'ಇಂಧನ ಬೆಲೆ ಇಳಿಸದಿದ್ದರೆ ಅನಿರ್ದಿಷ್ಟ ಮುಷ್ಕರ ನಡೆಸುತ್ತೇವೆ' ಎಂದ ಲಾರಿ ಮಾಲೀಕರು
ನವದೆಹಲಿ, ಜು.22: ದಕ್ಷಿಣ ವಲಯದ ಮೋಟಾರು ಸಾಗಣೆದಾರರ ಕಲ್ಯಾಣ ಸಂಘ (ಸಿಮ್ಟಾ) ಆಗಸ್ಟ್ 9 ರೊಳಗೆ ಡೀಸೆಲ್ ಬೆಲೆಯನ್ನು ಕಡಿಮೆ ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದೆ. ಒಂದು ವೇಳೆ ಸರ್ಕಾರ ಡಿಸೇಲ್ ಬೆಲೆ ಇಳಿಕೆ ಮಾಡುವಲ್ಲಿ ವಿಫಲವಾದರೆ ಸಂಘವು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಹೇಳಿದೆ.
ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ ದಕ್ಷಿಣ ರಾಜ್ಯಗಳ ಲಾರಿ ಮಾಲೀಕರ ಉನ್ನತ ಸಂಸ್ಥೆಯಾಗಿರುವ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್. ಷಣ್ಮುಗಪ್ಪ, "ಆಗಸ್ಟ್ 9 ರೊಳಗೆ ಡೀಸೆಲ್ ಬೆಲೆಯನ್ನು ಕಡಿಮೆ ಮಾಡುವಂತೆ ಸರ್ಕಾರಕ್ಕೆ ಗಡುವು ನೀಡಿದ್ದೇವೆ. ಸರ್ಕಾರ ಬೆಲೆ ಇಳಿಕೆ ಮಾಡದಿದ್ದರೆ ಸಂಘವು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದೆ," ಎಂದು ತಿಳಿಸಿದ್ದಾರೆ.
"ಕಳೆದ ಒಂದು ವರ್ಷದಲ್ಲಿ ಡೀಸೆಲ್ ಬೆಲೆ ಲೀಟರ್ಗೆ 28 ರು. ಹೆಚ್ಚಾಗಿದೆ ಹಾಗೂ ಬೆಲೆಯು 36 ಬಾರಿ ಹೆಚ್ಚಳವಾಗಿದೆ," ಎಂದು ಬುಧವಾರ ಈರೋಡ್ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್. ಷಣ್ಮುಗಪ್ಪ ಹೇಳಿದರು.

"ದಕ್ಷಿಣ ಭಾರತದ ರಾಜ್ಯಗಳ 26 ಲಕ್ಷ ಲಾರಿಗಳಲ್ಲಿ, ಏಳು ಲಕ್ಷಕ್ಕಿಂತ ಕಡಿಮೆ ಲಾರಿಗಳನ್ನು ಅಗತ್ಯ ಸೇವೆಗಳಿಗಾಗಿ ನಿರ್ವಹಿಸಲಾಗಿದ್ದರೆ, ಈ ದರ ಏರಿಕೆಯಿಂದಾಗಿ 40% ಕ್ಕಿಂತ ಹೆಚ್ಚು ಲಾರಿಗಳನ್ನು ನಿರ್ವಹಿಸಲು ಸಾಧ್ಯವಿಲ್ಲ," ಎಂದರು.
"ಎರಡೂ ಸರ್ಕಾರಗಳು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡಬೇಕು ಮತ್ತು ಬೆಲೆಯನ್ನು ಕಡಿಮೆ ಮಾಡಬೇಕು," ಎಂದು ಹೇಳಿದ ಷಣ್ಮುಗಪ್ಪ, ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಡೀಸೆಲ್ ಬೆಲೆಯನ್ನು 4 ರಷ್ಟು ಇಳಿಸುವ ಭರವಸೆಯನ್ನು ಪೂರೈಸುತ್ತಾರೆ ಎಂದಿದ್ದಾರೆ.
"ತಮಿಳುನಾಡಿನಲ್ಲಿ 33 ಸೇರಿದಂತೆ ದೇಶಾದ್ಯಂತ 571 ಟೋಲ್ ಪ್ಲಾಜಾಗಳಲ್ಲಿ ಟೋಲ್ ಶುಲ್ಕ ಸಂಗ್ರಹಿಸುವ ಪರವಾನಗಿ ಒಪ್ಪಂದದ ಅವಧಿ ಮುಗಿದಿದೆ. ಆದರೆ ಶುಲ್ಕವನ್ನು ಆ ಟೋಲ್ ಪ್ಲಾಜಾಗಳಲ್ಲಿ ಸಂಗ್ರಹಿಸುತ್ತಿದೆ," ಎಂದು ಈ ವೇಳೆಯೇ ಜಿ.ಆರ್. ಷಣ್ಮುಗಪ್ಪ ಉಲ್ಲೇಖಿಸಿದ್ದಾರೆ.
ಈ ದರ ಏರಿಕೆ ವಿಚಾರದಲ್ಲಿ ಸರ್ಕಾರ ನಮ್ಮನ್ನು ಮಾತುಕತೆಗೆ ಆಹ್ವಾನಿಸಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಬೇಕು, ಸರ್ಕಾರ ಮಾತುಕತೆ ನಡೆಸಲು ವಿಫಲವಾದರೆ, ನಾವು ಸಭೆ ನಡೆಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುತ್ತೇವೆ," ಎಂದು ಎಚ್ಚರಿಕೆ ನೀಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications