸರ್ಕಾರದ ಏಕೀಕೃತ ನಿಧಿಗೆ ವರ್ಗಾಯಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications