ಚೀನಾ ಬಂದರಿನಿಂದ ನಾವಿಕರನ್ನು ಕರೆತರಲು ವಿವಿಧ ಆಯ್ಕೆಗಳ ಪರಿಶೀಲನೆ
ನವದೆಹಲಿ, ಜನವರಿ 1: ಚೀನಾದ ಬಂದರಿನಲ್ಲಿ ಹಲವು ತಿಂಗಳಿನಿಂದ ಸಿಲುಕಿರುವ ಭಾರತದ 39 ನಾವಿಕರನ್ನು ಮರಳಿ ತಾಯ್ನಾಡಿಗೆ ಕರೆತರಲು ವಿವಿಧ ಆಯ್ಕೆಗಳನ್ನು ಪರಿಶೀಲಿಸುತ್ತಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಆಸ್ಟ್ರೇಲಿಯಾದಿಂದ ಕಲ್ಲಿದ್ದಲು ತರುತ್ತಿದ್ದ ಎಂವಿ ಜಗ್ ಆನಂದ್ ಮತ್ತು ಎಂವಿ ಅನಸ್ತೇಷ್ಯಾ ಹಡಗಿನಲ್ಲಿರುವ ಭಾರತದ ನಾವಿಕರನ್ನು ಚೀನಾದ ಬಂದರಿನಲ್ಲಿಯೇ ಇರಿಸಲಾಗಿದೆ. ಅವರಿಗೆ ತಮ್ಮ ಸರಕನ್ನು ತೆರವುಗೊಳಿಸಲು ಕೂಡ ಅವಕಾಶ ನೀಡಿಲ್ಲ. ಚೀನಾ-ಆಸ್ಟ್ರೇಲಿಯಾ ವ್ಯಾಪಾರ ಬಿಕ್ಕಟ್ಟು ಮತ್ತು ಭಾರತ-ಚೀನಾ ಗಡಿ ಬಿಕ್ಕಟ್ಟು ಎರಡೂ ಅಂಶಗಳು ಇದಕ್ಕೆ ಕಾರಣ ಎನ್ನಲಾಗಿದೆ.
ಈ ವಿಚಾರವನ್ನು ಚೀನಾ ರಾಯಭಾರ ಕಚೇರಿ ಮತ್ತು ಸ್ಥಳೀಯ ಪ್ರಾಂತ್ಯ ಅಧಿಕಾರಿಗಳೊಂದಿಗೆ ಪ್ರಸ್ತಾಪಿಸಲಾಗಿದ್ದು, ಹಡಗನ್ನು ಬಂದರಿನಲ್ಲಿ ನಿಲ್ಲಿಸಲು ಅಥವಾ ಸಿಬ್ಬಂದಿಯನ್ನು ಬದಲಿಸಲು ಅವಕಾಶ ನೀಡುವಂತೆ ಕೋರಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ತಿಳಿಸಿದ್ದಾರೆ.

'ಸರಗು ಸಾಗಣೆ ಕಂಪೆನಿಗಳು ಹಡಗುಗಳು ಈಗಿರುವ ಸ್ಥಳದಿಂದ ಸರಕುಗಳನ್ನು ಬೇರೆಡೆಗೆ ಸಾಗಿಸುವ ಕುರಿತು ಪರಿಶೀಲನೆ ನಡೆಸುತ್ತಿವೆ. ನಮ್ಮ ರಾಯಭಾರ ಕಚೇರಿಯು ಸಿಬ್ಬಂದಿ ಬದಲಾವಣೆಗೆ ಅನುಮತಿ ನೀಡುವಂತೆ ಟಿಯಾಂಜಿನ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದೆ' ಎಂದು ಅವರು ಹೇಳಿದ್ದಾರೆ.
ವಿಭಿನ್ನ ದೇಶಗಳ ಅನೇಕ ಹಡಗುಗಳು ಕೂಡ ತಮ್ಮ ಸರಕುಗಳನ್ನು ಚೀನಾ ಬಂದರಿನಲ್ಲಿ ಇಳಿಸಲು ತಮ್ಮ ಸರದಿಗಾಗಿ ಕಾಯುತ್ತಿವೆ. ಅಲ್ಲಿಂದ ತೆರಳಲು ಅನುಮತಿ ನೀಡದ ಕಾರಣ ವಿಳಂಬವಾಗುತ್ತಿರುವುದು ನಾವಿಕರ ಮೇಲೆ ಒತ್ತಡ ಹೆಚ್ಚಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications