ನೂತನ ಸಂಸತ್ ಭವನದಲ್ಲೇ ಚಳಿಗಾಲ ಅಧಿವೇಶನ: ಓಂ ಬಿರ್ಲಾ
ನವದೆಹಲಿ, ಜೂನ್ 19: ಸಂಸತ್ತಿನ ಹೊಸ ಕಟ್ಟಡದಲ್ಲಿ ಚಳಿಗಾಲದ ಅಧಿವೇಶನವನ್ನು ಪ್ರಾರಂಭಿಸುವುದು ನಮ್ಮ ಪ್ರಯತ್ನವಾಗಿದೆ. ನೂತನ ಕಟ್ಟಡವು ಸ್ವಾವಲಂಬಿ ಭಾರತದ ಚಿತ್ರವನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಓಂ ಬಿರ್ಲಾ, ಸಂಸತ್ ಭವನದ ಉತ್ಪಾದಕತೆ ಹೆಚ್ಚಾಗಲಿದೆ ಎಂದರು. "ಎಲ್ಲರ ಸಹಕಾರದಿಂದ ಸದನದ ಉತ್ಪಾದಕತೆ ಹೆಚ್ಚಿದೆ, ತಡರಾತ್ರಿಯವರೆಗೆ ಕಲಾಪ ನಡೆಸಲಾಗುತ್ತದೆ ಎಂದು ಹೇಳಿದರು.
"ತಾಂತ್ರಿಕ ಮತ್ತು ಭದ್ರತಾ ದೃಷ್ಟಿಕೋನದಿಂದ ಈ ಹೊಸ ಕಟ್ಟಡವು ಹಳೆಯ ಸಂಸತ್ತಿನ ಕಟ್ಟಡಕ್ಕಿಂತ ಬಹಳ ಮುಂದಿದೆ. ಆದರೆ ಸಂಸತ್ತಿನ ಹಳೆಯ ಕಟ್ಟಡವು ಅದರ ಭಾಗವಾಗಿ ಉಳಿಯುತ್ತದೆ," ಎಂದರು.

ಸುಗಮ ಕಲಾಪ ನಡೆಸುವುದಕ್ಕೆ ಓಂ ಬಿರ್ಲಾ ಮನವಿ: ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳು ತಮ್ಮ ತಮ್ಮ ನಾಯಕರೊಂದಿಗೆ ಚರ್ಚೆ ನಡೆಸಬೇಕು ಎಂದು ಓಂ ಬಿರ್ಲಾ ಹೇಳಿದ್ದಾರೆ. ಅಲ್ಲದೇ "ಕಾಲಕಾಲಕ್ಕೆ ಪಕ್ಷದ ನಾಯಕರ ಜೊತೆ ಮಾತನಾಡುತ್ತೇನೆ, ಸದನ ಸುಗಮವಾಗಿ ನಡೆಯಬೇಕು, ಶಿಸ್ತು, ಸೌಹಾರ್ದತೆ ಕಾಪಾಡಬೇಕು. ಅವರ ಸಹಕಾರದಿಂದ ಸದನದಲ್ಲಿ ಉತ್ಪಾದಕತೆ ಮತ್ತು ಚರ್ಚೆಯ ಮಟ್ಟ ಗಣನೀಯವಾಗಿ ಹೆಚ್ಚಿದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ನೂತನ ಸಂಸತ್ ಭವನಕ್ಕೆ ಅಬ್ದುಲ್ ಕಲಾಂ ಹೆಸರು: ದೇಶದ ಕೋಮು ಸೌಹಾರ್ದತೆಯ ಕುರಿತು ಸಂದೇಶ ರವಾನಿಸಲು ಹೊಸ ಸಂಸತ್ ಭವನಕ್ಕೆ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಹೆಸರನ್ನು ಇಡುವಂತೆ ಮೇ ತಿಂಗಳಲ್ಲಿ ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿಕೊಂಡಿತ್ತು. ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಕಾರ, ಈ ವರ್ಷದ ಅಕ್ಟೋಬರ್ ವೇಳೆಗೆ ನೂತನ ಸಂಸತ್ ಭವನದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications