Maharashtra opinion poll: ಎನ್ಡಿಎಗೆ 'ಮಹಾ' ಆಘಾತ- ಚುನಾವಣಾ ಪೂರ್ವ ಸಮೀಕ್ಷೆಯ ಅಂಕಿಅಂಶ, ವಿವರ
2024ರ ನವೆಂಬರ್, ಡಿಸೆಂಬರ್ ತಿಂಗಳಿನಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲಾ ಪ್ರಮುಖ ಪಕ್ಷಗಳು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ. ಆಡಳಿತಾರೂಢ ಎನ್ಡಿಎ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯುವ ಕನಸು ಕಾಣುತ್ತಿದ್ದು, ಈ ಬಾರಿ ಆಘಾತ ಎದುರಾಗುವ ಸೂಚನೆ ಸಿಕ್ಕಿದೆ. ಲೋಕ್ಪೋಲ್ ಚುನಾವಣಾ ಪೂರ್ವ ಸಮೀಕ್ಷೆ ಇಂದು ಪ್ರಕಟವಾಗಿದ್ದು, ಎನ್ಡಿಎಗೆ ಹಿನ್ನಡೆಯಾಗಲಿದೆ ಎಂದು ಹೇಳಿದೆ.
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಲೋಕ್ಪೋಲ್ ಬಹುತೇಕ ನಿಖರ ಅಂಕಿ ಅಂಶಗಳನ್ನು ನೀಡಿತ್ತು. ಲೋಕ್ ಪೋಲ್ ಸಮೀಕ್ಷೆಯಲ್ಲಿ ಹೇಳಿದ ಅಂಕಿಗಳಲ್ಲಿ ಅಲ್ಪ ವ್ಯತ್ಯಾಸವಾಗಿದ್ದರೂ, ಬೇರೆ ಸಮೀಕ್ಷೆಗಳಿಗಿಂತ ನಿಖರವಾಗಿತ್ತು. ಇದೇ ಕಾರಣಕ್ಕೆ ಇದೀಗ ಮಹಾರಾಷ್ಟ್ರ ವಿಧಾನಸಭೆ ಚುನಾವಣ ಪೂರ್ವ ಸಮೀಕ್ಷೆಯಲ್ಲಿ ಅವರು ನೀಡಿರುವ ಅಂಕಿ ಅಂಶ ಮಹತ್ವ ಪಡೆದುಕೊಂಡಿದೆ.

ಲೋಕ್ ಪೋಲ್ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ ಅಘಾಡಿ 141 ರಿಂದ 154 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತದೆ ಎಂದು ಅಂದಾಜಿಸಿದೆ. ಇನ್ನು ಆಡಳಿತಾರೂಢ ಎನ್ಡಿಎ 115 ರಿಂದ 128 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಿದೆ. ಇತರೆ ಅಥವಾ ಸ್ವತಂತ್ರ ಅಭ್ಯರ್ಥಿಗಳು 5 ರಿಂದ 18 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿಸಿದೆ.
288 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲು 145 ಸದಸ್ಯರ ಬಲ ಬೇಕಾಗಿದೆ. ಈ ಲೆಕ್ಕಾಚಾರದಲ್ಲಿ ಮಹಾ ವಿಕಾಸ ಅಘಾಡಿ ಸರಳ ಬಹುಮತ ಪಡೆಯಬಹುದು ಎಂದು ಸಮೀಕ್ಷೆ ಹೇಳಿದೆ. ಆದರೆ ಇಷ್ಟು ಸ್ಥಾನ ಪಡೆದರೆ ಸುಭದ್ರ ಸರ್ಕಾರ ರಚನೆ ಮಾಡುವುದು ಕಷ್ಟವಾಗುತ್ತದೆ. ಮತ್ತೊಮ್ಮೆ ರಾಜಕೀಯ ಹೈಡ್ರಾಮ ನಡೆಯುವ ಸಾಧ್ಯತೆ ಕೂಡ ಅಲ್ಲಗಳೆಯುವಂತಿಲ್ಲ.
ಲೋಕ್ಪೋಲ್ ಮಹಾರಾಷ್ಟ್ರದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 500 ಮಾದರಿಗಳಂತೆ ಒಟ್ಟು 1.50 ಲಕ್ಷ ಜನರ ಅಭಿಪ್ರಾಯ ಸಂಗ್ರಹಿಸಿದೆ. ಚುನಾವಣೆಗೆ ಇನ್ನೂ ಎರಡು ತಿಂಗಳು ಬಾಕಿ ಇರುವ ಕಾರಣ ಜನಾಭಿಪ್ರಾಯ ಎತ್ತ ಕಡೆ ಬೇಕಾದರೂ ವಾಲಬಹುದಾಗಿದೆ. ಏಕನಾಥ್ ಶಿಂಧೆ ಅವರ ಸರ್ಕಾರ ಮಹಾರಾಷ್ಟ್ರದ ಜನರ ಮನಸ್ಸು ಗೆಲ್ಲುವಲ್ಲಿ ವಿಫಲವಾಗಿದೆ ಎನ್ನುವುದು ಮಾತ್ರ ಈ ಸಮೀಕ್ಷೆಯಿಂದ ಸಾಬೀತಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಹಲವು ಪ್ರಮುಖ ಬಿಜೆಪಿ ನಾಯಕರು ಈಗಾಗಲೇ ಮಹಾರಾಷ್ಟ್ರ ಚುನಾವಣೆಯತ್ತ ಗಮನ ಹರಿಸಿದ್ದಾರೆ. ಕಾಂಗ್ರೆಸ್ ಕೂಡ ಚುನಾವಣಾ ಅಖಾಡಕ್ಕೆ ಧುಮುಕಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications