ವಿವಿಪ್ಯಾಟ್ ಹೆಚ್ಚಳದಿಂದ ಲೋಕಸಭೆ ಚುನಾವಣೆ ಫಲಿತಾಂಶ ವಿಳಂಬ
ನವದೆಹಲಿ, ಮೇ 08: ಲೋಕಸಭೆ ಚುನಾವಣೆ 2019ರಲ್ಲಿ ವಿದ್ಯುನ್ಮಾನ ಮತ ಯಂತ್ರಗಳೊಂದಿಗೆ (ಇವಿಎಂ) ಕನಿಷ್ಠ ಶೇ 50ರಷ್ಟು ವಿವಿಪ್ಯಾಟ್ ಚೀಟಿಗಳನ್ನು ಪರಿಶೀಲನೆಗೆ ಒಳಪಡಿಸಬೇಕು ಎಂಬ 21 ವಿರೋಧ ಪಕ್ಷಗಳ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ. ಆದರೆ, ವಿವಿಪ್ಯಾಟ್ ಹೆಚ್ಚಳದಿಂದ ಮೇ 23ರಂದು ಫಲಿತಾಂಶ ತಡವಾಗಿ ಪ್ರಕಟವಾಗುವ ಸಾಧ್ಯತೆಯಿದೆ ಅಥವಾ ಮೇ 24ರ ಮುಂಜಾನೆ ತನಕವೂ ಮತ ಎಣಿಕೆ ನಡೆಯುವ ಸಂಭವವಿದೆ ಎಂದು ವರದಿ ಬಂದಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಲೋಕಸಭೆ ಚುನಾವಣೆ ಏಪ್ರಿಲ್ 11ರಿಂದ ಮೇ 19ರ ತನಕ ಏಳು ಹಂತಗಳಲ್ಲಿ ದೇಶದೆಲ್ಲೆಡೆ ಆಯೋಜಿಸಲಾಗಿದೆ. ಮೇ.12ರಂದು ದೆಹಲಿ ಹಾಗೂ ಹರ್ಯಾಣ ಸೇರಿದಂತೆ 7 ರಾಜ್ಯಗಳ 59 ಸೀಟುಗಳಿಗೆ ಮತದಾನ ನಡೆಯಲಿದೆ. ಮೇ 19ರಂದು 8 ರಾಜ್ಯಗಳ 59 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.

ಮೇ 23 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಕೊಂಚ ತಡವಾಗಿ ಫಲಿತಾಂಶ ಹೊರ ಬೀಳಲಿದೆ, ನಾಲ್ಕೈದು ಗಂಟೆಗಳ ಕಾಲ ತಡವಾಗಬಹುದು ಎಂದು ಉಪ ಚುನಾವಣಾ ಆಯುಕ್ತ ಸುದೀಪ್ ಜೈನ್ ಹೇಳಿದ್ದಾರೆ. ಫಲಿತಾಂಶ ತಡವಾಗಲು ಇವಿಎಂ ಹಗೂ ವಿವಿಪ್ಯಾಟ್ ಹೆಚ್ಚಳವೇ ಕಾರಣ ಎಂದು ತಿಳಿದು ಬಂದಿದೆ. ಒಂದು ವಿವಿಪ್ಯಾಟ್ ಬದಲಿಗೆ ಐದು ಮಷಿನ್ ಗಳನ್ನು ಮ್ಯಾಚ್ ಮಾಡಬೇಕಾಗುತ್ತದೆ.
ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿನ ಒಂದರಿಂದ ಐದು ಮತಗಟ್ಟೆಗಳಿಂದ ಇವಿಎಂ ಜತೆ ವಿವಿಪ್ಯಾಟ್ ಚೀಟಿಗಳನ್ನು ಹೊಂದಿಸುವ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications