ಲೋಕಪಾಲರ ನೇಮಕ: ಕೇಂದ್ರದ ಶೋಧನಾ ಸಮಿತಿಯಲ್ಲಿ ಇಬ್ಬರು ಕನ್ನಡಿಗರು
ನವದೆಹಲಿ, ಸೆಪ್ಟೆಂಬರ್ 28: ಲೋಕಪಾಲದ ಅಧ್ಯಕ್ಷರು ಮತ್ತು ಸದಸ್ಯರ ಸ್ಥಾನಕ್ಕೆ ಅರ್ಹರ ಹೆಸರನ್ನು ಶಿಫಾರಸು ಮಾಡಲು ಕೇಂದ್ರ ಸರ್ಕಾರ ಕೊನೆಗೂ ಸಮಿತಿಯೊಂದನ್ನು ರಚಿಸಿದೆ.
ಲೋಕಪಾಲ್ ಹುದ್ದೆಗೆ ಅರ್ಹರನ್ನು ಶಿಫಾರಸು ಮಾಡುವ ಸಂಬಂಧ ರಚಿಸಿರುವ ಶೋಧನಾ ಮತ್ತು ಆಯ್ಕೆ ಸಮಿತಿಗೆ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಒಟ್ಟು ಎಂಟು ಸದಸ್ಯರ ಈ ಸಮಿತಿ ಕನ್ನಡಿಗರಾದ ಪ್ರಸಾರ ಭಾರತಿ ಅಧ್ಯಕ್ಷ ಎ. ಸೂರ್ಯಪ್ರಕಾಶ್ ಮತ್ತು ಇಸ್ರೋದ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್ ಅವರನ್ನು ಒಳಗೊಂಡಿದೆ.
ಎಸ್ಬಿಐ ಮಾಜಿ ಅಧ್ಯಕ್ಷೆ ಅರುಂಧತಿ ಭಟ್ಟಾಚಾರ್ಯ, ಗುಜರಾತ್ ಪೊಲೀಸ್ ಇಲಾಖೆ ಮಾಜಿ ಮುಖ್ಯಸ್ಥ ಶಬ್ಬೀರ್ ಹುಸೇನ್ ಎಸ್. ಖಾಂಡ್ವಾವಾಲಾ, ಅಲಹಾಬಾದ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸುಖರಾಮ್ ಸಿಂಗ್ ಯಾದವ್, ರಣಜಿತ್ ಕುಮಾರ್ ಮತ್ತು ರಾಜಸ್ಥಾನ ಕೇಡರ್ನ ನಿವೃತ್ತ ಐಎಎಸ್ ಅಧಿಕಾರಿ ಲಲಿತ್ ಕೆ. ಪನ್ವಾರ್ ಈ ಸಮಿತಿಯಲ್ಲಿರುವ ಇತರೆ ಸದಸ್ಯರು.

ಲೋಕಪಾಲ ಕಾಯ್ದೆಯ ಮಾರ್ಗದರ್ಶಿ ಸೂತ್ರಕ್ಕೆ ಅನುಗುಣವಾಗಿ ಲೋಕಪಾಲ ಆಯ್ಕೆಯ ಪ್ರಕ್ರಿಯೆ ನಡೆಯಲಿದೆ ಎಂದು ಸಮಿತಿಯನ್ನು ರಚಿಸಿರುವ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಇಲಾಖೆಗಳ ಸಚಿವಾಲಯ ಹಾಗೂ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತಿಳಿಸಿದೆ.
ಲೋಕಪಾಲರ ನೇಮಕಾತಿ ವಿಚಾರದಲ್ಲಿ ಶೋಧನಾ ಸಮಿತಿ ನೇಮಕ ಪ್ರಮುಖ ಹೆಜ್ಜೆಯಾಗಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಲೋಕಪಾಲ ಆಯ್ಕೆ ಸಮಿತಿ ಸಭೆಗಳಿಗೆ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬಹಿಷ್ಕಾರ ಮಾಡಿರುವ ನಡುವೆಯೂ ಸರ್ಕಾರ ಶೋಧನಾ ಸಮಿತಿ ರಚನೆಗೆ ನಿರ್ಧರಿಸಿದೆ.
Search committee # Lokpal should include leader of opposition. Leader of opposition is leader of party with at least 10% of total seats. None qualifies for that. Hence, it's doubtful anything can be achieved. Congress immediately will put a spanner in it.
— shib (@ShibMaitra) 28 September 2018
ಲೋಕಪಾಲ ಕಾಯ್ದೆಯನ್ನು ಅಂಗೀಕರಿಸಿ ನಾಲ್ಕು ವರ್ಷಗಳಾದ ಬಳಿಕ ಶೋಧನಾ ಸಮಿತಿಯನ್ನು ರಚಿಸಲಾಗಿದೆ. ಲೋಕಪಾಲ ಆಯ್ಕೆ ಸಮಿತಿಗೆ ತಮ್ಮನ್ನು ಪೂರ್ಣ ಪ್ರಮಾಣದ ಸದಸ್ಯರನ್ನಾಗಿ ಮಾಡದ ಕಾರಣಕ್ಕೆ ಖರ್ಗೆ ಸಮಿತಿ ಸಭೆಗಳನ್ನು ಬಹಿಷ್ಕರಿಸಿದ್ದಾರೆ.
ಈ ವರ್ಷ ಆರು ಬಾರಿ ನಡೆದ ಸಭೆಗಳಿಗೆ ನೀಡಿದ್ದ ವಿಶೇಷ ಆಹ್ವಾನಗಳನ್ನೂ ಅವರು ತಿರಸ್ಕರಿಸಿದ್ದರು.
ಎಂಟು ಸದಸ್ಯರ ಸಮಿತಿಯು ಲೋಕಪಾಲ ಮತ್ತು ಅದರ ಸದಸ್ಯರ ನೇಮಕಕ್ಕಾಗಿ ಸೂಕ್ತ ವ್ಯಕ್ತಿಗಳ ಹೆಸರನ್ನು ಶಿಫಾರಸು ಮಾಡಲಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications