ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಡಿ ಕೆ ಸುರೇಶ್, ಹೆಗ್ಡೆ ಸ್ಥಾನ: ಪಟ್ಟಿಯಲ್ಲಿ ಯಾರಿದ್ದಾರೆ?
ಬೆಂಗಳೂರು, ಮಾರ್ಚ್ 08: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಕರ್ನಾಟಕದ 28 ಸ್ಥಾನಗಳ ಪೈಕಿ 14-15 ಸ್ಥಾನಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಇನ್ನೆರಡು ದಿನದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕಲಬುರಗಿಯಿಂದ ಖರ್ಗೆ ಅವರ ಅಳಿಯ ರಾಧಾಕೃಷ್ಣ, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್, ತುಮಕೂರಿನ ಎಸ್ಪಿ ಮುದ್ದಹನುಮೇಗೌಡ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ.ಜಯಪ್ರಕಾಶ ಹೆಗಡೆ ಸೇರಿದಂತೆ ಹಲವರ ಹೆಸರು ಮೊದಲ ಪಟ್ಟಿಯಲ್ಲಿ ಬಿಡುಗಡೆಯಾಗಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರ ಹೆಸರು ಕೆಪಿಸಿಸಿ ಪ್ರಸ್ತಾಪಿಸಿದ ಪಟ್ಟಿಯಲ್ಲಿ ಇಲ್ಲ, ಏಕೆಂದರೆ ಅವರನ್ನು ಮೈಸೂರು-ಕೊಡಗಿನಿಂದ ಕಣಕ್ಕೆ ಇಳಿಸದಿರಲು ಸಿಎಂ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬದಲಾಗಿ ಮೈಸೂರು ಡಿಸಿಸಿ ಅಧ್ಯಕ್ಷ ವಿಜಯಕುಮಾರ್, ಒಕ್ಕಲಿಗರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ತೋಟಗಾರಿಕಾ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಅವರ ಹೆಸರು ಕೈಬಿಟ್ಟಿರುವುದರಿಂದ ಕುರುಬ ಜನಾಂಗದ ವಿನಯ್ಕುಮಾರ್ ಅವರಿಗೆ ದಾವಣಗೆರೆ ಲೋಕಸಭೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಪಟ್ಟಿಯಲ್ಲಿ ಬಾಗಲಕೋಟೆಯಿಂದ ವೀಣಾ ಕಾಶಪ್ಪನವರ್ ಮತ್ತು ಕೊಪ್ಪಳದಿಂದ ರಾಜಶೇಖರ್ ಹಿಟ್ನಾಳ್ ಸೇರಿದಂತೆ ಇತರರು ಅವಕಾಶವನ್ನ ನೀಡಲಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೇ 50 ರಷ್ಟು ರಾಜ್ಯದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಮತ್ತು ಎರಡು ಹಂತಗಳಲ್ಲಿ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಶಿವಕುಮಾರ್ ತಿಳಿಸಿದ್ದಾರೆ.
ಬಿಜೆಪಿ ತನ್ನ ಪಟ್ಟಿಯನ್ನು ಪ್ರಕಟಿಸಿದ ನಂತರ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯ ರಾಜಕೀಯಕ್ಕೂ ನಮ್ಮ ರಾಜಕೀಯಕ್ಕೂ ಬಹಳ ವ್ಯತ್ಯಾಸವಿದೆ. ಕಾಂಗ್ರೆಸ್ನಲ್ಲಿ ವ್ಯಕ್ತಿಗತವಾಗಿ ರಾಜಕೀಯ ಮಾಡುವುದಿಲ್ಲ. ನಾವು ಪಕ್ಷದ ಆಧಾರದಲ್ಲಿ, ನಮ್ಮ ಖಾತರಿ ಯೋಜನೆಗಳ ಮೇಲೆ ರಾಜಕೀಯ ಮಾಡುತ್ತೇವೆ. ಅವರ ಲೆಕ್ಕಾಚಾರವಿದ್ದರೆ ನಮಗೂ ನಮ್ಮದೇ ಎಂದು ಟೀಕಿಸಿದರು.
ಹಿರಿಯ ನಾಯಕರಾದ ಸೋನಿಯಾ ಗಾಂಧಿ, ಅಂಬಿಕಾ ಸೋನಿ, ಉತ್ತಮಕುಮಾರ್ ರೆಡ್ಡಿ, ಅಧೀರ್ ರಂಜನ್ ಚೌಧರಿ, ಸಲ್ಮಾನ್ ಖುರ್ಷೀದ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿಇಸಿ ಸದಸ್ಯ ಮತ್ತು ಕರ್ನಾಟಕ ಇಂಧನ ಸಚಿವ ಕೆಜೆ ಜಾರ್ಜ್ ಅವರು ಉನ್ನತ ಮಟ್ಟದ ಸಭೆಯಲ್ಲಿ ಉಪಸ್ಥಿತರಿದ್ದರು. ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಭಾಗವಹಿಸದಿದ್ದರೂ, ಅಭ್ಯರ್ಥಿಗಳ ಆಯ್ಕೆ ಕುರಿತು ಅವರ ಹೇಳಿಕೆಗೆ ಸೂಕ್ತ ಪರಿಗಣನೆ ನೀಡಲಾಗಿದೆ. ಈ ಸಭೆಯಲ್ಲಿ ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ 10 ರಾಜ್ಯಗಳ ಸುಮಾರು 60 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.












Click it and Unblock the Notifications