Get Updates
Get notified of breaking news, exclusive insights, and must-see stories!

ಸೋಮವಾರದಿಂದ ಲೋಕಸಭೆ ಅಧಿವೇಶನ: ಸ್ಪೀಕರ್ ಯಾರು?

ನವದೆಹಲಿ, ಜೂನ್ 23: ಲೋಕಸಭೆ ಚುನಾವಣೆ 2024ರ ಬಳಿಕ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರ ಸೋಮವಾರ ಆರಂಭವಾಗಲಿದೆ. ಲೋಕಸಭೆ ಸದಸ್ಯರ ಪ್ರಮಾಣ ವಚನ ಎರಡು ದಿನಗಳ ಕಾಲ ನಡೆಯಲಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಬಿಜೆಪಿ ನಾಯಕ ಮತ್ತು 7 ಅವಧಿಗೆ ಸದಸ್ಯರಾಗಿ ಆಯ್ಕೆಯಾದ ಭರ್ತೃಹರಿ ಮಹತಾಬ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ. ನೂತನ ಸದಸ್ಯರ ಪ್ರಮಾಣ ವಚನ ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿಯೇ ನಡೆಯಲಿದೆ.

Lok Sabha Session From June 24th Row Over Appointment Of Pro Trem Speaker

ಜೂನ್ 26ರಂದು ಲೋಕಸಭೆ ನೂತನ ಸ್ಪೀಕರ್ ಆಯ್ಕೆಗೆ ಚುನಾವಣೆ, ಜೂನ್ 27ರಂದು ಲೋಕಸಭೆ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಹಂಗಾಮಿ ಸ್ಪೀಕರ್ ಆಯ್ಕೆ ವಿಚಾರ ಕಲಾಪದಲ್ಲಿ ಕೋಲಾಹಲ ಎಬ್ಬಿಸುವ ನಿರೀಕ್ಷೆ ಇದೆ.

ಕಾಂಗ್ರೆಸ್ ಟೀಕೆ: ಪ್ರತಿಪಕ್ಷ ಕಾಂಗ್ರೆಸ್ ಭರ್ತೃಹರಿ ಮಹತಾಬ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದೆ. ಕಾಂಗ್ರೆಸ್‌ನ ಕೆ. ಸುರೇಶ್ ಆಯ್ಕೆ ಮಾಡಬೇಕಿತ್ತು. ಆದರೆ ಆಡಳಿತ ಪಕ್ಷ ಸಂಪ್ರದಾಯವನ್ನು ಮುರಿದಿದೆ ಎಂಬುದು ಪ್ರತಿಪಕ್ಷದ ಆರೋಪವಾಗಿದೆ.

ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕಿರಣ್ ರಿಜಿಜು ಮಾತನಾಡಿ, "ಭರ್ತೃಹರಿ ಮಹತಾಬ್ 7 ಬಾರಿ ನಿರಂತರವಾಗಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕೆ. ಸುರೇಶ್ 1998, 2004ರಲ್ಲಿ ಸೋಲು ಅನುಭವಿಸಿದ್ದರು. ಅವರು ಒಟ್ಟು 4 ಬಾರಿ ಲೋಕಸಭೆಗೆ, ಎರಡು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ" ಎಂದು ಹೇಳಿದ್ದಾರೆ.

ಸೋಮವಾರ ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಭರ್ತೃಹರಿ ಮಹತಾಬ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಲೋಕಸಭೆಯ ಕಲಾಪ ಆರಂಭವಾಗಲಿದೆ.

ಲೋಕಸಭೆ ಕಾರ್ಯದರ್ಶಿ ಉತ್ಕಲ್ ಕುಮಾರ್ ಸಿಂಘ್ ಮತ್ತು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ನೇತೃತ್ವದಲ್ಲಿ ಲೋಕಸಭೆಯ ಎಲ್ಲಾ ಸದಸ್ಯರ ಪ್ರಮಾಣ ವಚನ ನಡೆಯಲಿದೆ. ಲೋಕಸಭೆಯ ನಾಯಕ, ಪ್ರಧಾನಿ ನರೇಂದ್ರ ಮೋದಿ ಮೊದಲು ವಾರಣಾಸಿಯ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಕಾಂಗ್ರೆಸ್‌ನ ಕೆ. ಸುರೇಶ್, ಡಿಎಂಕೆಯ ಟಿ. ಆರ್. ಬಾಲು, ಬಿಜೆಪಿಯ ರಾಧಾ ಮೋಹನ್ ಸಿಂಗ್, ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ ಅವರನ್ನು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಸಹಾಯಕರಾಗಿ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ನೇಮಿಸಲಾಗಿದೆ.

ಬುಧವಾರ ಲೋಕಸಭೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಬಳಿಕ ಪ್ರಧಾನಿ ನರೇಂದ್ರ ಮೋದಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದು, ತಮ್ಮ ಸಂಪುಟದ ಸಚಿವರನ್ನು ಸದನಕ್ಕೆ ಪರಿಚಯಿಸಲಿದ್ದಾರೆ.

ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದು, ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಜುಲೈ 28ರಂದು ಚರ್ಚೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸದನವನ್ನು ಉದ್ದೇಶಿಸಿ ಜುಲೈ 2 ಅಥವ 3ರಂದು ಉತ್ತರ ನೀಡಲಿದ್ದಾರೆ.

ಸದಸ್ಯರ ಪ್ರಮಾಣ ವಚನ, ರಾಷ್ಟ್ರಪತಿಗಳ ಭಾಷಣ, ಪ್ರಧಾನಿಗಳ ಉತ್ತರದ ಬಳಿಕ ಲೋಕಸಭೆ, ರಾಜ್ಯಸಭೆ ಕಲಾಪ ಮುಕ್ತಾಯವಾಗಲಿದೆ. ಹೊಸದಾಗಿ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ಸರ್ಕಾರ 2024-25ನೇ ಸಾಲಿನ ಬಜೆಟ್ ಮಂಡಿಸಬೇಕಿದೆ. ಜುಲೈ 22ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ.

ಲೋಕಸಭೆ ಸ್ಪೀಕರ್ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ. ಬಿಜೆಪಿ ಎನ್‌ಡಿಎ ಮೈತ್ರಿಕೂಟ ಪಕ್ಷಗಳ ಜೊತೆ ಸಮನ್ವಯ ಸಾಧಿಸಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ಟಿಡಿಪಿ & ಜೆಡಿಯು ಸ್ಪೀಕರ್ ಹುದ್ದೆಗಾಗಿ ಬೇಡಿಕೆ ಇಟ್ಟಿವೆ. ಆದ್ದರಿಂದ ಇನ್ನೂ ಅಂತಿಮ ತೀರ್ಮಾನವಾಗಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+