ಚುನಾವಣೆ ಕಾಲೇ ಲಾಲು ರಾಜಕೀಯ ನೆಲೆ ಶಿಥಿಲ
ಪಾಟ್ನಾ, ಫೆ.25- ಲೋಕಸಭಾ ಚುನಾವಣೆ ಸಮ್ಮುಖದಲ್ಲಿ ಬಿಹಾರ ರಾಜಕೀಯದಲ್ಲಿ ಧ್ರುವೀಕರಣ ಆರಂಭವಾಗಿದೆ. ರಾಜ್ಯ ವಿಧಾನಸಭೆಯಲ್ಲಿ ರಾಷ್ಟ್ರೀಯ ಜನತಾ ದಳದ 13 ಶಾಸಕರು ಪ್ರತಿಪಕ್ಷ ಸ್ಥಾನದಿಂದ ಎದ್ದುಹೋಗಿ ಆಡಳಿತಾರೂಢ ಜೆಡಿಯು ಪಕ್ಕದಲ್ಲಿ ಕುಳಿತಿದ್ದಾರೆ.
ಈ ಬೆಳವಣಿಗೆ ಅನಿರೀಕ್ಷಿತವಾದರೂ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯುಗೆ ಇದರಿಂದ ಒಳ್ಳೆಯದೇ ಆಗಿದೆ. ಆದರೆ ಕಡು ಭ್ರಷ್ಟಾಚಾರ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದರೂ ಜೈಲಿಂದ ಬಿಡುಗಡೆಗೊಂಡು ಲೋಕಸಭಾ ಚುನಾವಣೆ ವೇಳೆ ತಮ್ಮ ರಾಜಕೀಯ ವರಸೆ ಆರಂಭಿಸುವ ಲೆಕ್ಕಾಚಾರದಲ್ಲಿದ್ದ RJD ನಾಯಕ ಲಾಲು ಪ್ರಸಾದ್ ಯಾದವ್ ಗೆ ಇದರಿಂದ ಭಾರಿ ಹಿನ್ನಡೆಯಾಗಿದೆ. (ಚಿತ್ರದಲ್ಲಿ: RJDಯಿಂದ ಸಿಡಿದೆದ್ದು ಹೋದ ಶಾಸಕರು ನಿನ್ನೆ ರಾತ್ರಿ ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭ)

ಮೊನ್ನೆಯಷ್ಟೇ, ಒಂದು ಕಾಲದ ಆತ್ಮೀಯ ಗೆಳೆಯ ಲೋಕ ಜನಶಕ್ತಿ ಪಕ್ಷದ ಅಧಿನಾಯಕ ರಾಮ್ ವಿಲಾಸ್ ಪಾಸ್ವಾನ್ ಬಿಜೆಪಿಯತ್ತ ದಾಪುಗಾಲು ಹಾಕಿದ್ದು ಲಾಲೂಗೆ ಭಾರಿ ಹೊಡೆತ ನೀಡಿತ್ತು. ಅದನ್ನು ಅರಗಿಸಿಕೊಳ್ಳುವ ಮುನ್ನವೇ 13 ಶಾಸಕರು ವಿರೋಧಿ ಪಾಳಯದಲ್ಲಿ ಕಾಣಿಸಿಕೊಂಡಿದ್ದಾರೆ.
ಬಿಹಾರ ವಿಧಾನ ಸಭೆಯಲ್ಲಿರುವ 22 ಶಾಸಕರ ಪೈಕಿ 13 ಮಂದಿ ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿ, ಜೆಡಿಯುಗೆ ಬೆಂಬಲ ನೀಡಲಿದ್ದಾರೆ. ಆದರೆ 6 ಮಂದಿ ಶಾಸಕರು ತಮ್ಮ ಪಕ್ಷದಲ್ಲೇ ಹಿಡಿದಿಟ್ಟುಕೊಳ್ಳುವಲ್ಲಿ ಲಾಲು ಯಶಸ್ವಿಯಾಗಿದ್ದಾರೆ.
ಬಿಹಾರ ವಿಧಾನ ಸಭೆಯ ಸಂಖ್ಯಾ ಬಲ 243. ಇಲ್ಲಿನ ಮ್ಯಾಜಿಕ್ ಸಂಖ್ಯೆ 122. ಜೆಡಿಯು 116 ಸದಸ್ಯರನ್ನು ಹೊಂದಿದೆ. ಇಷ್ಟು ದಿನ ನಾಲ್ವರು ಕಾಂಗ್ರೆಸ್ ಶಾಸಕರು ಮತ್ತು ಒಬ್ಬ ಪಕ್ಷೇತರ ಅಭ್ಯರ್ಥಿಯಿಂದಾಗಿ ನಿತೀಶ್ ಸರಕಾರ ಉಸಿರಾಡುತ್ತಿತ್ತು. ಇದೀಗ 7 ಮಂದಿ RJD ಶಾಸಕರ ಬೆಂಬಲದಿಂದಾಗಿ ನಿತೀಶ್ ಕುಮಾರ್ ಬಹುಮತದಲ್ಲಿದ್ದಾರೆ.
JDU ಪಕ್ಷದ ನಿತೀಶ್ ಕುಮಾರ್ ಸಂಪುಟದಲ್ಲಿ 16 ಸ್ಥಾನಗಳು ಖಾಲಿಬಿದ್ದಿವೆ. ಜತೆಗೆ, ಲೋಕಸಭೆಗೆ ಅಭ್ಯರ್ಥಿಗಳನ್ನು ನಿಲ್ಲಿಸಬೇಕಾಗಿದೆ. ಅಲ್ಲಿಗೆ ಲಾಲು ಪ್ರಸಾದರ 13 ಶಾಸಕರನ್ನು ಅಕಾಮಡೇಟ್ ಮಾಡಿ, ಸೂಕ್ತ ಸ್ಥಾನಮಾನ ನೀಡುವುದು ಮುಖ್ಯಮಂತ್ರಿ ನಿತೀಶ್ ಅವರಿಗೆ ಕಷ್ಟವೇನೂ ಆಗದು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications