ನೂತನ ಸಂಸತ್ ಭವನದಲ್ಲೇ ಚಳಿಗಾಲ ಅಧಿವೇಶನ: ಓಂ ಬಿರ್ಲಾ
ನವದೆಹಲಿ, ಜೂನ್ 19: ಸಂಸತ್ತಿನ ಹೊಸ ಕಟ್ಟಡದಲ್ಲಿ ಚಳಿಗಾಲದ ಅಧಿವೇಶನವನ್ನು ಪ್ರಾರಂಭಿಸುವುದು ನಮ್ಮ ಪ್ರಯತ್ನವಾಗಿದೆ. ನೂತನ ಕಟ್ಟಡವು ಸ್ವಾವಲಂಬಿ ಭಾರತದ ಚಿತ್ರವನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಓಂ ಬಿರ್ಲಾ, ಸಂಸತ್ ಭವನದ ಉತ್ಪಾದಕತೆ ಹೆಚ್ಚಾಗಲಿದೆ ಎಂದರು. "ಎಲ್ಲರ ಸಹಕಾರದಿಂದ ಸದನದ ಉತ್ಪಾದಕತೆ ಹೆಚ್ಚಿದೆ, ತಡರಾತ್ರಿಯವರೆಗೆ ಕಲಾಪ ನಡೆಸಲಾಗುತ್ತದೆ ಎಂದು ಹೇಳಿದರು.
"ತಾಂತ್ರಿಕ ಮತ್ತು ಭದ್ರತಾ ದೃಷ್ಟಿಕೋನದಿಂದ ಈ ಹೊಸ ಕಟ್ಟಡವು ಹಳೆಯ ಸಂಸತ್ತಿನ ಕಟ್ಟಡಕ್ಕಿಂತ ಬಹಳ ಮುಂದಿದೆ. ಆದರೆ ಸಂಸತ್ತಿನ ಹಳೆಯ ಕಟ್ಟಡವು ಅದರ ಭಾಗವಾಗಿ ಉಳಿಯುತ್ತದೆ," ಎಂದರು.

ಸುಗಮ ಕಲಾಪ ನಡೆಸುವುದಕ್ಕೆ ಓಂ ಬಿರ್ಲಾ ಮನವಿ: ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳು ತಮ್ಮ ತಮ್ಮ ನಾಯಕರೊಂದಿಗೆ ಚರ್ಚೆ ನಡೆಸಬೇಕು ಎಂದು ಓಂ ಬಿರ್ಲಾ ಹೇಳಿದ್ದಾರೆ. ಅಲ್ಲದೇ "ಕಾಲಕಾಲಕ್ಕೆ ಪಕ್ಷದ ನಾಯಕರ ಜೊತೆ ಮಾತನಾಡುತ್ತೇನೆ, ಸದನ ಸುಗಮವಾಗಿ ನಡೆಯಬೇಕು, ಶಿಸ್ತು, ಸೌಹಾರ್ದತೆ ಕಾಪಾಡಬೇಕು. ಅವರ ಸಹಕಾರದಿಂದ ಸದನದಲ್ಲಿ ಉತ್ಪಾದಕತೆ ಮತ್ತು ಚರ್ಚೆಯ ಮಟ್ಟ ಗಣನೀಯವಾಗಿ ಹೆಚ್ಚಿದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ನೂತನ ಸಂಸತ್ ಭವನಕ್ಕೆ ಅಬ್ದುಲ್ ಕಲಾಂ ಹೆಸರು: ದೇಶದ ಕೋಮು ಸೌಹಾರ್ದತೆಯ ಕುರಿತು ಸಂದೇಶ ರವಾನಿಸಲು ಹೊಸ ಸಂಸತ್ ಭವನಕ್ಕೆ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಹೆಸರನ್ನು ಇಡುವಂತೆ ಮೇ ತಿಂಗಳಲ್ಲಿ ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿಕೊಂಡಿತ್ತು. ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಕಾರ, ಈ ವರ್ಷದ ಅಕ್ಟೋಬರ್ ವೇಳೆಗೆ ನೂತನ ಸಂಸತ್ ಭವನದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications